ಕನ್ನಡಪ್ರಭ ವಾರ್ತೆ ಬಳ್ಳಾರಿ
ವಿಧಾನಪರಿಷತ್ತಿನಲ್ಲಿ ಚುಕ್ಕೆ ಪ್ರಶ್ನೆ ಕೇಳಿದ ಬಳ್ಳಾರಿ-ವಿಜಯನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ, ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಗಳು ನಿಯಮಿತವಾಗಿ ನಡೆಯುತ್ತಿಲ್ಲ. ಅಲ್ಲದೇ, ಇಬ್ಬರು ಶಾಸಕರು ಪ್ರಾಧಿಕಾರದ ಅಧ್ಯಕ್ಷರ ವಿರುದ್ಧ ಕರ್ತವ್ಯಲೋಪ-ಭ್ರಷ್ಟಾಚಾರ ಆರೋಪ ಮಾಡಿ ಸರ್ಕಾರಕ್ಕೆ ಪತ್ರ ಬರೆದು, ತನಿಖೆ ನಡೆಸಲು ಒತ್ತಾಯಿಸಿದ್ದರು.
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜಿನೇಯಲು ಅವರ ವಿರುದ್ಧ ಇಬ್ಬರು ಶಾಸಕರು ನಡೆಸಿದ್ದ ಆರೋಪಗಳ ಕುರಿತು ತನಿಖೆಯೂ ನಡೆಯಿತು. 2024 ರ ಜುಲೈ 8ರಂದು ಕೊನೆಯ ಸಭೆ ನಡೆದಿದೆ. ಆ ನಂತರ ಸಭೆಯು ನಡೆಯದ ಕಾರಣ ಹೊಸ ಲೇಔಟ್ಗಳ ಪರವಾನಿಗೆ, ಸೈಟುಗಳ ಮಾರಾಟ-ಖರೀದಿ ಅಥವಾ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ.ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಳ್ಳಾರಿಯ ಅಧಿದೇವತೆ ಶ್ರೀಕನಕ ದುರ್ಗಮ್ಮ ಗುಡಿಯ ಸಮೀಪದ ರೈಲ್ವೆ ಅಂಡರ್ ಬ್ರಿಡ್ಜ್ ವಿಸ್ತರಿಸಲು ಐದು ವರ್ಷಗಳಿಂದಾಗಿಲ್ಲ. ಈ ಕಾಮಗಾರಿಗಾಗಿ ₹8.84 ಕೋಟಿಯನ್ನು 2022 ನವೆಂಬರ್ನನಲ್ಲಿ ರೈಲ್ವೆಗೆ ಪಾವತಿಸಲಾಗಿದೆ. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಈವರೆಗೂ ರಸ್ತೆ ವಿಸ್ತರಣೆಗೆ ಭೂಮಿ ಗುರುತಿಸಿ, ನೀಡುವಲ್ಲಿ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ ಏಕೆ? ಎಂದು ಪ್ರಶ್ನೆ ಮಾಡಿದರು.