ಕನ್ನಡಪ್ರಭ ವಾರ್ತೆ ಗುಡಿಬಂಡೆ
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಅಮಾನಿಬೈರಸಾಗರ ಕೆರೆಯ ಮೂಲದಿಂದ ಗುಡಿಬಂಡೆ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಯ ಶಂಕುಸ್ಥಾಪನೆಯ ಬಳಿಕ ಮಾದ್ಯಮಗಳೊಂದಿಗೆ ಅವರು ಮಾತನಾಡಿದರು.
ಬಡವರ ಪರ ಕೆಲಸ ಮಾಡುವ ಮೋದಿಇಂದು ದೇಶದ ಬಡವರ ಪರ ಕೆಲಸ ಮಾಡುವ ಏಕೈಕ ಸರ್ಕಾರ ನರೇಂದ್ರ ಮೋದಿ ಸರ್ಕಾರ ಎಂದು ಹೇಳಬಹುದು. ಈಗಾಗಲೇ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆ ಮನೆಗೂ ನಲ್ಲಿ ಮೂಲಕ ನೀರು ಕೊಡುವಂತಹ ಕೆಲಸ ಬಹುತೇಕ ಪೂರ್ಣಗೊಳ್ಳುತ್ತಿದೆ. ಅದರ ಮುಂದುವರೆದ ಭಾಗವಾಗಿ ನಗರ ಹಾಗೂ ಪಟ್ಟಣದ ವ್ಯಾಫ್ತಿಯಲ್ಲಿ ವಾಸಿಸುವಂತಹ ಜನರಿಗ ಅನುಕೂಲವಾಗುವ ನಿಟ್ಟಿನಲ್ಲಿ ಅಮೃತ್ 2.0 ಯೋಜನೆಯ ಮೂಲಕ ನಲ್ಲಿ ಮೂಲಕ ನೀರು ಒದಗಿಸುವ ಯೋಜನೆಯಾಗಿದೆ ಎಂದರು
ಭರವಸೆ ಈಡೇರಿಸಿದ್ದೇನೆ
ಲೋಕಸಭಾ ಚುನಾವಣೆ ಸಮಯದಲ್ಲಿ ನಾನೂ ಸಹ ನೀರು ಒದಗಿಸುವ ಯೋಜನೆಯನ್ನು ತರುತ್ತೇನೆ ಎಂದು ಭರವಸೆ ನೀಡಿದ್ದೆ. ಅದರಂತೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಸುಮಾರು 300 ಕೋಟಿಯಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಕುಡಿಯುವ ನೀರಿನ ಯೋಜನೆಗೆ ನೀಡಿದೆ. ಈ ಯೋಜನೆಯನ್ನು ಒಂದೂವರೆ ವರ್ಷದೊಳಗೆ ಮುಗಿಸುತ್ತೇವೆ. ಜನರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಯೋಜನೆಗೆ ಸ್ಥಳೀಯ ಸಚಿವರು, ಶಾಸಕರು ಬೆಂಬಲ ಹಾಗೂ ಸಹಕಾರ ನೀಡಿದ್ದಾರೆ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.