ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಹೆಗ್ಗಡೆಯವರ ನಿವಾಸ ಬೀಡಿನಿಂದ ಮಹೋತ್ಸವ ಸಭಾಭವನಕ್ಕೆ ಭವ್ಯ ಮೆರವಣಿಗೆ, ಬಳಿಕ ಅಲ್ಲಿ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಅರಹಂತ ಪೂಜೆ, ಸಿದ್ಧಪರಮೇಷ್ಠಿಗಳ ಪೂಜೆ, ಬಾಹುಬಲಿ ಸ್ವಾಮಿ ಪೂಜೆ, ಶ್ರುತ ಪೂಜೆ ಮತ್ತು ಗಣಧರಪರಮೇಷ್ಠಿ ಪೂಜೆ ನಡೆಯಿತು.
ಶಿಶಿರ್ ಇಂದ್ರರು ಮಂತ್ರ ಪಠಣ ಮಾಡಿದರು. ಸೌಮ್ಯ, ಮಂಜುಳಾ, ಸಾವಿತ್ರಿ ಮತ್ತು ಅರುಣಾ ಅವರ ಸುಶ್ರಾವ್ಯ ಹಾಡಿಗೆ ಹಿಮ್ಮೇಳದಲ್ಲಿ ತಬಲಾವಾದಕರಾಗಿ ಶೋಧನ್, ಧರ್ಮಸ್ಥಳ ಮತ್ತು ಹಾರ್ಮೋನಿಯಂನಲ್ಲಿ ರವಿರಾಜ್, ಉಜಿರೆ ಸಹಕರಿಸಿದರು.ಸಮವಸರಣ ಎಂದರೇನು?
ಅಶೋಕವೃಕ್ಷ, ಸುರಪುಷ್ಪವೃಷ್ಟಿ, ದಿವ್ಯಧ್ವನಿ, ಚಾಮರ, ಸಿಂಹಾಸನ, ಪ್ರಭಾವಳಿ, ದೇವದುಂದುಭಿ, ಮುಕ್ಕೊಡೆ- ಇವು ಅಷ್ಟ ಮಹಾಪ್ರಾತಿಹರ್ಯಗಳು.
ಹೇಮಾವತಿ ವೀ. ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಾಂಸ್ಕೃತಿಕ ಕಲಾಕೇಂದ್ರದ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನದ ಮೂಲಕ ಸಾದರಪಡಿಸಿದರು. ಚೈತ್ರ, ಅರುಣ್ ಮತ್ತು ಸುನಿಲ್ ನೃತ್ಯ ನಿರ್ದೇಶನ ನೀಡಿದರು.ಅನಿತಾ ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಪ್ರಿಯದರ್ಶಿನಿ, ರಜತಾ ಮತ್ತು ಬಾಹುಬಲಿ ಸೇವಾ ಸಮಿತಿಯ ಸದಸ್ಯರು ಅಷ್ಟವಿಧಾರ್ಚನೆ ಪೂಜೆಯಲ್ಲಿ ಭಾಗವಹಿಸಿದರು. ಶಾಂತಿಮಂತ್ರ ಪಠಣ ಮತ್ತು ಮಹಾಮಂಗಳಾರತಿಯೊಂದಿಗೆ ಸಮವಸರಣ ಪೂಜೆ ಸಮಾಪನಗೊಂಡಿತು. ಪಾಕತಜ್ಞರಾದ ಪಾಂಡಿರಾಜ ಕೊಕ್ರಾಡಿ ಮತ್ತು ಬಾಹುಬಲಿ, ಪಿಲ್ಯ ಅವರನ್ನು ಗೌರವಿಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು. ಮಹಾವೀರ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.