- ಒಂದು ವರ್ಷದಲ್ಲಿ ಸಿಎಂ, ಡಿಸಿಎಂ ಅಭಿವೃದ್ಧಿ ಕಾರ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ?: ಮಾಜಿ ಸಚಿವ ಪ್ರಶ್ನೆ
- ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶೇ.04 ಸಹ ಕಮಿಷನ್ ಪಡೆದಿಲ್ಲ, ಈಗಿರುವುದು ಶೇ.100 ಕಮಿಷನ್ ಸರ್ಕಾರ
- ವಾಲ್ಮೀಕಿ ನಿಗಮ ಹಗರಣದಲ್ಲಿ ₹187 ಕೋಟಿ ಅಲ್ಲ, ₹89 ಕೋಟಿ ಎಂದು ಸದನದಲ್ಲೇ ಸಿಎಂ ಹೇಳಿಕೆ ಭ್ರಷ್ಟಾಚಾರ ಒಪ್ಪಿದಂತಾಗಿದೆ- - -
ರಾಜ್ಯದಲ್ಲಿ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ ಎಂಬುದೇ ಗೊತ್ತಾಗುತ್ತಿಲ್ಲ. ಅಧಿಕಾರದಲ್ಲಿ ಇರುವುದಕ್ಕೂ ಇದು ನಾಲಾಯಕ್ ಸರ್ಕಾರವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಬಂದ ನಂತರ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಶಂಕುಸ್ಥಾಪನೆಯಾಗಿಲ್ಲ. ಆ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ. ಭ್ರಷ್ಟಾಚಾರವೆಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ. ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ, ಪೇ ಸಿಎಂ ಅಂತೆಲ್ಲಾ ಅಪಪ್ರಚಾರ ಮಾಡಿದ್ದರು. ಬಿಜೆಪಿ ಸರ್ಕಾರ ಶೇ.40 ಅಲ್ಲ, ಶೇ.04 ರು. ಸಹ ಕಮೀಷನ್ ಪಡೆಯದ ಸರ್ಕಾರ. ಆದರೆ, ರಾಜ್ಯದಲ್ಲಿ ಈಗಿರುವುದು ಶೇ.100 ಕಮಿಷನ್ ಸರ್ಕಾರ ಎಂದು ಆರೋಪಿಸಿದರು.
ಮೈಸೂರಿನ ಮುಡಾ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತೊಂದು ಸೈಟ್ ಹಗರಣಾಗಿದೆ. ತಮ್ಮ ಪತ್ನಿಗೆ ಕುಂಕುಮದ ರೂಪದಲ್ಲಿ ಜಮೀನು ನೀಡಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದರೆ, 2013ರ ಚುನಾವಣೆಯಲ್ಲಿ ಯಾವ ಕಾರಣಕ್ಕೆ ನಿವೇಶನದ ಬಗ್ಗೆ ಮಾಹಿತಿ ನೀಡಲಿಲ್ಲ? ಪಾರದರ್ಶಕ ತನಿಖೆಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಎರಡೂ ದೊಡ್ಡ ಹಗರಣಗಳ ತನಿಖೆ ಸಿಬಿಐಗೆ ಒಪ್ಪಿಸಬೇಕು ಎಂದರು.
- - -
ದಾವಣಗೆರೆ: ದಾವಣಗೆರೆ ಲೋಕಸಭೆ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಸ್ವಯಂಕೃತ ಅಪರಾಧ ಕಾರಣವೇ ಹೊರತು, ನಾವ್ಯಾರೂ ಕಾರಣರಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
- - -
ಟಾಪ್ ಕೋಟ್ಲಗಾನ್ ಟೀಂ ಅಂತೆಲ್ಲಾ ನಮ್ಮನ್ನು ಅಂದವರು. ಇನ್ನು ಮುಂದೆ ನಮ್ಮ ಬಗ್ಗೆ ಏನಾದರೂ ಮಾತನಾಡಿದರೆ ನಾವಂತೂ ಸುಮ್ಮನಿರುವುದಿಲ್ಲ. ಮಾಜಿ ಸಂಸದ ಸಿದ್ದೇಶ್ವರರ ಜನ್ಮದಿನದ ಸಮಾರಂಭದ ಬಗ್ಗೆ ನಮಗೆ ಗೊತ್ತೇ ಇಲ್ಲ. ನಮ್ಮನ್ನು ಯಾರೂ ಕಾರ್ಯಕ್ರಮಕ್ಕೂ ಆಹ್ವಾನಿಸಿಲ್ಲ. ಅವ್ರು (ಸಿದ್ದೇಶ್ವರ) ಹಿರಿಯರು, ಜನ್ಮದಿನ ಮಾಡಿದ್ದಾರೆ. ಸಂತೋಷದ ಸಂಗತಿ
- ಎಂ.ಪಿ. ರೇಣುಕಾಚಾರ್ಯ, ಮಾಜಿ ಸಚಿವ- - - -17ಕೆಡಿವಿಜಿ35, 36: ದಾವಣಗೆರೆಯಲ್ಲಿ ಬುಧವಾರ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.