ಕನ್ನಡಪ್ರಭ ವಾರ್ತೆ ಹಾಸನ
ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಸರ್ಕಾರ ನಿಗದಿಪಡಿಸಿರುವ ತಾತ್ಕಾಲಿಕ ೧೦ ದರವನ್ನು ತಕ್ಷಣ ಜಾರಿಗೊಳಿಸಬೇಕು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲು ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು. ಕೋಳಿ ಸಾಕಾಣಿಕೆಯನ್ನು ಕೃಷಿ ಚಟುವಟಿಕೆಯಾಗಿ ಪರಿಗಣಿಸಿ ಕೃಷಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳನ್ನು ಕೋಳಿ ಸಾಕಾಣಿಕೆದಾರರಿಗೂ ವಿಸ್ತರಿಸಬೇಕು. ವಿದ್ಯುತ್ ಉಚಿತವಾಗಿ ನೀಡಬೇಕು ಹಾಗೂ ಸಹಕಾರ ಬ್ಯಾಂಕ್ಗಳ ಮೂಲಕ ಶೇ. ೪ರ ಬಡ್ಡಿದರದಲ್ಲಿ ೨೫ ಲಕ್ಷದವರೆಗೆ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು. ಅದೇ ರೀತಿ, ಕೆಎಂಎಫ್ ಮಾದರಿಯಲ್ಲಿ ಕೋಳಿ ಸಾಕಾಣಿಕೆದಾರರಿಗೆ ಸಹಾಯಧನ ನೀಡಬೇಕು ಮತ್ತು ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ಕೋಳಿ ಸಾಕಾಣಿಕೆ ಕ್ಷೇತ್ರಕ್ಕೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ. ಕೋಳಿ ಸಾಕಾಣಿಕೆದಾರರ ಹಿತಾಸಕ್ತಿ ಕಾಪಾಡಲು ಕುಕ್ಕುಟ ನಿಯಂತ್ರಣ ಕಾಯ್ದೆ ಜಾರಿಗೆ ತರಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.