ಮೊದಲ ತಂಕ ಬಡಾ ಜೋಡುಕರೆ ಕಂಬಳ ಫೆ.28ಕ್ಕೆ ನಿಗದಿ

KannadaprabhaNewsNetwork |  
Published : Oct 17, 2025, 01:03 AM IST
15ಕಂಬಳಕಂಬಳ ಸಮಿತಿಯ ಗೌರವಾದ್ಯಕ್ಷ ರೋಹಿತ್ ಹೆಗ್ಡೆ ಮಾತನಾಡಿದರು | Kannada Prabha

ಸಾರಾಂಶ

ಬಡಗೊಟ್ಟು ಬಾಕ್ಯಾರು ಕಂಬಳಕ್ಕೆ ಮಾತ್ರ ಉಪಯೋಗಿಸಬಹುದಾದ 12 ಎಕರೆ ಜಾಗದಲ್ಲಿ ಈ ಬಾರಿ ಪ್ರಥಮ ಬಾರಿಗೆ ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳ ನಡೆಯಲಿದೆ. ಅ.22ರಂದು ಕಂಬಳ ಕರೆಗೆ ಭೂಮಿ ಪೂಜೆ, ಫೆ.28ರಂದು ಕಂಬಳ ಜರಗಲಿದೆ ಎಂದರು.

ಉಡುಪಿ: ಪಡುಬಿದ್ರಿಯ ಎರ್ಮಾಳು ಗ್ರಾಮದಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ತೆಂಕ- ಬಡ ಜೋಡುಕರೆ ಕಂಬಳ ಪೂರ್ವಭಾವಿ ಸಭೆ ಎರ್ಮಾಳು ಜನಾರ್ಧನ ದೇವಳದ ಆವರಣದಲ್ಲಿ ಜರಗಿತು.

ಈ ಕಂಬಳ ಸಮಿತಿ ಗೌರವಾಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಮಾತನಾಡಿ, ಬಡಗೊಟ್ಟು ಬಾಕ್ಯಾರು ಕಂಬಳಕ್ಕೆ ಮಾತ್ರ ಉಪಯೋಗಿಸಬಹುದಾದ 12 ಎಕರೆ ಜಾಗದಲ್ಲಿ ನಾವು ಈ ಬಾರಿ ಪ್ರಥಮ ಬಾರಿಗೆ ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳ ನಡೆಯಲಿದೆ. ಹಿಂದೆ ಜೈನ ಮತದವರು ಕಂಬಳ ಮಾಡುತ್ತಿದ್ದ ಜಾಗ ಇದಾಗಿತ್ತು. ಊರ ಜನರಿಗೆ ಯಾವುದೇ ತೊಂದರೆ ಬರದಂತೆ ನಾವು ವ್ಯಾಘ್ರ ಚಾಮುಂಡಿ ದೈವಕ್ಕೆ ಸೂಕ್ತ ನೆಲೆ ಕಲ್ಪಿಸಿ, ಇದೀಗ ಕಂಬಳ ಮಾಡಲು ಉದ್ದೇಶಿಸಿದ್ದೇವೆ. ಅ.22ರಂದು ಕಂಬಳ ಕರೆಗೆ ಭೂಮಿ ಪೂಜೆ, ಫೆ.28ರಂದು ಕಂಬಳ ಜರಗಲಿದೆ ಎಂದರು.ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ರಾಜ್ ಎರ್ಮಾಳು ಬೀಡು ಮಾತನಾಡಿ, ಎರ್ಮಾಳು ಬೀಡು ನೇತೃತ್ವದಲ್ಲಿ ಎರ್ಮಾಳಿನಲ್ಲಿ 1978 ರಲ್ಲಿ ಕೊನೆಯ ಕಂಬಳವಾಗಿತ್ತು. ನಮ್ಮ ಕಂಬಳ ಎಂಬ ಭಾವನೆಯಿಂದ ಇದನ್ನು ಯಶಸ್ವಿಗೊಳಿಸೋಣ ಎಂದರು.ಎರ್ಮಾಳು ಶ್ರೀ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು, ಎರ್ಮಾಳು ಜನಾರ್ಧನ ಜನಕಲ್ಯಾಣ ಸಮಿತಿ ಅಧ್ಯಕ್ಷ ಸುರೇಶ್ ಜಿ. ಶೆಟ್ಟಿ, ಎರ್ಮಾಳು ಮಸೀದಿ ಅಧ್ಯಕ್ಷ ಸುಲೇಮಾನ್, ಜಿನರಾಜ್ ಎರ್ಮಾಳು, ವೈ. ಶಶಿಧರ ಶೆಟ್ಟಿ, ಯಶೋಧರ ಶೆಟ್ಟಿ ಮತ್ತಿತರರು ಅಭಿಪ್ರಾಯ ಮಂಡಿಸಿದರು.

ವೆಂಕಟೇಶ ನಾವಡ, ಬಾಲಚಂದ್ರ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಜಗಜೀವನ್ ಚೌಟ, ಭರತ್ ಕುಮಾರ್, ಗೋಪಾಲ ಶೆಟ್ಟಿ, ಜಯರಾಜ್ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಶಶಿಧರ ಶೆಟ್ಟಿ, ವಿವಿಧ ಜಾತಿ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಸ್ವಾಗತಿಸಿ, ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!