ಗುರಿ ತಲುಪಲು ಗುರು, ಹಿರಿಯರ ಮಾರ್ಗದರ್ಶನ ಮುಖ್ಯ

KannadaprabhaNewsNetwork |  
Published : Nov 22, 2024, 01:16 AM IST
ಭದ್ರಾವತಿ ತಾಲೂಕಿನ ಶ್ರೀಶಾ ಕಲಾ ವೇದಿಕೆ, ಶಂಕರಘಟ್ಟ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಬಿ.ಆರ್ ಪ್ರಾಜೆಕ್ಟ್ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಮುಖರಾದ ದಾಳೇಗೌಡ, ಸಿ.ಎನ್ ಉಮೇಶ್, ಶ್ರೀಧರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಶಿಕ್ಷಕರು ಉಪಸ್ಥಿರಿದ್ದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ತಮ್ಮಲ್ಲಿನ ಪ್ರತಿಭೆಗಳ ಮೂಲಕ ಗುರು, ಹಿರಿಯರ ಮಾರ್ಗದರ್ಶನ ಪಡೆದು ಗುರಿ ತಲುಪಬೇಕು ಎಂದು ಸಿರಿಗನ್ನಡ ವೇದಿಕೆ ರಾಜ್ಯ ಸಮಿತಿ ಉಪಾಧ್ಯಕ್ಷ ಸಿ.ಎನ್ ಉಮೇಶ್ ಹೇಳಿದರು.

ತಾಲೂಕಿನ ಶ್ರೀಶಾ ಕಲಾ ವೇದಿಕೆ, ಶಂಕರಘಟ್ಟ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಬಿ.ಆರ್.ಪ್ರಾಜೆಕ್ಟ್ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳು ಚನ್ನಾಗಿ ಓದಿ ವಿದ್ಯಾವಂತರಾಗಿ, ಪಾಠ, ಪಠ್ಯೇತರ ಚಟುವಟಿಕೆಗಳ ಜೊತೆಗೆ ತಮ್ಮಲ್ಲಿನ ಪ್ರತಿಭೆ ಮೂಲಕ ಆಸಕ್ತಿ ಇರುವಂತಹ, ತಮಗೆ ತಿಳಿದಿರುವಂತಹ ಕ್ಷೇತ್ರದಲ್ಲಿಯೇ ಮುಂದುವರೆಯಬೇಕು. ಆ ಮೂಲಕ ದೇಶಕ್ಕೆ, ನಾಡಿಗೆ ಕೀರ್ತಿ ತಂದ ದಿಜ್ಜಗರ ಸಾಲಿನಲ್ಲಿ ನೀವು ಒಬ್ಬರಾಗಬೇಕು ಎಂದು ಹೇಳಿದರು.

ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಮತ್ತು ಕನ್ನಡದಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಸನ್ಮಾನಿಸಲಾಯಿತು.

ನಿವೃತ್ತ ಅಭಿಯಂತರ, ಪತ್ರ ಸಂಸ್ಕೃತಿ ಸಂಸ್ಥಾಪಕ ದಾಳೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀಶಾ ಕಲಾ ವೇದಿಕೆ ಗೌರವಾಧ್ಯಕ್ಷ ಶ್ರೀಧರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಾ ಮತ್ತು ಹಿತಾ ಪ್ರಾರ್ಥಿಸಿ, ಶಿಕ್ಷಕಿ ರಂಜಿತಾ ಕಾರ್ಯಕ್ರಮ ನಿರೂಪಿಸಿದರು. ಆಶಾ ಶ್ರೀಧರ್ ವಂದಿಸಿದರು. ದಾಳೇಗೌಡ ದಂಪತಿ ಹಾಗು ಶಾಲೆಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ