ಮಾದಕ ವಸ್ತು ಸೇವನೆಯಿಂದ ದೇಶದ ಬೆಳವಣಿಗೆ ಕುಂಠಿತ: ಜಯಪ್ರಕಾಶ

KannadaprabhaNewsNetwork |  
Published : Jul 02, 2024, 01:31 AM IST
26ಕೆಪಿಎಲ್28 ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧುವಾರದಂದು ಕಾಲೇಜಿನ ಐಕ್ಯೂಎಸಿ, ರೆಡ್‌ಕ್ರಾಸ್ ಘಟಕಗಳು ಹಾಗೂ ಕೊಪ್ಪಳ ನಗರ ಪೋಲಿಸ್ ಠಾಣೆಯ ಸಹಯೋಗದಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣಿಕೆ ತಡೆಯುವ ಕುರಿತು ವಿಶೇಷ ಕಾರ್ಯಕ್ರಮ | Kannada Prabha

ಸಾರಾಂಶ

ಮಾದಕ ವಸ್ತುಗಳ ಸೇವನೆಯಿಂದ ದೇಶದ ಬೆಳವಣಿಗೆಗೆ ಕುಂಠಿತವಾಗುತ್ತದೆ.

ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣಿಕೆ ತಡೆಯುವ ಕುರಿತು ವಿಶೇಷ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಕೊಪ್ಪಳ

ಮಾದಕ ವಸ್ತುಗಳ ಸೇವನೆಯಿಂದ ದೇಶದ ಬೆಳವಣಿಗೆಗೆ ಕುಂಠಿತವಾಗುತ್ತದೆ ಎಂದು ಕೊಪ್ಪಳ ನಗರ ಪೋಲಿಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಜಯಪ್ರಕಾಶ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕಾಲೇಜಿನ ಐಕ್ಯೂಎಸಿ, ರೆಡ್‌ಕ್ರಾಸ್ ಘಟಕಗಳು ಹಾಗೂ ಕೊಪ್ಪಳ ನಗರ ಪೋಲಿಸ್ ಠಾಣೆಯ ಸಹಯೋಗದಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣಿಕೆ ತಡೆಯುವ ಕುರಿತು ವಿಶೇಷ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಯುವಜನತೆ ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಮಾದಕ ಜಾಲಕ್ಕೆ ತುತ್ತಾಬಾರದು. ಚೆನ್ನಾಗಿ ಓದಬೇಕು. ಕೆಟ್ಟಚಟಕ್ಕೆ ಬಲಿಯಾಗಬಾರದು. ಗಾಂಜಾ, ಅಫಿಮುದಂತಹ ಕೆಟ್ಟ ಹವ್ಯಾಸಗಳಿಗೆ ಬಲಿಯಾಗಬಾರದು. ನಿಮ್ಮ ಮನೆಯಲ್ಲಿ ಮತ್ತು ಸಮಾಜದಲ್ಲಿ ಮಾದಕ ವಸ್ತುಗಳ ನಿಷೇಧದ ಕುರಿತು ಜಾಗೃತಿ ಮೂಡಿಸಬೇಕು. ಕುಡಿಯುವ ವ್ಯಕ್ತಿಗಳು ಮನೆಯಲ್ಲಿ ಹೆಚ್ಚು ದೌರ್ಜನ್ಯಗಳನ್ನು ನಡೆಸುತ್ತಿದ್ದಾರೆ. ಮಾದಕ ವಸ್ತುಗಳು ಸೇವಿಸಿದರೆ ಕ್ಯಾನ್ಸರ್ ಬರುತ್ತೆ. ಮಾದಕ ವಸ್ತುಗಳನ್ನು ಸೇವಿಸಿ ಸಂಸಾರವನ್ನೆ ಹಾಳು ಮಾಡಿಕೊಳ್ಳಬೇಡಿ. ಕ್ಷಣಿಕ ಸುಖಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಳ್ಳಬಾರದು. ತಂದೆ-ತಾಯಿಗಳು ನಿಮ್ಮ ಮೇಲೆ ಬಹಳ ಆಸೆ ಇಟ್ಟುಕೊಂಡಿದ್ದಾರೆ. ಅವರ ಅಸೆಯನ್ನು ನಿರಾಸೆ ಮಾಡಬೇಡಿ. ಯುವಕರಿಂದ ಮಾತ್ರ ದೇಶ ಬದಲಾವಣೆ ಸಾಧ್ಯ. ಮನೆಯಲ್ಲಿ ತಂದೆ, ಅಣ್ಣ ತಮ್ಮಿಂದಿರು ರಾತ್ರಿ ತಡವಾಗಿ ಬಂದರೆ ಅದನ್ನು ನೀವು ಪ್ರಶ್ನೆ ಮಾಡಬೇಕು. ದೇಶದ ಅತ್ಯುನ್ನತ ಸ್ಥಾನಗಳಲ್ಲಿ ಮಹಿಳೆಯರೇ ಇದ್ದಾರೆ. ಆದ್ದರಿಂದ ನೀವು ಉನ್ನತ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗಗಳನ್ನು ಪಡೆದುಕೊಳ್ಳಿರಿ. ಹೆಣ್ಣುಮಕ್ಕಳು ಆಮಿಷಕ್ಕೆ ಒಳಗಾಗಬೇಡಿ. ನಿಮಗೆ ಸಮಸ್ಯೆಗಳು ಬಂದಾಗ ಪೊಲೀಸ್ ಇಲಾಖೆಗೆ ತಿಳಿಸಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಮಾತನಾಡಿ, ಮಹಿಳೆಯರಲ್ಲಿ ಪುರುಷರನ್ನು ಬದಲಾವಣೆ ಮಾಡುವ ಮತ್ತು ಸಮಾಜ ಪರಿವರ್ತನೆ ಮಾಡುವ ಶಕ್ತಿಯಿದ್ದು, ನೀವು ಸಮಾಜದಲ್ಲಿರುವ ಮಾದಕ ವ್ಯಸನಿಗಳನ್ನು ಪರಿವರ್ತನೆ ಮಾಡಬೇಕು ಎಂದು ಹೇಳಿದರು

ಈ ಸಂದರ್ಭದಲ್ಲಿ ಕೊಪ್ಪಳ ಪೊಲೀಸ್ ಇಲಾಖೆಯ ಅಧಿಕಾರಿಗಳಾದ ಉಮೇರಾ ಭಾನು, ಶ್ರೀಶೈಲರಾವ್ ಕುಲಕರ್ಣಿ, ಕಾಲೇಜಿನ ಉಪನ್ಯಾಸಕರಾದ ವಿಠೋಬ, ಡಾ. ಪ್ರದೀಪ್‌ಕುಮಾರ, ಡಾ. ನರಸಿಂಹ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ವಿದ್ಯಾರ್ಥಿನಿಯರಿಗೆ ಮಾದಕ ವಸ್ತುಗಳ ಕುರಿತು ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ಪೊಲೀಸ್‌ ಇಲಾಖೆಯ ಕರಿಬಸಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ
ಕಾರ್ಯಭಾರ ಆಧರಿಸಿ ಶಿಕ್ಷಕರ ನೇಮಕ - ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿ