ಬೆಳಗಾವಿ : ಚೀಲದಲ್ಲಿ ಮಗನ ಮೃತದೇಹದ ಅವಶೇಷ ಹಿಡಿದು ಅಂತ್ಯಕ್ರಿಯೆಗೆ ತೆರಳಿದ ತಂದೆ

KannadaprabhaNewsNetwork |  
Published : Aug 08, 2024, 01:41 AM ISTUpdated : Aug 08, 2024, 12:27 PM IST
ಕೈಚೀಲದಲ್ಲಿ ಮೃತದೇಹದ ಅವಶೇಷ ಹಿಡಿದು ಅಂತ್ಯಕ್ರಿಯೆಗೆ ತೆರಳುತ್ತಿರುವ ತಂದೆ | Kannada Prabha

ಸಾರಾಂಶ

ಬೆಳಗಾವಿ: ಅಗ್ನಿ ದುರಂತದಲ್ಲಿ ಸುಟ್ಟು ಕರಕಲಾಗಿ ದುರಂತ ಅಂತ್ಯ ಕಂಡ ಯಲ್ಲಪ್ಪ ಗುಂಡ್ಯಾಗೋಳ ಮೃತದೇಹದ ಅವಶೇಷಗಳನ್ನು ಕೈ ಚೀಲದಲ್ಲಿ ತುಂಬಿಕೊಂಡು ಕಣ್ಣೀರಿಡುತ್ತ ತಂದೆ ಸಣ್ಣಗೌಡ ಅಂತ್ಯಕ್ರಿಯೆಗೆ ತೆರಳಿದರು. 

ಬೆಳಗಾವಿ: ಅಗ್ನಿ ದುರಂತದಲ್ಲಿ ಸುಟ್ಟು ಕರಕಲಾಗಿ ದುರಂತ ಅಂತ್ಯ ಕಂಡ ಯಲ್ಲಪ್ಪ ಗುಂಡ್ಯಾಗೋಳ ಮೃತದೇಹದ ಅವಶೇಷಗಳನ್ನು ಕೈ ಚೀಲದಲ್ಲಿ ತುಂಬಿಕೊಂಡು ಕಣ್ಣೀರಿಡುತ್ತ ತಂದೆ ಸಣ್ಣಗೌಡ ಅಂತ್ಯಕ್ರಿಯೆಗೆ ತೆರಳಿದರು. 

ಮರಣೋತ್ತರ ಪರೀಕ್ಷೆಯ ಬಳಿಕ ಯಲ್ಲಪ್ಪನ ಮೃತದೇಹದ ಭಾಗಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಮುಚ್ಚಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಸಂತೆಗೆ ಒಯ್ಯುವ ಕೈ ಚೀಲದಲ್ಲೇ ಮಗನ ಮೃತದೇಹದ ಭಾಗಗಳನ್ನು ತೆಗೆದುಕೊಂಡು ಕಣ್ಣೀರು ಹಾಕುತ್ತ ತಂದೆ ಅಂತ್ಯಕ್ರಿಯೆಗೆ ಹೊರಟಿರುವ ದೃಶ್ಯ ಕರುಳು ಹಿಂಡುವಂತಿತ್ತು. 

ಪಿಯುಸಿ ಓದಿದ್ದ ಯಲ್ಲಪ್ಪ ಸ್ನೇಹಂ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಸೇರಿಕೊಂಡು ಕೇವಲ 4 ತಿಂಗಳಾಗಿತ್ತು. ಆದರೆ, ಅಗ್ನಿ ದುರಂತದಲ್ಲಿ ಅಂತ್ಯ ಕಂಡಿದ್ದಾರೆ. ಮನೆ ಮಗನನ್ನೇ ಕಳೆದುಕೊಂಡ ತಂದೆ, ತಾಯಿ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೀ ಹೆಬ್ಬಾಳಕರ್‌ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್‌
ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ