ಮೊಬೈಲ್, ಟಿವಿ ಹಾವಳಿಯಿಂದ ರಂಗಭೂಮಿ ಅಸ್ತಿತ್ವಕ್ಕೆ ಧಕ್ಕೆ: ಕಿಲ್ಲೇದಾರ

KannadaprabhaNewsNetwork |  
Published : Jun 28, 2024, 12:49 AM IST
27ಕೆಪಿಎಲ್27 ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು,  ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ | Kannada Prabha

ಸಾರಾಂಶ

ಇವತ್ತಿನ ಮೊಬೈಲ್, ಟಿವಿಗಳ ಹಾವಳಿಯಲ್ಲಿ ರಂಗಭೂಮಿಯ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ.

ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್, ಲಕ್ಷ್ಮಣ ಪೀರಗಾರರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಕನ್ನಡಪ್ರಭ ವಾರ್ತೆ ಕೊಪ್ಪಳ

ಸಿನಿಮಾಗಳು ನಟರನ್ನು ದೊಡ್ಡದಾಗಿ, ಟಿವಿಗಳು ಚಿಕ್ಕದಾಗಿ ತೋರಿಸಿದರೆ ಪ್ರೇಕ್ಷಕನಿಗೆ ನಿಜವಾದ ಚಿತ್ರಣ ಕೊಡುವುದು ರಂಗಭೂಮಿ ಮಾತ್ರ. ಇವತ್ತಿನ ಮೊಬೈಲ್, ಟಿವಿಗಳ ಹಾವಳಿಯಲ್ಲಿ ರಂಗಭೂಮಿಯ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ. ಇದನ್ನು ಉಳಿಸಿ, ಬೆಳೆಸಬೇಕಿದೆ ಎಂದು ನಾಟಕ ಅಕಾಡೆಮಿಯ ಸದಸ್ಯ ಚಾಂದಪಾಷಾ ಕಿಲ್ಲೇದಾರ ಹೇಳಿದರು.

ಕರ್ನಾಟಕ ಬೀದಿ ನಾಟಕ ಅಕಾಡೆಮಿ, ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಸಿಜಿಕೆಯವರು ಬೀದಿ ನಾಟಕಗಳ ಪರಿಕಲ್ಪನೆ ಹುಟ್ಟು ಹಾಕಿದರು. ಕಲೆಯು ಜನಪರವಾಗಿರಬೇಕು ಎಂಬುದು ಸಿಜಿಕೆಯವರ ಆಶಯವಾಗಿತ್ತು. ಕಲೆಯು ಮನಸ್ಸನ್ನು ಉಲ್ಲಾಸಗೊಳಿಸುತ್ತದೆ. ಕಲೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ರಂಗಕಲೆಗೆ ಸರ್ಕಾರ ಸಹಾಯಧನ ನೀಡುತ್ತದೆ. ಅದನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರಶಸ್ತಿ ಪ್ರದಾನ:

ಹಿರಿಯ ರಂಗಕರ್ಮಿ ಸಿಜಿಕೆ ಜನ್ಮದಿನದ ನಿಮಿತ್ತ ಪ್ರತಿವರ್ಷ ಕಾರ್ಯಕ್ರಮ ಹಮ್ಮಿಕೊಂಡು ಪ್ರಶಸ್ತಿ ನೀಡಲಾಗುತ್ತಿದ್ದು, ಕೊಪ್ಪಳ ಜಿಲ್ಲೆಯ ಪ್ರತಿಭಾವಂತ ರಂಗಕರ್ಮಿಗಳು ನಟ ನಿರ್ದೇಶಕರಾದ ಶೀಲಾ ಹಾಲ್ಕುರಿಕೆ (೨೦೨೧), ಶರಣು ಶೆಟ್ಟರ್ (೨೦೨೨) ಲಕ್ಷ್ಮಣ ಪೀರಗಾರ (೨೦೨೩) ಅವರಿಗೆ ಸಿಜಿಕೆ ರಂಗಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿದ್ದ ಪ್ರಗತಿಪರ ಚಿಂತಕಿ ಶೈಲಜಾ ಹಿರೇಮಠ್, ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಗೌಸ್ ಮುಲ್ಲಾ, ಪ್ರಶಸ್ತಿ ಸ್ವೀಕರಿಸಿದ ಶೀಲಾ ಹಾಲ್ಕುರಿಕೆ, ಲಕ್ಷ್ಮಣ್ ಪೀರಗಾರ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಗಣಪತಿ ಲಮಾಣಿ ಮಾತನಾಡಿದರು.

ಮುಖಂಡರಾದ ಕಾಟನ್ ಪಾಷಾ ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ನರಸಿಂಗ ಗುಂಜಳ್ಳಿ ಸ್ವಾಗತಿಸಿ, ಪತ್ರಕರ್ತ ರಾಜು ಬಿ.ಆರ್. ನಿರೂಪಿಸಿದರು. ಸಂಘಟಕ ಸಿರಾಜ್ ಬಿಸರಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಸ್ತಿ ಪುರಸ್ಕೃತರ ಪರಿಚಯವನ್ನು ಅಖಿಲ್ ಹುಡೇವು, ಹನುಮಂತ, ಸಲ್ಮಾ ಜಹಾನ್ ನೆರವೇರಿಸಿದರು. ಇದೇ ಸಂದರ್ಭದಲ್ಲಿ ನಾಟಕ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿರುವ ಚಾಂದಪಾಷಾ ಕಿಲ್ಲೇದಾರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟಕ ಎಚ್.ವಿ. ರಾಜಾ ಬಕ್ಷಿ, ಎಂ.ಡಿ. ಖಲೀಲ್ ಹುಡೇವು, ಆನಂದ್, ಮಾರುತಿ, ನಿಂಗು ಬೆಣಕಲ್, ಡಾ. ಪಾಷಾ, ಪ್ರದೀಪ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ