ಕನ್ನಡಪ್ರಭ ವಾರ್ತೆ ಕೋಲಾರಇತ್ತೀಚೆಗೆ ಕಂಪ್ಯೂಟರ್ ಯುಗದಲ್ಲಿ ಪಠ್ಯ ಪುಸ್ತಕಗಳನ್ನು ಮುದ್ರಣ ಮಾಡಿ ಕಾಲೇಜುಗಳಿಗೆ ಹಂಚಿದರೂ ಕೊಂಡುಕೊಳ್ಳುವ ಮನಸ್ಥಿತಿ ವಿದ್ಯಾರ್ಥಿಗಳಿಗೆ ಇಲ್ಲ ಎಂದು ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ನಿರಂಜನವಾನಳ್ಳಿ ವಿಷಾದ ವ್ಯಕ್ತಪಡಿಸಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರು ಉತ್ತರ ವಿವಿಯಿಂದ ಪ್ರಥಮ ಪದವಿ ಬಿಎ ,ಬಿಎಸ್ಸಿ,ಬಿಕಾಂ, ಬಿಸಿಎ, ಬಿಬಿಎ ತರಗತಿಗಳ ಪಠ್ಯಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಬರವಣಿಗೆ, ಮುದ್ರಣ ಕಷ್ಟ
ಅಂಬೇಡ್ಕರ್ ಆದರ್ಶ ಪಾಲಿಸಿ
ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಅಭ್ಯಾಸ ಹೆಚ್ಚಿಸುವಲ್ಲಿ ಅಧ್ಯಾಪಕರ ಜವಾಬ್ದಾರಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು ಪುಸ್ತಕಗಳನ್ನು ಕೊಂಡುಕೊಳ್ಳಲು ಪ್ರೇರೇಪಿಸಬೇಕು. ಅಂಬೇಡ್ಕರ್ ಅಷ್ಟೊಂದು ಪುಸ್ತಕಗಳನ್ನು ಓದಿದ್ದರಿಂದಲೇ ದೇಶದ ಸಂವಿಧಾನ ರಚಿಸುವ ಶಕ್ತಿ ಪಡೆದುಕೊಂಡು ನಮ್ಮ ಸಂವಿಧಾನ ಶಿಲ್ಪಿಯಾದರು. ಪುಸ್ತಕ ಓದುವ ಅಭ್ಯಾಸಕ್ಕೆ ಅವರೇ ವಿದ್ಯಾರ್ಥಿಗಳಿಗೆ ಆದರ್ಶವಾಗಿದ್ದು, ಅವರ ಆದರ್ಶ ಪಾಲಿಸಿ ಪುಸ್ತಕ ಓದಿ ಎಂದು ಕರೆ ನೀಡಿದರು.ಮೊಬೈಲ್ ಗೀಳಿನಿಂದ ಹೊರಬನ್ನಿ
ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ವಿವಿ ಆಡಳಿತ ವಿಭಾಗದ ಕುಲ ಸಚಿವ ಶ್ರೀಧರ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬನ್ನಿ, ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ ಅದು ನಿಮ್ಮ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ ಎಂದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಮುನಿಶಾಮಪ್ಪ, ಅಧ್ಯಾಪಕರಾದ ಕನ್ನಡ ವಿಭಾಗದ ಡಾ.ಚೆಲುವರಾಜ್ ಇದ್ದರು.