ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನೋತ್ಸವ ಪ್ರಯುಕ್ತ ಸೇವಾ ಸಂಕಲ್ಪ ದಿನ, ರಕ್ತದಾನ ಶಿಬಿರ ಸೇರಿದಂತೆ ವಿವಿಧ ಅರ್ಥಪೂರ್ಣ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಘಟ್ಟದಲ್ಲಿ ದೇಶದ ಜಿಡಿಪಿ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ರಕ್ತದಾನ ಶಿಬಿರ ನಡೆಯಿತು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಜಿಲ್ಲಾ ಕಾರ್ಯದರ್ಶಿ ಕೃಷ್ಣಾ ಗುನ್ಹಾಳಕರ, ರಾಘವೇಂದ್ರ ಕಾಪಸೆ ಮಾತನಾಡಿದರು. ಮಾಜಿ ಶಾಸಕ ರಮೇಶ ಭೂಸನೂರ, ಮುಖಂಡರಾದ ಸಂಜೀವ ಐಹೊಳೆ, ವಿವೇಕಾನಂದ ಡಬ್ಬಿ, ಉಮೇಶ ಕಾರಜೋಳ, ಚಂದ್ರಶೇಖರ ಕವಟಗಿ, ಪ್ರಕಾಶ ಅಕ್ಕಲಕೋಟ, ಮಳುಗೌಡ ಪಾಟೀಲ, ಈರಣ್ಣ ರಾವುರ, ಸಾಬು ಮಾಶಾಳ ಉಪಸ್ಥಿತರಿದ್ದರು.