ಕನ್ನಡಪ್ರಭ ವಾರ್ತೆ ಮೈಸೂರು
ಶ್ರೀ ನಟರಾಜ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಸ್ನೇಹಸಿಂಚನ ಹಾಗೂ 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿದ ನಂತರ ಅವರು ಮಾತನಾಡಿದರು.
ಭಾರತ ದೇಶ ತಾಂತ್ರಿಕತೆಯಲ್ಲಿ ಮುಂದುವರೆಯುತ್ತಿದ್ದು, ಹೆಣ್ಣು ಮಕ್ಕಳು ಕೂಡ ಇಂದು ಎಲ್ಲ ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಂದು ದೇಶ ಪ್ರಗತಿ ಹೊಂದಬೇಕಾದರೆ ಮೊದಲು ಹೆಣ್ಣು ಮಕ್ಕಳು ಶಿಕ್ಷಿತರಾಗಬೇಕು. ಇಂತಹ ಹೆಣ್ಣು ಮಕ್ಕಳ ಕಾಲೇಜನ್ನು ತೆರೆದಿದ್ದು, ಶ್ರೀಗಳ ಮಾರ್ಗದರ್ಶನದಲ್ಲಿ ಶಿಸ್ತು ಎದ್ದು ಕಾಣುತ್ತಿರುವುದು ಶ್ಲಾಘನೀಯ.ಈ ಸಂಸ್ಥೆಯ ಸಂಪ್ರದಾಯ, ಸಂಸ್ಕಾರ ನನಗೆ ತುಂಬಾ ಇಷ್ಟವಾಯಿತು. ಸಂಸ್ಕೃತಿಯೇ ನಶಿಸಿ ಹೋಗುತ್ತಿರುವ ಈ ಕಾಲದಲ್ಲಿ ಸಂಸ್ಥೆಯಲ್ಲಿ ಸಂಸ್ಕಾರ ಎದ್ದು ಕಾಣುತ್ತಿರುವುದು ಸಂತೋಷದ ವಿಷಯ. ಸುಸಂಸ್ಕೃತವಾದ ಉಡುಗೆಯಲ್ಲಿ ಭಾರತೀಯ ಸಂಸ್ಕೃತಿಗೆ ಪ್ರತೀಕವಾಗಿರುವುದು ಶಿಕ್ಷಣ ಸಂಸ್ಥೆ ಸಂಸ್ಕೃತಿಯನ್ನು ಉಳಿಸಿ, ಬೆಳೆಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಕ್ಷಣಿಕ ಸುಖ ಜೀವನವನ್ನು ನಾಶ ಮಾಡುತ್ತದೆ. ಹಾಗಾಗಿ ವಿದ್ಯಾರ್ಜನೆಯ ಕಡೆಗೆ ಗಮನ ಹರಿಸಬೇಕು. ಶಿಕ್ಷಣವಿಲ್ಲದಿದ್ದರೆ ಸಮಾಜದಲ್ಲಿ ಒಳ್ಳೆಯ ಸ್ಥಾನ ಮಾನವಿರುವುದಿಲ್ಲ. ಪದವಿ ಪಡೆಯುವುದರ ಜೊತೆಗೆ ನೀವೆಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಒಳ್ಳೆಯ ಸ್ಥಾನ-ಮಾನಗಳನ್ನು ಪಡೆಯಿರಿ, ಮುಂದೆ ಜೀವನದಲ್ಲಿ ನೀವೆ ಸಾವಿರಾರು ಜನರಿಗೆ ಸಹಾಯ ಮಾಡಬಹುದು. ಕಲಾ ವಿಭಾಗದ ವಿದ್ಯಾರ್ಥಿನಿಯರು ಕೀಳರಿಮೆಯನ್ನು ಇಟ್ಟುಕೊಳ್ಳಬಾರದು.
ಮುಖ್ಯಅತಿಥಿಯಾಗಿದ್ದ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಕೆ.ಪಿ. ಗುರುರಾಜ್ ಮಾತನಾಡಿ, ವಿದ್ವಾಂಸರು, ಜ್ಞಾನಿಗಳು ಜಗತ್ತಿನಾದ್ಯಂತ ಪೂಜಿಸಲ್ಪಡುತ್ತಾರೆ. ಪ್ರತಿಭೆಗೆ ಯಾವುದೇ ಜಾತಿ, ವರ್ಣ ಮತಗಳಿಲ್ಲ, ಶ್ರೀಗಳು ಮಹಿಳಾ ಕ್ಷೇತ್ರದಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳ ಬೆಳವಣೆಗಾಗಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ತೆರೆದಿದ್ದಾರೆ. ಶ್ರೀಗಳ ಪರಿಶ್ರಮದ ಫಲ ಇಂದು ಹೆಮ್ಮರವಾಗಿ ಬೆಳೆಯುತ್ತಿದೆ. ಜಗತ್ತಿನಲ್ಲಿ ಎಲ್ಲದಕ್ಕಿಂತ ಬೆಲೆಯುಳ್ಳದ್ದು ವಿದ್ಯೆ. ಶಾಂತಿ, ಸಂಯಮ, ಏಕಾಗ್ರತೆ ಹಾಗೂ ಶ್ರದ್ಧೆಯ ಮೂಲಕ ನಾವು ಬೆಳೆಯಬೇಕು ಎಂದರು.
ಶ್ರೀಹೊಸಮಠದ ಅಧ್ಯಕ್ಷ ಶ್ರೀಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶ್ರೀ ನಟರಾಜ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿ.ಡಿ. ಸುನೀತಾರಾಣಿ ಇದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಉಪನ್ಯಾಸಕಿ ಬಿ. ರಾಧಾ ಸ್ವಾಗತಿಸಿದರು, ಉಪನ್ಯಾಸಕಿ ಕೆ.ಎಸ್. ಪುಷ್ಪಾ ವಂದಿಸಿದರು, ಎಸ್. ವೇದಾವತಿ ನಿರೂಪಿಸಿದರು.