ಸನಾತನ ಸಂಸ್ಕೃತಿಯಲ್ಲಿ ಗುರುವಿಗೆ ಪೂಜನೀಯ ಸ್ಥಾನ

KannadaprabhaNewsNetwork |  
Published : Apr 14, 2025, 01:19 AM IST
ಪೋಟೋ: ದಿ.13-ಅರ್.ಪಿ.ಟಿ.1ಪಿ ರಿಪ್ಪನ್‍ಪೇಟೆ ಸಮೀಪದ ಗರ್ತಿಕೆರೆ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನೂತನ ರಥ ಮತ್ತು ರಜತ ಕವಚ ಸಮರ್ಪಣೆ ಮತ್ತು ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಲಾಯಿತು.  | Kannada Prabha

ಸಾರಾಂಶ

ರಿಪ್ಪನ್‍ಪೇಟೆ: ಸನಾತನ ಸಂಸ್ಕೃತಿಯಲ್ಲಿ ಭಗವಂತನಿಂಗಿತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರ ಕೀರ್ತಿಭಟ್ಟಾರಕ ಸ್ವಾಮೀಜಿ ತಿಳಿಸಿದರು.

ರಿಪ್ಪನ್‍ಪೇಟೆ: ಸನಾತನ ಸಂಸ್ಕೃತಿಯಲ್ಲಿ ಭಗವಂತನಿಂಗಿತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರ ಕೀರ್ತಿಭಟ್ಟಾರಕ ಸ್ವಾಮೀಜಿ ತಿಳಿಸಿದರು.

ರಿಪ್ಪನ್‍ಪೇಟೆ ಸಮೀಪದ ಗರ್ತಿಕೆರೆ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನೂತನ ರಥ ಮತ್ತು ರಜತ ಕವಚ ಸಮರ್ಪಣೆ ಮತ್ತು ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಭಾರತೀಯ ಸಂಸ್ಕೃತಿಯ ಸನಾತನ ಧರ್ಮದ ಗ್ರಂಥಗಳನ್ನು ವಿದೇಶಿಗರು ಅಧ್ಯಯನ ಮಾಡುವ ಮೂಲಕ ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ತಮ್ಮ ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುತ್ತಿದ್ದು ಹೆಮ್ಮಯ ಸಂಗತಿಯಾಗಿದೆ ಎಂದರು.

ಅದರೆ ನಮ್ಮ ಭಾರತೀಯರು ಇನ್ನೂ ಜಿಜ್ಞಾಸೆಗಳಲ್ಲಿ ಕಾಲಕಳೆಯುತ್ತಿದ್ದಾರೆ. ವಿದೇಶಿಗರು ಅತ್ಯಧಿಕ ಸಂಪತ್ತು ಹೊಂದಿ ಐಶಾರಾಮಿ ಜೀವನ ನಡೆಸುತ್ತಿದ್ದರೂ ಕೂಡಾ ಎಲ್ಲವನ್ನು ತೊರೆದು ಭಾರತೀಯ ಸಂಸ್ಕೃತಿ ಸಂಸ್ಕಾರಕ್ಕೆ ಮಾರು ಹೋಗಿ ಭಾರತ ದೇಶದ ಆಶ್ರಮಗಳಲ್ಲಿ ಸೇವೆಯ ಮೂಲಕ ನೆಮ್ಮದಿಯನ್ನು ಕಾಣುತ್ತಿದ್ದಾರೆ ಎಂದು ಹೇಳಿದರು.

15-16ನೇ ಶತಮಾನದ ಭಕ್ತಿ ಪರಂಪರೆಯ ಕಾಲಘಟ್ಟ ಕನಕದಾಸ ಪುರಂದರದಾಸ ಹಾಗೂ ರಾಘವೇಂದ್ರ ಸ್ವಾಮಿಗಳು ದೈವಾರಾಧನೆಯ ಮೂಲಕ ಜನರಿಗೆ ಒಳಿತನ್ನು ಕಂಡುಕೊಳ್ಳುವ ಸಂದೇಶ ನೀಡಿ ಕಲಿಯುಗದ ಕಲ್ಪವೃಕ್ಷರಾಗಿದ್ದಾರೆ. ಗುರುರಾಯರಿಗೆ ಜಾತಿ, ಧರ್ಮ ಭೇದ ಭಾವನೆಯಿಲ್ಲದೆ ತಮ್ಮನ್ನು ಅರಾಧಿಸುವ ಭಕ್ತರ ಕಷ್ಟಕಾರ್ಪಣ್ಯಗಳಿಗೆ ಪರಿಹಾರ ಕಲ್ಪಿಸುವ ಕಾಮಧೇನುವಾಗಿದ್ದಾರೆ ಎಂದರು.

ಧಾರ್ಮಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಅಶೀರ್ವಚನ ನೀಡಿದ ಮನಕಟ್ಟೆ ಭೀಮಸೇತು ಮುನಿವೃಂದದ ಮಠದ ಶ್ರೀರಘುವರೇಂದ್ರ ತೀರ್ಥ ಸ್ಮಾಮೀಜಿ, ಭಜನೆ ಕೀರ್ತನೆಗಳ ಮೂಲಕ ದೇವರನ್ನು ಭಜಿಸಿ ನೆಮ್ಮದಿಯನ್ನು ಕಾಣುವಂತಾಗಬೇಕು. ಗುರುರಾಘವೇಂದ್ರ ಸ್ವಾಮಿಗಳಂತಹ ಅನೇಕ ದಾರ್ಶನಿಕರು ಭಾರತೀಯ ಸಂಸ್ಕೃಯಲ್ಲಿ ಧರ್ಮಮಾರ್ಗದಲ್ಲಿ ನಡೆದುಕೊಳ್ಳುವ ಮೂಲಕ ಇಂದಿನ ಯುವ ಸಮೂಹಕ್ಕೆ ಸನ್ಮಾರ್ಗದೊಂದಿಗೆ ನಮ್ಮ ಪುರಾತನ ಪರಂಪರೆಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯನ್ನು ಕಾಣುವಂತಾಗಲಿ ಎಂದರು.

ನಿಟ್ಟೂರು ನಾರಾಯಣಗುರು ಮಠದ ರೇಣುಕಾನಂದ ಸ್ವಾಮೀಜಿ ಮಾತನಾಡಿ, ತಮ್ಮ ಉಪದೇಶಾಮೃತವನ್ನು ನೀಡಿ ಮನುಷ್ಯನ ಬದುಕಿಗೆ ಶಾಂತಿ ನೆಮ್ಮದಿ ಕೊಡುವುದೇ ಧರ್ಮ ಎಂಬುದನ್ನು ಅನೇಕ ಭಾರತೀಯ ಋಷಿಮುನಿಗಳು ಹೇಳಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಪರಿಪೂರ್ಣ ಬದುಕಿ ಅಧ್ಯಾತ್ಮಿಕ ಚಿಂತನೆ ವರ್ತಮಾನದ ಅಗತ್ಯವಾಗಿದೆ. ಹಣ ಮುಖ್ಯವೆಂಬ ಭ್ರಮೆಯಲ್ಲಿರುವುದರಿಂದ ಜನರು ಅರೋಗ್ಯ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ದುಡಿಮೆಯ ಅಲ್ಪಸ್ವಲ್ಪ ಹಣವನ್ನು ದಾನ, ಧರ್ಮದ ಕಾರ್ಯಗಳಿಗೆ ಸದ್ವಿನಿಯೋಗ ಮಾಡಿದ್ದಾಗ ಮಾತ್ರ ಸಾರ್ಥಕ ಬದುಕಿಗೆ ಸಹಕಾರಿಯಾಗುವುದು ಎಂದರು.ಇದೇ ವೇಳೆ ಮಠದ ಕಟ್ಟಡ ಮತ್ತು ರಥ ನಿರ್ಮಾಣ ಕಾರ್ಯದಲ್ಲಿ ಸಹಕಾರ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು.

ಭಜನಾ ಮಂಡಳಿಯ ಮಹಿಳೆಯರು ಪ್ರಾರ್ಥಿಸಿದರು. ಜೆ.ಪಿ.ಕಿರಣ್ ಸ್ವಾಗತಿಸಿದರು. ಕಾರ್ಯದರ್ಶಿ ಎಚ್.ಎಸ್.ಅನಂತಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!