ಧಾರವಾಡ:
ಸಮ್ಮೇಳನಕ್ಕೆ ಚಾಲನೆ ನೀಡಿದ ಸಾಹಿತಿ ಡಾ. ಮೃತ್ಯುಂಜಯ ರುಮಾಲೆ ಮಾತನಾಡಿ, ಸಾಹಿತ್ಯ ಹೇಳುವ ಸತ್ಯಕ್ಕೆ ಪ್ರಭುತ್ವ ಹೆದರುತ್ತದೆ, ಹೆದರಬೇಕು. ಸಾಹಿತ್ಯ ತನ್ನ ಸತ್ಯ ಪ್ರತಿಪಾದನೆಯಿಂದ ಪ್ರಭುತ್ವವನ್ನು ಎದುರು ಹಾಕಿಕೊಳ್ಳುತ್ತದೆ, ಎದುರು ಹಾಕಿಕೊಳ್ಳಬೇಕು ಎಂದರು.
ಕವಿ, ಸಾಹಿತಿ ತಾನು ಪ್ರತಿಪಾದಿಸಬೇಕಾದ ಸತ್ಯ ಮತ್ತು ಮೌಲ್ಯಗಳಲ್ಲಿ ಅಹಂಕಾರವೂ ವಿನಯವೂ ಮಿತಿ ಮೀರದಂತೆ ಇರಬೇಕು. ಇದು ಇಂದಿನ ಬಹು ಮುಖ್ಯ ಅವಶ್ಯಕತೆಯಾಗಿದೆ. ಆದರೆ, ಇದರ ಕೊರತೆ ಇಂದು ಎದ್ದು ಕಾಣುತ್ತಿದೆ ಎಂದರು.ಕವಿ ಅಥವಾ ಸಾಹಿತಿ ಹೇಳುವ ಸತ್ಯವನ್ನು ಅರ್ಥ ಮಾಡಿಕೊಳ್ಳುವ ಸೂಕ್ಷ್ಮತೆಯನ್ನು ಸಮಾಜ ಹೊಂದಿರುವುದು ಒಂದೆಡೆ ಇರುವುದಿಲ್ಲ. ಆತನಿಗೆ ಸಮಾಜದ ಸೂಕ್ಷ್ಮತೆ ಅರ್ಥ ಮಾಡಿಕೊಳ್ಳದ ಸ್ಥಿತಿಗೆ ತಲುಪುವುದು ನಮ್ಮ ಕಾಲದ ಸಾಂಸ್ಕೃತಿಕ ವಿದ್ಯಮಾನದ ಪರಿಸ್ಥಿತಿಯಾಗಿದೆ ಎಂದು ಹೇಳಿದರು.
ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಸಾಹಿತ್ಯ ಉಳಿದಿದ್ದು ಧಾರವಾಡದಲ್ಲಿ, ಈಗ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಯಾಗಿದ್ದು, ಮುಂದೆ ಇದು ಸಾಹಿತ್ಯ ಪರಿಷತ್ನ ೨ನೇ ರಾಜಧಾನಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಮಾಜಿ ಶಾಸಕಿ ಸೀಮಾ ಮಸೂತಿ, ಈರೇಶ ಅಂಚಟಗೇರಿ, ಸತೀಶ ತುರಮರಿ, ಡಾ. ಡಿ.ಎಂ. ಹಿರೇಮಠ, ಶಂಕರ ಕುಂಬಿ, ಡಾ. ಜೀನದತ್ ಹಡಗಲಿ, ಶಂಕರ ಹಲಗತ್ತಿ ಸೇರಿದಂತೆ ಅನೇಕರು ವೇದಿಕೆಯಲ್ಲಿದ್ದರು. ಪ್ರೊ. ಕೆ.ಎಸ್. ಕೌಜಲಗಿ ನಿರೂಪಿಸಿದರು. ಕನ್ನಡಾಭಿಮಾನಿಗಳು, ಕಾಲೇಜು ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಸೇರಿದಂತೆ ಸಾವಿರಾರೂ ಸಂಖ್ಯೆಯಲ್ಲಿ ಜನತೆ ಸೇರಿದ್ದರು.