ಯಲಬುರ್ಗಾ: ಪಟ್ಟಣದ 5ನೇ ವಾರ್ಡಿನ ಸರ್ಕಾರಿ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡ ಕಟ್ಟಡವನ್ನು ಶುಕ್ರವಾರ ಪಪಂ ಮುಖ್ಯಾಧಿಕಾರಿ ನಾಗೇಶ ನೇತೃತ್ವದಲ್ಲಿ ಜೆಸಿಬಿ ಮೂಲಕ ತೆರವು ಮಾಡಲಾಯಿತು.
ಎರಡೂ ಮನೆಗಳ ದಾಖಲೆಗಳನ್ನು ಪರಿಶೀಲಿಸಿಲನೆ ವೇಳೆ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವುಗಳನ್ನೂ ತೆರವುಗೊಳಿಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳಿಕ ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಪಟ್ಟಣದಲ್ಲಿ ಯಾರೇ ಆಗಲಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ೫ನೇ ವಾರ್ಡಿನ ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವನ್ನು ತೆರವು ಮಾಡಲಾಗಿದೆ. ಪಟ್ಟಣದ ಜನರು ಸರ್ಕಾರಿ ಜಾಗವನ್ನು ಯಾವುದೇ ಕಾರಣಕ್ಕೂ ಒತ್ತುವರಿ ಮಾಡಬಾರದು. ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ಯಾರೇ ಆಗಿರಲಿ, ತೆರವು ಜತೆಗೆ ದಂಡವನ್ನು ವಿಧಿಸುವುದು ಮತ್ತು ಮುನ್ಸಿಪಲ್ ಕಾಯ್ದೆ ಪ್ರಕಾರ ೯೬೪ಕಲಂ ೧೮೮ರ ಪ್ರಕಾರ ಕ್ರಮ ವಹಿಸಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಪಿಎಸ್ಐ ಗುಲಾಮ್ ಅಹ್ಮದ್, ಎಜಿನಿಯರ್ ಉಮೇಶ್ ಬೇಲಿ, ಸಿಬ್ಬಂದಿಗಳಾದ ರಮೇಶ್ ಬೇಲೇರಿ, ಕನಕಪ್ಪ, ಶಿವಕುಮಾರ್ ಸರಗಣಾಚಾರ್ ಮತ್ತಿತರರು ಇದ್ದರು.