ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಡಿವೈಎಸ್ಪಿ ಡಿ.ಟಿ. ಪ್ರಭು ಪುತ್ರಿ, ಎಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಿಯದರ್ಶಿನಿ ಪಿ. ವಿರಚಿತ ‘ಕೀಕಾ’ ಪುಸ್ತಕವನ್ನು ಶುಕ್ರವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಾವರಣಗೊಳಿಸಿ ಮಾತನಾಡಿದರು.
ಈಚಿನ ದಿನಗಳಲ್ಲಿ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಓದುವವರ ಸಂಖ್ಯೆ ವಿರಳವಾಗಿದೆ. ಆದ್ದರಿಂದ ಓದಿನ ಹವ್ಯಾಸ ಹೆಚ್ಚಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದವರು ಸಲಹೆ ನೀಡಿದರು.ಎಂಜಿನಿಯರಿಂಗ್ ವಿದ್ಯಾರ್ಥಿನಿಯಾದರೂ ಪ್ರಿಯದರ್ಶಿನಿ ಅವರು ಈ ಪುಸ್ತಕದಲ್ಲಿ ಪರಿಸರ, ಸ್ವಾತಂತ್ರ್ಯ ಹೋರಾಟ, ಹೆಚ್ಚಾಗಿ ರಾಣಾ ಪ್ರತಾಪಸಿಂಹ ಬಗೆಗೆ ಅನೇಕರಿಗೆ ಗೊತ್ತಿಲ್ಲದ ವಿಚಾರಗಳನ್ನು ದಾಖಲಿಸಿದ್ದಾರೆ. ಇದು ಶಿಕ್ಷಕ ಕೈಪಿಡಿಯಾಗಲು ಯೋಗ್ಯವಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಕಾರ್ಯದರ್ಶಿ ಜನಾರ್ದನ ಕೊಡವೂರು, ಎಂಜಿಎಂ ಕಾಲೇಜು ಪ್ರಾಚಾರ್ಯ ಪ್ರೊ. ಲಕ್ಷ್ಮೀನಾರಾಯಣ ಕಾರಂತ, ಅಜ್ಜರಕಾಡು ಜಿ. ಶಂಕರ್ ಮಹಿಳಾ ಸರ್ಕಾರಿ ಕಾಲೇಜು ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ರಾಜೇಂದ್ರ, ಪೂರ್ಣಪ್ರಜ್ಞ ಕಾಲೇಜಿನ ಪ್ರಾಧ್ಯಾಪಕ ಮಹೇಶ ಶೆಟ್ಟಿ, ಉದ್ಯಮಿ ಪುರುಷೋತ್ತಮ ಶೆಟ್ಟಿ ಅಭ್ಯಾಗತರಾಗಿದ್ದರು. ಲೇಖಕಿ ಪ್ರಿಯದರ್ಶಿನಿ ಮತ್ತು ಶರಣಮ್ಮ ಇದ್ದರು.
ಪೊಲೀಸ್ ಕಾನ್ಸ್ಟೇಬಲ್ ಯೋಗೀಶ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ನವ್ಯಾ ಪ್ರಾರ್ಥಿಸಿದರು. ಈ ಸಂದರ್ಭ ಪ್ರಿಯದರ್ಶಿನಿ ಅವರನ್ನು ಕಸಾಪ ವತಿಯಿಂದ ಸನ್ಮಾನಿಸಲಾಯಿತು.