ಸಂಭ್ರಮದ ಮಾವಿನಹಳ್ಳಿ ಬಸವೇಶ್ವರಸ್ವಾಮಿ ರಥೋತ್ಸವ

KannadaprabhaNewsNetwork |  
Published : Mar 09, 2025, 01:46 AM IST
ಭೀಮಸಮುದ್ರದ ಬಳಿಯ ಮುಜುರೆ ಬಸಾಪುರದ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ ಶನಿವಾರ ಅದ್ದೂರಿಯಾಗಿ ನೆರವೇರಿತು. | Kannada Prabha

ಸಾರಾಂಶ

The festive Mavinahalli Basaveshwaraswamy Chariot Festival

-ರಥೋತ್ಸವ ಕಣ್ತುಂಬಿಕೊಂಡ ನೂರಾರು ಭಕ್ತರಿಂದ ಜಯಘೋಷ

-----

ಕನ್ನಡಪ್ರಭ ವಾರ್ತೆ ಸಿರಿಗೆರೆ

ಭೀಮಸಮುದ್ರ ಸಮೀಪದ ಮಜುರೆಯ ಬಸವಾಪುರದ ಮಾವಿನಹಳ್ಳಿ ಶ್ರೀಗುರು ಬಸವೇಶ್ವರಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ಅದ್ಧೂರಿಯಾಗಿ ನಡೆಯಿತು.

ಸ್ವಾಮಿಯ ರಥವನ್ನು ಎಳೆಯುವ ಕ್ಷಣಕ್ಕಾಗಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಭಕ್ತರು ಕಾತರದಿಂದ ಕಾದು ಕಣ್ತುಂಬಿಕೊಂಡರು. ಚಾಲನೆ ದೊರೆಯುತ್ತಿದ್ದಂತೆ ಭಕ್ತರು ಸ್ವಾಮಿಗೆ ಜಯಘೋಷ ಕೂಗಿದರು. ಭಕ್ತರು ದೇಗುಲಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.

ಹಣ್ಣು, ಕಾಯಿ, ಹೂವಿನ ಹಾರಗಳೊಂದಿಗೆ ಭಕ್ತಿ ಸಮರ್ಪಿಸಿದರು. ಇಷ್ಟಾರ್ಥ ಸಿದ್ಧಿಗಾಗಿಯೂ ಪ್ರಾರ್ಥಿಸಿಕೊಂಡರು.

ರಥಕ್ಕೆ ಬಾಳೆಹಣ್ಣನ್ನು ಎಸೆಯುವ ಮೂಲಕ ಅನೇಕರು ಭಕ್ತಿ ಸಮರ್ಪಿಸಿದರು. ರಥೋತ್ಸವದ ಅಂಗವಾಗಿ ಬಸವೇಶ್ವರ ಸ್ವಾಮಿಗೆ ಮುಂಜಾನೆ ಮಹಾ ರುದ್ರಾಭಿಷೇಕ ಸೇರಿ ಇತರೆ ಪೂಜಾ ಕೈಂಕರ್ಯ ಶಾಸ್ತ್ರೋಕ್ತವಾಗಿ ನೆರವೇರಿದವು.

ರಥೋತ್ಸವಕ್ಕೂ ಮುನ್ನ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇಗುಲದ ಸಮೀಪವಿರುವ ಗದ್ದಗೆ ಬಳಿ ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಕರೆತಂದು ಪೂಜೆ ಸಲ್ಲಿಸಲಾಯಿತು. ನಂತರ ಉತ್ಸವ ಮೂರ್ತಿಯನ್ನು ರಥದ ಬಳಿ ಕರೆತರುತ್ತಿದ್ದಂತೆ ಭಕ್ತೋತ್ಸಾಹ ಮುಗಿಲುಮುಟ್ಟಿತ್ತು. ಮೂರು ಬಾರಿ ಪ್ರದಕ್ಷಿಣೆ ಹಾಕಿಸಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಹೂವಿನ ಹಾರ ಹರಾಜು: ರಥೋತ್ಸವಕ್ಕೂ ಮುನ್ನ ಸ್ವಾಮಿಯ ಮುಡಿಯಲ್ಲಿದ್ದ ಎರಡು ಹೂವಿನ ಹಾರಗಳನ್ನು ಹರಾಜು ನಡೆಸಲಾಯಿತು. ಹರಪನಹಳ್ಳಿಯ ಭಕ್ತರೊಬ್ಬರು ಮೊದಲ ಹಾರವನ್ನು ೧,೨೧,೦೦೧ ರೂ.ಗೆ ಹರಾಜಿನಲ್ಲಿ ಸ್ವೀಕರಿಸಿದರು. ರುದ್ರಾಕ್ಷಿ ಹಾರವು ೧,೫೧,೦೦೧ ರೂ.ಗೆ ಹರಾಜಾಯಿತು.----

ಫೋಟೊ: ಭೀಮಸಮುದ್ರದ ಬಳಿಯ ಮುಜುರೆ ಬಸಾಪುರದ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ ಶನಿವಾರ ಅದ್ಧೂರಿಯಾಗಿ ನೆರವೇರಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!