ಧ್ವಜ ಸ್ವಾಭಿಮಾನ, ಗೌರವದ ಸಂಕೇತ: ಹಿರೇಮಠ ಸ್ವಾಮೀಜಿ

KannadaprabhaNewsNetwork |  
Published : Sep 04, 2026, 01:30 AM IST
್ಿ್ಿ್ಿ | Kannada Prabha

ಸಾರಾಂಶ

ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ವತಿಯಿಂದ ಈ ವರ್ಷದ ಹಿಂದೂ ಮಹಾ ಗಣಪತಿ ಮಹೋತ್ಸವದ ಅಂಗವಾಗಿ ಬುಧವಾರ ಸಂಜೆ ನಗರದ ಬಿ.ಎಚ್. ರಸ್ತೆ ಸೋಮೆಕಟ್ಟೆ ಮಠದ ಬಳಿ ಸಾಂಪ್ರದಾಯಕ ಗೋ ಪೂಜೆ, ಧ್ವಜ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ತುಮಕೂರು

ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ವತಿಯಿಂದ ಈ ವರ್ಷದ ಹಿಂದೂ ಮಹಾ ಗಣಪತಿ ಮಹೋತ್ಸವದ ಅಂಗವಾಗಿ ಬುಧವಾರ ಸಂಜೆ ನಗರದ ಬಿ.ಎಚ್. ರಸ್ತೆ ಸೋಮೆಕಟ್ಟೆ ಮಠದ ಬಳಿ ಸಾಂಪ್ರದಾಯಕ ಗೋ ಪೂಜೆ, ಧ್ವಜ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ ಹಾಗೂ ಸಮಿತಿ ಮುಖಂಡರು ಗೋ ಪೂಜೆ ಹಾಗೂ ಧ್ವಜ ಪೂಜೆ ನೆರವೇರಿಸಿ ಈ ವರ್ಷದ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಗಣೇಶ ಚತುರ್ಥಿಯಂದು ಇಲ್ಲಿ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನಾ ಕಾರ್ಯಕ್ರಮಗಳು ಆರಂಭವಾಗಲಿವೆ.

ಈ ವೇಳೆ ಮಾತನಾಡಿದ ಹಿರೇಮಠ ಸ್ವಾಮೀಜಿ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಜನರ ಸಂಘಟನೆಗಾಗಿ ಲೋಕಮಾನ್ಯ ತಿಲಕ್‌ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆ ಆರಂಭಿಸಿದರು. ಆಗಿನಿಂದ ದೇಶದೆಲ್ಲೆಡೆ ಸಂಘಸಂಸ್ಥೆಗಳು ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಆರಂಭಿಸಿದವು. ಗಣೇಶೋತ್ಸವಗಳಲ್ಲಿ ತಿಲಕ್‌ ಅವರ ಹೆಸರು ಅನಿನಾಭಾವವಾಗಿ ಸೇರಿಕೊಳ್ಳುತ್ತದೆ ಎಂದರು.

ತುಮಕೂರು ನಗರ ಧಾರ್ಮಿಕವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಪ್ರಸಿದ್ಧವಾಗಿದೆ. ಗುರುಪರಂಪರೆ ಹೊಂದಿರುವ ತುಮಕೂರು ಡಾ. ಶಿವಕುಮಾರ ಸ್ವಾಮೀಜಿಗಳು ಸ್ಪರ್ಶ ಮಾಡಿದ ಕ್ಷೇತ್ರ. ಇಲ್ಲಿ ಯಾವುದೇ ಆಚರಣೆ ಮಾಡಿದರೂ ದಾಸೋಹದ ವ್ಯವಸ್ಥೆ ಮಾಡಲಾಗುತ್ತದೆ. ಹಾಗಾಗಿ ತುಮಕೂರು ನಗರ ದಾಸೋಹದ ಯೂನಿವರ್ಸಿಟಿ ಎಂದು ಸ್ವಾಮೀಜಿ ಬಣ್ಣಿಸಿದರು.

ಗಣೇಶೋತ್ಸವಗಳು ನಮ್ಮ ಧಾರ್ಮಿಕ, ಭಕ್ತಿಯ ಆಚರಣೆ. ಶುಭ ಕಾರ್ಯಗಳ ಆರಂಭದಲ್ಲಿ ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಲಾಗುತ್ತದೆ. ಇಂದು ವಿಘ್ನೇಶ್ವರ, ಆಂಜನೇಯ, ಭಾರತ ಮಾತೆ, ಧ್ವಜದ ಪೂಜೆ ಸಲ್ಲಿಸಲಾಗಿದೆ. ಧ್ವಜ ನಮ್ಮ ಸ್ವಾಭಿಮಾನದ ಸಂಕೇತ, ಹಾಗಾಗಿ ನಾವು ಧ್ವಜವನ್ನು ಗೌರವಿಸುತ್ತೇವೆ ಎಂದು ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಗಣೇಶೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಲಕ್ಷ್ಮೀಕಾಂತ್, ಉಪಾಧ್ಯಕ್ಷರಾದ ಮಹೇಂದ್ರ ವೈಷ್ಣವ್, ಅಂಬಿಕಾ ಹುಲಿನಾಯ್ಕರ್, ವಾಸವಿ ಗುಪ್ತ, ಪ್ರಧಾನ ಕಾರ್ಯದರ್ಶಿ ಕೆ.ಜಿ.ಪ್ರದೀಪ್, ಉತ್ಸವ ಸಮಿತಿ ಅಧ್ಯಕ್ಷಕೋರಿ ಮಂಜುನಾಥ್, ಕಾರ್ಯದರ್ಶಿಗಳಾದ ಕೆ. ವೇದಮೂರ್ತಿ, ಶಂಕರ್ ಕುರಿಪಾಳ್ಯ, ಸುರೇಶ್‌ರಾವ್, ಶರತ್, ಓಂಕಾರೇಶ್ವರಿ, ರವೀಶ್‌ಯಜಮಾನ್, ಪ್ರಮುಖರಾದ ವೈ.ಹೆಚ್. ಹುಚ್ಚಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷಎಚ್.ಎಸ್. ರವಿಶಂಕರ್ ಹೆಬ್ಬಾಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಹೆಚ್. ಹನುಮಂತರಾಜು, ನಗರ ಅಧ್ಯಕ್ಷ ಧನುಷ್, ಜೀವನ್, ಮೃದುಲ್ ಸೇರಿದಂತೆ ವಿಶ್ವ ಹಿಂದೂ ಪರಿಷದ್, ಭಜರಂಗದಳ ಹಾಗೂ ಬಿಜೆಪಿಯ ಹಲವಾರು ಮುಖಂಡರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯುತ್‌ ಸುರಕ್ಷತೆ ಎತ್ತಿ ಹಿಡಿಯಲು ಗುತ್ತಿಗೆದಾರರ ಒತ್ತಾಯ
ಅಂಗಡಿ ಬಾಗಿಲಿಗೆ ಬೀದಿದೀಪದ ಕಂಬಗಳು!