ಕನ್ನಡಪ್ರಭ ವಾರ್ತೆ ನೆಲಮಂಗಲ
ನಗರದ ಶ್ರೀ ಜಯದೇವ ನಗರ ಭವನ ಬಿಜೆಪಿ ಹಮ್ಮಿಕೊಂಡಿದ್ದ ಗ್ರಾಮಾಂತರ ಜಿಲ್ಲಾ ಮಟ್ಟದ ಅಹಲ್ಯಾಬಾಯಿ ಹೋಳ್ಕರ್ 300ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಅಹಲ್ಯಬಾಯಿ ಅವರು ಸಣ್ಣ ವಯಸ್ಸಿನಲ್ಲೇ ಪತಿಯನ್ನು ಕಳೆದುಕೊಂಡು ಧೃತಿಗೆಡದೆ ಸೈನ್ಯ ಕಟ್ಟಿ, ಹಿಂದು ದೇವಾಲಯಗಳನ್ನು ರಕ್ಷಿಸಿ ಔರಂಗಜೇಬನನ್ನು ಹಿಮ್ಮೆಟ್ಟಿಸಿದ್ದಳು. ಹಿಂದು ಹೆಣ್ಣುಮಕ್ಕಳಿಗೆ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಹ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಪ್ರತಿಯೊಬ್ಬ ಹೆಣ್ಣುಮಕ್ಕಳು ಪಣತೊಡಬೇಕು, ಆದ್ದರಿಂದಲೇ ಇದನ್ನು ಮಹಿಳಾ ಸಮಾವೇಶದ ರೀತಿಯಲ್ಲಿ ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದರು.
ಮಂಗಳೂರಿನಲ್ಲಿ ಪೊಲೀಸರ ಮೂಲಕ ಹಿಂದುಗಳನ್ನು ಬೆದರಿಸಿ ದುಂಡಾವರ್ತನೆ ತೋರುತ್ತಿದೆ, ಕೇಸ್ಗಳನ್ನು ದಾಖಲಿಸುತ್ತಿದೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದೆ ಎಂದರು. ತಮಿಳಿನಿಂದ ಕನ್ನಡ ಹುಟ್ಟಿದೆ ಎನ್ನುವ ತಮಿಳು ನಟ ಕಮಲಹಾಸನ್ ಉಚ್ಚನ್ಯಾಯಾಲಯದ ನಿರ್ದೇಶನದಂತೆ ಕೂಡಲೆ ಕ್ಷಮೆ ಯಾಚಿಸಬೇಕು ಎಂದರು.ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಹಲ್ಯಾಬಾಯಿ ಹೋಳ್ಕರ್ ಅವರ ಭಾವಚಿತ್ರವನ್ನು ಪ್ರವಾಸಿ ಮಂದಿರದಿಂದ ಜಯದೇವ ಭವನದ ವರೆಗೆ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಜಯೇಂದ್ರ ಅವರಿಗೆ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸ್ವಾಗತಿಸಲಾಯಿತು. ಕಾಂಗ್ರೆಸ್ ಯುವಮುಖಂಡ ಅರುಣ್ಕಮಾರ್ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಪೊಲೀಸರು ಮುಖಂಡರ ನಡುವೆ ಮಾತಿನ ಚಕಮಕಿ:
ಮೆರವಣಿಗೆಯಲ್ಲಿ ಡಿ.ಜೆ.ಬಳಸುತ್ತಿರುವುದನ್ನು ನಿಲ್ಲಿಸುವಂತೆ ಪೊಲೀಸರು ತಡೆಯಲು ಬಂದಾಗ ಬಿಜೆಪಿ ಮುಖಂಡರು ಹಾಗು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಡಿಜೆ ಬದಲಾಗಿ ಮೈಕ್ ಬಳಸುವಂತೆ ಸೂಚಿಸಿದರೂ ಡಿಜೆ ನಿಲ್ಲಿಸದೆ ಮೆರವಣಿಗೆ ನಡೆಯಿತು.ಪೊಟೊ-3ಕೆಎನ್ಎಲ್ಎಮ್1-ನೆಲಮಂಗಲ ನಗರದ ಶ್ರೀ ಜಯದೇವ ನಗರ ಭವನ ಬಿಜೆಪಿ ಹಮ್ಮಿಕೊಂಡಿದ್ದ ಗ್ರಾಮಾಂತರಜಿಲ್ಲಾ ಮಟ್ಟದ ಅಹಲ್ಯಾಬಾಯಿ ಹೋಳ್ಕರ್ 300ನೇ ಜನ್ಮದಿನಾಚರಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಉದ್ಘಾಟಿಸಿದರು.