ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಲಕ್ಯಾ ಹೋಬಳಿ ಸಾದರಹಳ್ಳಿ ಗ್ರಾಮದಲ್ಲಿ ಗುರುವಾರ ಭಕ್ತ ಶ್ರೇಷ್ಠ ಕನಕದಾಸರು, ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಈ ಮೂವರು ಮಹನೀಯರ ಪ್ರತಿಮೆ ಅನಾವರಣಗೊಳಿಸಿ ನಂತರ ಕನಕ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಶೋಷಿತ ವರ್ಗದ ಪರವಾಗಿ ಗಟ್ಟಿಯಾಗಿ ಹೋರಾಟ ಮಾಡಿದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ದೊರೆತು ಸಮ ಸಮಾಜ ನಿರ್ಮಾಣಕ್ಕಾಗಿ ಹೋರಾಟ ಮಾಡಿದ ಮೂವರು ಮಹಾ ಪುರುಷರ ಪ್ರತಿಮೆಗಳನ್ನು ಒಂದೇ ಗ್ರಾಮದಲ್ಲಿ ಅನಾವರಣ ಮಾಡಿರುವುದು ಶ್ಲಾಘನೀಯ ಎಂದರು.19ನೇ ಶತಮಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರಪಂಚ ಮೆಚ್ಚುವ ಸಂವಿಧಾನ ನೀಡಿ ಎಲ್ಲರೂ ಸಮಾನವಾಗಿ ಬದುಕಬೇಕೆಂಬ ಆಶಯದೊಂದಿಗೆ ಮಹಿಳೆಯರಿಗೆ ಮತದಾನದ ಹಕ್ಕು ನೀಡಿದರು. 15ನೇ ಶತಮಾನದಲ್ಲಿ ಹಿಂದೂ ಸಮಾಜದಲ್ಲಿದ್ದ ಕೆಲವು ದುಷ್ಟ ಶಕ್ತಿಗಳ ವಿರುದ್ಧ ಹೋರಾಟ ಮಾಡಿದ ಭಕ್ತ ಶ್ರೇಷ್ಠ ಕನಕದಾಸರು ಕೀರ್ತನೆಗಳ ಮೂಲಕ ಸಂಸ್ಕೃತಿ, ಸಂಸ್ಕಾರ ನೀಡಿ ಶೋಷಿತ ವರ್ಗವನ್ನು ಸಮಾಜದ ಮುನ್ನಲೆಗೆ ತರಲು ಶ್ರಮಿಸಿದ್ದಾರೆಂದು ಹೇಳಿದರು.
ವರ್ಣಭೇದ ನೀತಿಯನ್ನು ವಿರೋಧಿಸಿ ಭಕ್ತಿಯಿಂದ ದೇವರನ್ನು ಒಲಿಸಿಕೊಳ್ಳಬಹುದು ಎಂದು ಸಮಾಜಕ್ಕೆ ಸಾರಿದ ಕೀರ್ತಿ ಕನಕದಾಸರಿಗೆ ಸಲ್ಲುತ್ತದೆ. ಅಂಬೇಡ್ಕರ್ರವರು ಸಮಾಜದ ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕೆಂಬುದು ಅವರ ಆಶಯವಾಗಿತ್ತು ಎಂದು ಹೇಳಿದರು.
ಮಹಾತ್ಮರ ಜೀವನದ ವಿಚಾರಧಾರೆ ಎಲ್ಲರಿಗೂ ಆದರ್ಶವಾಗಿದೆ. ಈ ಪುತ್ಥಳಿಗಳ ದರ್ಶನ ಪಡೆದ ಮಕ್ಕಳು ಮಹಾತ್ಮರ ವಿಚಾರಧಾರೆ ಹಾಗೂ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.