ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಸಂಪನ್ನ

KannadaprabhaNewsNetwork |  
Published : Sep 15, 2025, 01:01 AM IST
ಗೌರಿ | Kannada Prabha

ಸಾರಾಂಶ

7ನೇ ಹೊಸಕೋಟೆ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಅದ್ಧೂರಿಯಾಗಿ ನೆರವೇರಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

7ನೇ ಹೊಸಕೋಟೆಯ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವವು ಸಂಜೆ ಅದ್ಧೂರಿಯಾಗಿ ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು.ವಿದ್ಯುತ್ ದೀಪ ಅಲಂಕಾರ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಯ ಮೆರವಣಿಗೆಯೊಂದಿಗೆ ನಗಾರಿ, ಹುಲಿ ವೇಷದೊಂದಿಗೆ ದೇವಾಲಯದಿಂದ ಹೊರಟು ಮೆಟ್ನಳ್ಳದವರೆಗೆ ಸಾಗಿ ಅಲ್ಲಿಂದ ವಾಪಾಸಾಗಿ ಅದೇ ಮಾರ್ಗವಾಗಿ ಏಳನೇ ಹೊಸಕೋಟೆಯ ಪ್ರಮುಖ ಬೀದಿಗಳಲ್ಲಿ ಭಕ್ತಾಧಿಗಳ ಪೂಜೆಯೊಂದಿಗೆ ಸಾಗಿ ನಂತರ 7ನೇ ಹೊಸಕೋಟೆ ಕೆರೆಯಲ್ಲಿ ವಿಸರ್ಜಿಸಲಾಯಿತು.ದಾಸಂಡ ರಮೇಶ್ ಚಂಗಪ್ಪ, ರಮೇಶ್, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಗೂ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5-6 ತಿಂಗಳಿಂದ ನೀರು ಪೋಲು: ಕ್ರಮಕೈಗೊಳ್ಳದ ಅಧಿಕಾರಿಗಳು
ತಮ್ಮ ಮೇಲಿನ ಆರೋಪ ಸುಳ್ಳು, ಆಧಾರ ರಹಿತ : ಮುನೀಶ್‌ ಮೌದ್ಗಿಲ್‌