ತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯ ವ್ಯರ್ಥವಾಗಬಾರದು: ಡಾ. ಎನ್.ಟಿ. ಶ್ರೀನಿವಾಸ್

KannadaprabhaNewsNetwork |  
Published : Aug 16, 2025, 12:01 AM IST
ಕೂಡ್ಲಿಗಿ  ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಲಾಗಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಮಾತನಾಡಿದರು  | Kannada Prabha

ಸಾರಾಂಶ

ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಲಾಗಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿ.ಕೆ. ನೇತ್ರಾವತಿ ಧ್ವಜಾರೋಹಣ ನೆರವೇರಿಸಿದರು.

ಕೂಡ್ಲಿಗಿ: ಅಸಂಖ್ಯಾತ ಹುತಾತ್ಮರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ. ಈ ಸ್ವಾತಂತ್ರ್ಯವನ್ನು ನಮ್ಮ ಸ್ವೇಚ್ಛಾಚಾರವಾಗಿ ಬಳಸಿಕೊಂಡು ವ್ಯರ್ಥ ಮಾಡಬಾರದು. ಸ್ವಾತಂತ್ರ್ಯ ಸಮಾಜದ ಕಟ್ಟಕಡೆಯ ಸಮುದಾಯಗಳಿಗೂ, ಜನತೆಗೂ ಧ್ವನಿಯಾಗಬೇಕು ಎಂದು ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅಭಿಪ್ರಾಯವ್ಯಕ್ತಪಡಿಸಿದರು.

ಅವರು ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಲಾಗಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರ್ಯ ದೇಶದ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕು. ಅನೇಕ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದು, ಅದರಲ್ಲಿ ಮುಖ್ಯವಾಗಿ ತಾಲೂಕಿನ ಗುಂಡಿನಹೊಳೆ ಸಮೀಪ ವಿಜ್ಞಾನ ಕೃಷಿ ಕೇಂದ್ರ ಸ್ಥಾಪನೆ, ಗುಡೇಕೋಟೆ ಸಮೀಪ ಹುಣಿಸೆಹಣ್ಣಿನ ಸಂಸ್ಕರಣಾ ಘಟಕ, ಅನೇಕ ವಸತಿ ಶಾಲೆಗಳ ನಿರ್ಮಾಣ, ವಸತಿ ಶಾಲೆಯಿಂದ ಕಾಲೇಜಾಗಿ ಉನ್ನತೀಕರಣ, ಕೂಡ್ಲಿಗಿ ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆ ಆಸ್ಪತ್ರೆಯಿಂದ 150 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ, ಇವೆಲ್ಲಕ್ಕೂ ಮುಖ್ಯವಾಗಿ ಇಡೀ ರಾಜ್ಯದಲ್ಲಿಯೇ ಅತಿ ಹೆಚ್ಚು ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ ಮಾಡಿಸಿದ್ದೇನೆ ಮತ್ತು ವೈಯಕ್ತಿಕವಾಗಿ ₹20 ಸಾವಿರಕ್ಕೂ ಅಧಿಕ ಕಣ್ಣಿನ ಚಿಕಿತ್ಸೆ ನೀಡಿಸಲಾಗಿದೆ ಮತ್ತು ಶೀಘ್ರದಲ್ಲೇ ಕೆರೆ ನೀರು ತುಂಬಿಸುವ ಯೋಜನೆ ಕಾಮಗಾರಿ ಸಂಪೂರ್ಣ ಮುಗಿಯಲ್ಲಿದ್ದು, ಲೋಕಾರ್ಪಣೆ ಮಾಡಲು ಮುಂದಾಗಿರುವೆ ಎಂದು ಹೇಳಿದರು.

ಕೂಡ್ಲಿಗಿ ತಹಸೀಲ್ದಾರ್ ವಿ.ಕೆ. ನೇತ್ರಾವತಿ ಧ್ವಜಾರೋಹಣ ನೆರವೇರಿಸಿದರು. ಕೂಡ್ಲಿಗಿ ಕ್ಷೇತ್ರದ 2024-2025ನೇ ಸಾಲಿನ 96 ವಿಶೇಷ ಚೇತನರಿಗೆ ತ್ರಿಚಕ್ರ ವಾಹನವನ್ನು ಶಾಸಕ ಡಾ. ಶ್ರೀನಿವಾಸ ವಿತರಣೆ ಮಾಡಿದರು.

ಸಾಧಕರಿಗೆ, ಪ್ರಬಂಧ ಸೇರಿದಂತೆ ಇತರ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಧ್ವಜಾರೋಹಣಕ್ಕೂ ಮೊದಲು ಶಾಸಕರು, ತಹಸೀಲ್ದಾರರು ಸೇರಿದಂತೆ ಇತರರು ಮಹಾತ್ಮ ಗಾಂಧೀಜಿ ಚಿತಾಭಸ್ಮವಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಆನಂತರ ತಹಸೀಲ್ದಾರ್ ಧ್ವಜಾರೋಹಣ ನಡೆಸಿದರು, ಶಾಸಕ ಡಾ. ಶ್ರೀನಿವಾಸ ಹಾಗೂ ಡಿವೈಎಸ್ಪಿ ಮಲ್ಲೇಶ ದೊಡ್ಡಮನೆ, ತಾಪಂ ಇಒ ನರಸಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಶ ಉಪಸ್ಥಿತರಿದ್ದರು. ಕೂಡ್ಲಿಗಿ ಪಪಂ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ, ಉಪಾಧ್ಯಕ್ಷೆ ಲೀಲಾವತಿ ಪ್ರಭಾಕರ, ಸ್ಥಾಯಿ ಸಮಿತಿ ಅಧ್ಯಕ್ಷ ಶುಕೂರ್ ಹಾಜರಿದ್ದರು. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನೆ, ಸಿಪಿಐ ಪ್ರಹ್ಲಾದ ಆರ್. ಚನ್ನಗಿರಿ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಜಿಲಾನ್, ಇತರ ಮುಖಂಡರು, ಗಣ್ಯರು ಉಪಸ್ಥಿತರಿದ್ದರು. ಕೂಡ್ಲಿಗಿ ಪೊಲೀಸರು ಸೇರಿದಂತೆ ಇತರರಿಂದ ಪಥಸಂಚಲನ ನಡೆಯಿತು. ಶಾಲಾಮಕ್ಕಳಿಂದ ದೇಶಭಕ್ತಿ ಕುರಿತಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

PREV

Recommended Stories

ಕರಾವಳಿ, ಮಲೆನಾಡದಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ