ಪೊಲೀಸರ ಬೆನ್ನೆಲುಬಾಗುವಲ್ಲಿ ಗೃಹರಕ್ಷಕರು ಯಶಸ್ವಿ

KannadaprabhaNewsNetwork |  
Published : Dec 08, 2024, 01:19 AM IST
7ಐಎನ್‌ಡಿ1,ಅಖಿಲ ಭಾರತ ಗ್ರಹರಕ್ಷಕ ದಳ ದಿನಾಚರಣೆಯಲ್ಲಿ ಡಿವೈಎಸ್ಪಿ ಎಚ್.ಜಗದೀಶ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಇಂಡಿ: ಗೃಹರಕ್ಷಕ ದಳದ ಸೇವೆ ಅಮೂಲ್ಯವಾದದ್ದು. ಪೊಲೀಸರಿಗೆ ಬೆನ್ನೆಲುಬಾಗಿ ಸೇವೆ ಸಲ್ಲಿಸುವಲ್ಲಿ ಗೃಹ ರಕ್ಷಕದಳ ಯಶಸ್ವಿಯಾಗಿದೆ ಎಂದು ಇಂಡಿ ಡಿವೈಎಸ್ಪಿ ಎಚ್‌. ಜಗದೀಶ ಹೇಳಿದರು. ಪಟ್ಟಣದ ಡಿವೈಎಸ್ಪಿ ಕಾರ್ಯಾಲಯದ ಸಭಾ ಭವನದಲ್ಲಿ ಜಿಲ್ಲಾ ಗೃಹರಕ್ಷಕ ದಳ ಹಮ್ಮಿಕೊಂಡ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೀವ ರಕ್ಷಣೆ, ಆಸ್ತಿ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಪಾಲಿಸಲು ಗೃಹ ರಕ್ಷಕ ದಳದ ಕೊಡುಗೆ ಮಹತ್ತರವಾಗಿದೆ. ಜಿಲ್ಲೆಯಲ್ಲಿ ಎಲ್ಲ ಘಟಕದ ಗೃಹ ರಕ್ಷಕರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ:

ಗೃಹರಕ್ಷಕ ದಳದ ಸೇವೆ ಅಮೂಲ್ಯವಾದದ್ದು. ಪೊಲೀಸರಿಗೆ ಬೆನ್ನೆಲುಬಾಗಿ ಸೇವೆ ಸಲ್ಲಿಸುವಲ್ಲಿ ಗೃಹ ರಕ್ಷಕದಳ ಯಶಸ್ವಿಯಾಗಿದೆ ಎಂದು ಇಂಡಿ ಡಿವೈಎಸ್ಪಿ ಎಚ್‌. ಜಗದೀಶ ಹೇಳಿದರು.ಪಟ್ಟಣದ ಡಿವೈಎಸ್ಪಿ ಕಾರ್ಯಾಲಯದ ಸಭಾ ಭವನದಲ್ಲಿ ಜಿಲ್ಲಾ ಗೃಹರಕ್ಷಕ ದಳ ಹಮ್ಮಿಕೊಂಡ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೀವ ರಕ್ಷಣೆ, ಆಸ್ತಿ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಪಾಲಿಸಲು ಗೃಹ ರಕ್ಷಕ ದಳದ ಕೊಡುಗೆ ಮಹತ್ತರವಾಗಿದೆ. ಜಿಲ್ಲೆಯಲ್ಲಿ ಎಲ್ಲ ಘಟಕದ ಗೃಹ ರಕ್ಷಕರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಗೃಹ ರಕ್ಷಕದಳ ಪೊಲೀಸ್‌ ಇಲಾಖೆಗೆ ಪೂರಕ ಪಡೆಯಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸಂಚಾರಿ ನಿಯಂತ್ರಣ, ಪ್ರವಾಹ, ಬೆಂಕಿ ಅನಾಹುತ ಇನ್ನಿತರ ಸಂದರ್ಭದಲ್ಲಿ ಜನರಿಗೆ ಸೂಕ್ತ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ಹೇಳಿದರು.1946ರಲ್ಲಿ ಸ್ಥಾಪನೆಗೊಂಡ ಗೃಹರಕ್ಷಕ ದಳ ಇಂದಿನವರೆಗೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಅವರ ನಿಷ್ಕಾಮಸೇವೆ ನಿಜಕ್ಕೂ ಪ್ರಶಂಸನೀಯ. ಸಮಾಜದಲ್ಲಿ ಸದಾ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ಸಮಾಜಸೇವೆ ಮಾಡುವ ಗೃಹರಕ್ಷಕ ದಳ ಸೇವೆ ಮತ್ತು ಪೊಲೀಸ್‌ ಇಲಾಖೆಗೆ ನೀಡುವ ಸಹಕಾರ ಮುಂದುವರೆಯಲಿ ಎಂದು ಹೇಳಿದರು.ಗೃಹರಕ್ಷಕ ದಳವು ಪೊಲೀಸ್‌ ಇಲಾಖೆಯ ಒಂದು ಪ್ರಮುಖ ಅಂಗವಾಗಿದ್ದು, ತುರ್ತು ಸಂದರ್ಭಗಳಲ್ಲಿ ಪೊಲೀಸ್‌ ಇಲಾಖೆಯೊಂದಿಗೆ ಕೈಜೊಡಿಸಿ ಸಮಾಜಕ್ಕೆ ಉತ್ತಮ ರೀತಿಯ ಸೇವೆ ಸಲ್ಲಿಸಲು ಸಹಕಾರ ನೀಡುತ್ತಿದೆ. ಪೊಲೀಸ್‌ರು ಎಲ್ಲಾ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದ ಸಂದರ್ಭಗಳಲ್ಲಿ ಪೊಲೀಸ್‌ರೊಂದಿಗೆ ಕೈಜೊಡಿಸಿಕೊಂಡು ಬಂದಿರುವ ಇಲಾಖೆ ಗೃಹ ರಕ್ಷಕ ದಳ. ಯಾವುದೇ ಸಮಯದಲ್ಲಿಯೂ ಪೊಲೀಸ್‌ ಇಲಾಖೆಯ ಕೆಲಸಗಳಿಗೆ ಗೃಹರಕ್ಷಕರು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ಶಿವಾನಂದ ಶಿವೂರ ಮಾತನಾಡಿ, ಗ್ರಹರಕ್ಷಕರು ಖಾಕಿ ಸಮವಸ್ತ್ರ ಧರಿಸಿದಾಗ ಭಿನ್ನವಾಗಿ ಕಾಣಿಸುತ್ತಾರೆ. ಸಮವಸ್ತ್ರದಲ್ಲಿರುವಾಗ ಶಿಸ್ತಿನಿಂದ ವರ್ತಿಸುವುದು, ಶ್ರೆದ್ದೆ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವುದು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಮುಖ್ಯ ಎಂದು ಹೇಳಿದರು.ಗೃಹರಕ್ಷಕರು ಸಮಾಜಸೇವೆ ಮಾಡುವುದರೊಂದಿಗೆ ಸಾರ್ವಜನಿಕರ ಜೀವರಕ್ಷಣೆಯ ತರಬೇತಿ ಪಡೆದಿರುತ್ತಾರೆ.ವೈದ್ಯರು ಚಿಕಿತ್ಸೆ ನೀಡುವ ಮೊದಲು, ಪ್ರಥಮ ಚಿಕಿತ್ಸೆ ನೀಡುವ ಗೃಹ ರಕ್ಷಕರು ಜೀವಗಳನ್ನು ಉಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಸೇವೆಯನ್ನು ಶ್ಲಾಘಿಸಿದರು.ಉಪ ಸಮಾದೇಷ್ಟರಾದ ಬಿ.ಎಸ್‌.ಕಾಂಬಳೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಗೃಹರಕ್ಷಕ ದಳದ ಬೋಧಕ ಮಹಾದೇವ ಪೂಜಾರ ಮಾತನಾಡಿದರು. ಇಂಡಿ ಘಟಕದ ಘಟಕಾಧಿಕಾರಿ ಎನ್‌.ಎನ್‌.ಗವಳಿ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರ.ದ ಸಹಾಯಕ ಆರೀಪ ಮುಲ್ಲಾ, ರಾಘವೇಂದ್ರ ಕುಲಕರ್ಣಿ, ಸುನಂದಾ ರೊಟ್ಟಿ, ಬಿ.ಎಸ್‌.ಹಡಪದ, ಎಸ್‌.ಪಿ.ಸುಲಾಖೆ ಸೇರಿದಂತೆ ಜಿಲ್ಲೆಯ ಘಟಕಗಳ ಘಟಕಾಧಿಕಾರಿಗಳು, ಗೃಹ ರಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ