ಕನ್ನಡಪ್ರಭ ವಾರ್ತೆ ಭದ್ರಾವತಿ
ಅವರು ನಗರದ ಹೊಸ ಬುಳ್ಳಾಪುರ, ಗಾಣಿಗರ ಸಂಘದಿಂದ ಭಾನುವಾರ ಆಯೋಜಿಸಲಾಗಿದ್ದ ಗಾಣಿಗರ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯ ಭವನದ ಪ್ರಥಮ ಹಂತದ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಶಾಸಕರು ಗಾಣಿಗರ ಸಮಾಜದ ಅಭಿವೃದ್ಧಿಗೆ ಬದ್ದರಾಗಿದ್ದು, ಸಮಾಜದ ಮುಖ್ಯ ವಾಹಿನಿಯಲ್ಲಿ ಗಾಣಿಗರು ಸಹ ಗುರುತಿಸಿಕೊಳ್ಳುವ ಮೂಲಕ ಹೆಚ್ಚು ಸಂಘಟಿತರಾಗಬೇಕು. ಶಾಸಕರು ಹಾಗೂ ಅವರ ಕುಟುಂಬದವರಿಗೆ ಇದೇ ರೀತಿ ನಿಮ್ಮೆಲ್ಲರ ಸಹಕಾರ ಮುಂದಿನ ದಿನಗಳಲ್ಲೂ ಅಗತ್ಯವಾಗಿದೆ ಎಂದರು.ಗಾಣಿಗರ ಸಮಾಜದ ಶ್ರೀ ಅನಂತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿದ್ದರು. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್ಡಿ ಬ್ಯಾಂಕ್) ತಾಲೂಕು ಅಧ್ಯಕ್ಷ ಬಿ.ಕೆ ಶಿವಕುಮಾರ್, ಗಾಣಿಗ ಸಂಘದ ಮಾರ್ಗದರ್ಶಕ ಬಿ.ಕೆ ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗಾಣಿಗ ಸಮಾಜದ ಮುಖಂಡ ಆರ್. ವರದರಾಜ್, ಯತೀಶ್ ಕುಮಾರ್ ಮತ್ತು ಗಾಣಿಗರ ಸಂಘದ ಜಿಲ್ಲಾಧ್ಯಕ್ಷ ಎಂ. ನಾಗರಾಜ್, ತಾಲೂಕು ಸಂಘದ ಪ್ರಮುಖರಾದ ಅಧ್ಯಕ್ಷ ಟಿ. ವೆಂಕಟೇಶ್, ಉಪಾಧ್ಯಕ್ಷರಾದ ರಾಮ ಶೆಟ್ಟರು, ಶಶಿಕುಮಾರ್, ಕಾರ್ಯಾಧ್ಯಕ್ಷ ಟಿ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಸವರಾಜ್, ಖಜಾಂಚಿ ಎಸ್. ಚಂದ್ರು, ಪ್ರಚಾರ ಸಮಿತಿ ಅಧ್ಯಕ್ಷ ಶಿವಕುಮಾರ್, ಬಾಗಲಕೋಟೆ, ಹಾಸನ, ರಾಣೇಬೆನ್ನೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಂಗಳೂರು ಮತ್ತು ಯಡಿಯೂರು ಗಾಣಿಗರ ಸಮಾಜದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.