ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಪಡುವಲಪಟ್ಟಣ ಗ್ರಾಮದ ಹೊರವಲಯದ ಬಸವನಕಲ್ಲು ಅರಣ್ಯ ತಪ್ಪಲಿನಲ್ಲಿ ಬೆಂಗಳೂರಿನ ಮಾತೃ ಫೌಂಡೇಷನ್, ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ, ತಾಲೂಕು ವಕೀಲರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕಿನ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕದ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ಮಾತೃಗೊಂದು ಮರ ಸಹಸ್ರ ಗಿಡನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪರಿಸರ ನಮಗೆ ತಾಯಿ ಇದ್ದಂತೆ. ಪರಿಸರ ಉತ್ತಮವಾಗಿದ್ದರೆ ನಾವೂ ಕೂಡ ಆರೋಗ್ಯವಂತರಾಗಿರುತ್ತೇವೆ. ತಂತ್ರಜ್ಞಾನ ಎಷ್ಟೇ ಬೆಳೆದರೂ ಕೂಡ ಆಹಾರದ ಕೊರತೆ ಉಂಟಾದರೆ ತಂತ್ರಜ್ಞಾನದಿಂದ ನಾವು ಬದುಕಲು ಸಾಧ್ಯವಿಲ್ಲ. ಆಹಾರದ ಅಭಾವ ನೀಗಿಸಿದ ಎಂ.ಎಸ್.ಸ್ವಾಮಿನಾಥನ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದರು.ಆಸ್ಪತ್ರೆಯಲ್ಲಿ ವೆಂಟಿಲೇಟರ್ಗೆ ಬಿಲ್ ಕಟ್ಟುವಾಗ ಪ್ರಕೃತಿ ಬೆಲೆ ಗೊತ್ತಾಗುತ್ತದೆ. ಪ್ರತಿಯೊಬ್ಬರಿಗೂ ಮೂಲ ಹಕ್ಕುಗಳಿಗಿಂತ ಮೂಲ ಕರ್ತವ್ಯಗಳ ಅರಿವಾಗಬೇಕು. ಪರಿಸರ ಸಂರಕ್ಷಣೆಯಲ್ಲಿ ನಾವು ಪಾಲ್ಗೊಂಡು ಮುಂದಿನ ಪೀಳಿಗೆಯನ್ನೂ ಸಹ ಹುರಿದುಂಬಿಸಬೇಕು ಎಂದರು.
ಇತ್ತೀಚೆಗೆ ಶೇ.8ರಷ್ಟು ಓಜೋನ್ ಪದರ ರಂದ್ರವಾಗಿ ಭೂಮಿಯ ತಾಪಮಾನ ಹೆಚ್ಚಾಗುತ್ತಿದೆ. ಹಾಗಾಗಿ ಮರ ಕಡಿಯುವುದನ್ನು ನಿಲ್ಲಿಸಬೇಕು. ನಾಶವಾಗುತ್ತಿರುವ ಪ್ರಕೃತಿ ಸಂರಕ್ಷಣೆ ಮಾಡಬೇಕು. ಪ್ರಕೃತಿ ತಾಯಿ ಸಂರಕ್ಷಣೆ ಮಾಡಲು ಶ್ರಮಿಸುತ್ತಿರುವ ಮಾತೃ ಫೌಂಡೇಷನ್ನ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದಿಸಬೇಕು ಎಂದರು.
ಮಾತೃಗೊಂದು ಮರ ಸಹಸ್ರ ಗಿಡನೆಡುವ ಅಭಿಯಾನದಲ್ಲಿ ವಿವಿಧ ಬಗೆಯ ಹಣ್ಣು ಮತ್ತು ಅರಣ್ಯ ಸಂಬಂಧಿತ 1500ಕ್ಕೂ ಹೆಚ್ಚು ಗಿಡ ನೆಡಲಾಯಿತು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ರಘು, ಕೆಎಸ್ಬಿಸಿ ಸದಸ್ಯ ಮಧುಸೂಧನ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಉಡೆ ಪಿ.ಕೃಷ್ಣ, ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಅಶೋಕ್, ತಾಪಂ ಇಒ ಸತೀಶ್, ವಲಯ ಅರಣ್ಯ ಸಂರಕ್ಷಣಾಧಿಕಾರಿ ಸಂಪತ್ ಪಟೇಲ್, ಡಿವೈಎಸ್ಪಿ ಬಿ.ಚಲುವರಾಜು, ತಾಲೂಕು ಕಸಾಪ ಅಧ್ಯಕ್ಷ ಸಿ.ಆರ್.ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.