ಕನ್ನಡಪ್ರಭ ವಾರ್ತೆ, ಕೊಳ್ಳೇಗಾಲ
ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎಸ್ ನಾಗರಾಜು ಕೊಂಗರಹಳ್ಳಿ ಮಾತನಾಡಿ, ನಮ್ಮ ಲಯನ್ಸ್ ಕ್ಲಬ್ ವತಿಯಿಂದ ಸುಮಾರು 231 ಕಣ್ಣಿನ ಶಿಬಿರ ಕ್ಯಾಂಪನ್ನು ಉಚಿತವಾಗಿ ಹಮ್ಮಿಕೊಂಡಿದ್ದು, ಪೈಕಿ 1ಲಕ್ಷಕ್ಕಕ್ಕೂ ಅಧಿಕ ಮಂದಿ ಚಿಕಿತ್ಸೆಗೆ ಒಳಗಾಗಿದ್ದು, ಅದರಲ್ಲಿ 15 ಸಾವಿರಕ್ಕೂ ಹೆಚ್ಚು ಜನರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದರು.
ಬಾನುವಾರ ನಡೆದ ಶಿಬಿರದಲ್ಲಿ 32 ಮಂದಿ ಚಿಕಿತ್ಸೆಗೆ ಒಳಪಟ್ಟಿದ್ದು, ಇವರ ಪೈಕಿ 25 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಬೆಂಗಳೂರಿನ ಲಯನ್ ವೆಸ್ಟ್ ಐ ಆಸ್ಪತ್ರೆಗೆಕಳುಹಿಸಲಾಗಿದೆ ಎಂದರು.
ಲಯನ್ಸ್ ಸಂಸ್ಥೆ ಅಧ್ಯಕ್ಷ ಚಿಕ್ಕಬಸವಯ್ಯ, ಪದಾಧಿಕಾರಿಗಳಾದ ಮಂಜುನಾಥ್, ಆನಂದ್ ರಾಮಶೆಟ್ಟಿ, ಜಯಪ್ರಕಾಶ್, ಚನ್ನಮಾದೇಗೌಡ ಇನ್ನಿತರಿದ್ದರು ಇದ್ದರು.