ವಿಜಯ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ವೈಭವದ ಪದಗ್ರಹಣ

KannadaprabhaNewsNetwork |  
Published : Jun 18, 2026, 01:30 AM IST
17ಎಚ್ಎಸ್ಎನ್10 :  | Kannada Prabha

ಸಾರಾಂಶ

ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಮತ್ತು ಗೌರವ ವಂದನೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ವಿದ್ಯಾರ್ಥಿ ನಾಯಕರ ಶಿಸ್ತುಬದ್ಧ, ಆಕರ್ಷಕ ಹಾಗೂ ಲಯಬದ್ಧವಾದ ಪಥಸಂಚಲನ ಕಣ್ಮನ ಸೆಳೆಯಿತು. ಪ್ರಸಕ್ತ ಸಾಲಿನ ಶಾಲಾ ವಿದ್ಯಾರ್ಥಿ ನಾಯಕರಾಗಿ ಯಶವಂತ್ ಡಿ. ಎಮ್. ಮತ್ತು ಧೃತಿ ಎಚ್.ಎಲ್. ಅವರು ಅಧಿಕಾರ ವಹಿಸಿಕೊಂಡರು. ಇವರೊಂದಿಗೆ ವಿವಿಧ ವಿಭಾಗಗಳ ನಾಯಕರಾಗಿ ಹಾಗೂ ವಿದ್ಯಾರ್ಥಿ ಸಂಸತ್ತಿನ ಸದಸ್ಯರಾಗಿ ಒಟ್ಟು ೨೮ ಪ್ರತಿಭಾವಂತ ವಿದ್ಯಾರ್ಥಿಗಳು ಜವಾಬ್ದಾರಿಗಳನ್ನು ವಹಿಸಿಕೊಂಡರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ವಿಜಯ ಶಾಲೆಯಲ್ಲಿ ಜೂನ್ 13ರ ಶನಿವಾರದಂದು ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಸತ್ತಿನ ಸದಸ್ಯರ ಪದಗ್ರಹಣ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಅತ್ಯಂತ ವೈಭವ ಹಾಗೂ ಶಿಸ್ತುಬದ್ಧವಾಗಿ ನೆರವೇರಿತು. ಭವಿಷ್ಯದ ಜವಾಬ್ದಾರಿಯುತ ನಾಯಕರಾಗಿ ಹೊರಹೊಮ್ಮಲು ಸಿದ್ಧರಾದ ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಹಾಗೂ ಸ್ಯಾಶ್‌ಗಳನ್ನು (ಗೌರವ ಪಟ್ಟಿ) ಪ್ರದಾನ ಮಾಡುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಪ್ರಾಮಾಣಿಕತೆ, ಕರುಣೆ ಹಾಗೂ ಧೈರ್ಯದಿಂದ ಸಮಾಜವನ್ನು ಮುನ್ನಡೆಸುವ ನಾಯಕತ್ವದ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಲು ಈ ಸಮಾರಂಭ ಪ್ರೇರಣೆಯಾಯಿತು.

ಈ ಬಾರಿಯ ವಿದ್ಯಾರ್ಥಿ ಸಂಸತ್ತಿನ ಆಯ್ಕೆಯು ಸಂಪೂರ್ಣವಾಗಿ ಪ್ರಜಾಪ್ರಭುತ್ವದ ಆಧಾರಿತ ಚುನಾವಣೆಯ ಮೂಲಕ ಮೂಡಿಬಂದಿತ್ತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಮತ್ತು ಗೌರವ ವಂದನೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ವಿದ್ಯಾರ್ಥಿ ನಾಯಕರ ಶಿಸ್ತುಬದ್ಧ, ಆಕರ್ಷಕ ಹಾಗೂ ಲಯಬದ್ಧವಾದ ಪಥಸಂಚಲನ ಕಣ್ಮನ ಸೆಳೆಯಿತು. ಪ್ರಸಕ್ತ ಸಾಲಿನ ಶಾಲಾ ವಿದ್ಯಾರ್ಥಿ ನಾಯಕರಾಗಿ ಯಶವಂತ್ ಡಿ. ಎಮ್. ಮತ್ತು ಧೃತಿ ಎಚ್.ಎಲ್. ಅವರು ಅಧಿಕಾರ ವಹಿಸಿಕೊಂಡರು. ಇವರೊಂದಿಗೆ ವಿವಿಧ ವಿಭಾಗಗಳ ನಾಯಕರಾಗಿ ಹಾಗೂ ವಿದ್ಯಾರ್ಥಿ ಸಂಸತ್ತಿನ ಸದಸ್ಯರಾಗಿ ಒಟ್ಟು ೨೮ ಪ್ರತಿಭಾವಂತ ವಿದ್ಯಾರ್ಥಿಗಳು ಜವಾಬ್ದಾರಿಗಳನ್ನು ವಹಿಸಿಕೊಂಡರು. ಸಂಸ್ಕೃತಿ, ಶಿಸ್ತು ಪಾಲನೆ, ಆರೋಗ್ಯ , ಮಕ್ಕಳ ಹಕ್ಕುಗಳ ರಕ್ಷಣೆ, ಕ್ರೀಡೆ, ಸಾಹಿತ್ಯ ಮತ್ತು ಮಾಧ್ಯಮ ಈ ವಿಭಾಗದ ನಾಯಕರು ಈ ಸಂದರ್ಭದಲ್ಲಿ ಜವಾಬ್ದಾರಿಯ ಪ್ರಮಾಣ ವಚನ ಸ್ವೀಕರಿಸಿದರು. ಶಾಲೆಯ ಪ್ರಾಂಶುಪಾಲರಾದ ನಂದೀಶ ಕೆ.ಎಸ್. ಅವರು ನೂತನ ವಿದ್ಯಾರ್ಥಿ ಸಂಸತ್ತಿನ ಸದಸ್ಯರಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾದ ತಾರಾ ಎಸ್. ಸ್ವಾಮಿ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಇರಬೇಕಾದ ಶಿಸ್ತು ಮತ್ತು ಮೌಲ್ಯಗಳ ಅಗತ್ಯತೆಯನ್ನು ಒತ್ತಿ ಹೇಳಿದರು. ಶಾಲಾ ಆವರಣ ಮತ್ತು ತರಗತಿಗಳ ಸ್ವಚ್ಛತೆ, ವಿದ್ಯಾರ್ಥಿಗಳ ವೈಯಕ್ತಿಕ ಆರೋಗ್ಯ, ನೈರ್ಮಲ್ಯ ಹಾಗೂ ದೈನಂದಿನ ಶಿಸ್ತಿನ ಬಗ್ಗೆ ಅವರು ವಿಶೇಷ ಕಳಕಳಿ ವ್ಯಕ್ತಪಡಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ಅಂಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲೆಯ ಶೈಕ್ಷಣಿಕ ಮುಖ್ಯಸ್ಥರಾದ ಡಾ. ಶ್ರೀ ಲಕ್ಷ್ಮೀ ಅವರು ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣಗಳು ನಿರಂತರವಾಗಿ ಬೆಳೆಯಬೇಕು, ಭವಿಷ್ಯದ ಆದರ್ಶ ಪ್ರಜೆಗಳಾಗಲು ಪೂರಕವಾಗಬೇಕು ಎಂದು ಪ್ರೋತ್ಸಾಹದಾಯಕ ನುಡಿಗಳನ್ನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ವೈ ಎನ್ ಸುಬ್ಬಸ್ವಾಮಿ ಅವರು ನೂತನ ನಾಯಕರಿಗೆ ಶುಭ ಹಾರೈಸುತ್ತಾ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಸತ್ತು ಶಾಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ. ಅಧಿಕಾರ ಎಂಬುದು ಕೇವಲ ಗೌರವವಲ್ಲ, ಅದೊಂದು ಅತ್ಯುನ್ನತ ಜವಾಬ್ದಾರಿ ಎಂದು ಆಶಿಸಿದರು. ತಮ್ಮ ಮಕ್ಕಳು ಶಾಲೆಯಲ್ಲಿ ಅತ್ಯುನ್ನತ ಜವಾಬ್ದಾರಿಯನ್ನು ಹೊತ್ತು, ಹೆಮ್ಮೆಯಿಂದ ಪ್ರಮಾಣ ವಚನ ಸ್ವೀಕರಿಸುತ್ತಿದ್ದ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಭಾರ ಕುಲಪತಿ ಪ್ರೊ.ಶಿವಚಿತ್ತಪ್ಪರನ್ನು ವಜಾಗೊಳಿಸಿ: ಗೌರ್ನರ್ ಗೆ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಮನವಿ
ಟ್ಯಾಂಕರ್ ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಸಾವು