ಕನ್ನಡಪ್ರಭ ವಾರ್ತೆ ಕೋಲಾರ
ಮನವಿ ಸ್ವೀಕರಿಸಿ ಮಾತನಾಡಿ, ಸರ್ಕಾರಿ ನೌಕರರ ಅತಿ ಪ್ರಮುಖ ಬೇಡಿಕೆಗಳಾದ ೭ನೇ ವೇತನ ಆಯೋಗದ ವರದಿ ಅನುಷ್ಠಾನ, ಹಳೆ ಪಿಂಚಣಿ ಜಾರಿ ಪರಿಶೀಲನೆಯಲ್ಲಿದ್ದು, ಉಳಿದಂತೆ ನಗದು ರಹಿತ ಚಿಕಿತ್ಸೆ ಆರೋಗ್ಯ ಸಂಜೀವಿನಿ ತಕ್ಷಣ ಜಾರಿಗೆ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.
7ನೇ ವೇತನ ಆಯೋಗ ವರದಿಗೆ ಅಸ್ತು೭ನೇ ವೇತನ ಆಯೋಗದ ವರದಿ ಜಾರಿಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ, ನಾನೂ ಸಿಎಂ ಜತೆಗೆ ಮಾತನಾಡುವೆ ಎಂದು ತಿಳಿಸಿ, ನೌಕರರಿಗೆ ನಗದು ರಹಿತ ಆರೋಗ್ಯ ಸೇವೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸೂಚಿಸಿರುವುದರಿಂದ ಆರೋಗ್ಯ ಇಲಾಖೆ ಆಯುಕ್ತರು ಕೂಡಲೇ ಕಡತ ಮಂಡಿಸಲು ಸೂಚಿಸಿದ್ದಾಗಿ ತಿಳಿಸಿದರು.
ಹಳೆ ಪಿಂಚಣಿ ಯೋಜನೆ ಜಾರಿಯಾಗಲಿ
ಅದರಂತೆ ನಮ್ಮ ಪ್ರಮುಖ ಬೇಡಿಕೆಗಳಾದ ರಾಜ್ಯ ೭ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು, ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು ಮತ್ತು ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಲು ಕೋರಲಾಗಿದ್ದು, ಈಗಾಗಲೇ ಮುಖ್ಯಮಂತ್ರಿಗಳು ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸರ್ವೇ ಇಲಾಖೆ ರಾಜ್ಯಾಧ್ಯಕ್ಷ ಶ್ರೀಕಂಠ, ಕಾರ್ಯಾಧ್ಯಕ್ಷ ಲೋಕೇಶ್,ವೆಂಕಟರಾವ್ ಇಟಗಿ, ಪದಾಧಿಕಾರಿಗಳಾದ ಚೇತನ್,ರಂಗಸ್ವಾಮಿ, ನೌಕರರ ಸಂಘದ ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಶಿಕ್ಷಕ ಗೆಳೆಯರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ಎನ್.ಮಂಜುನಾಥ್, ಶಿಕ್ಷಕ ಮಂಜುನಾಥ್, ಗೆಳೆಯರ ಬಳಗದ ವೆಂಕಟಾಚಲಪತಿಗೌಡ,ಸೋಮಶೇಖರ್, ಸರ್ವೇ ಇಲಾಖೆ ರವಿ ಇದ್ದರು.