ಕೊಪ್ಪಳ:
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾರ್ಷಿಕ ಸಮಾರೋಪ ಸಮಾರಂಭ ಹಾಗೂ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕವಾಗಿ ಪ್ರಗತಿ ಸಾಧಿಸದಿದ್ದರೆ ಸಾಮಾಜಿಕವಾಗಿ ಕೊಡುಗೆ ಶೂನ್ಯ. ಸಮಾಜ ಚನ್ನಾಗಿಲ್ಲ ಎನ್ನುವ ಬದಲು ನಾವು ಸರಿಯಾಗಬೇಕಿದೆ. ಸಂಸ್ಕಾರ ರಹಿತ ವಿದ್ಯಾರ್ಥಿಗಳಿಂದ ಭಯಾನಕ ವಾತಾವರಣ ಸೃಷ್ಟಿಯಾಗುತ್ತದೆ. ವಿದ್ಯಾರ್ಥಿಗಳು ಸಂಸ್ಕಾರ, ಸಂಸ್ಕೃತಿ ಅಳವಡಿಸಿಕೊಂಡು ಬದುಕನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.ವಿದ್ಯಾರ್ಥಿ ದೆಸೆಯಲ್ಲಿ ಸಮಯಕ್ಕೆ ಆದ್ಯತೆ ನೀಡಬೇಕು. ಕಳೆದು ಹೋದ ವಸ್ತುವನ್ನು ಯಾವಾಗಲಾದರೂ ಪಡೆಯಬಹುದು, ಗಳಿಸಬಹುದು. ಆದರೆ ಸಮಯ ಮತ್ತು ಸಮುದ್ರದ ಅಲೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಓದುವ ಸಮಯದಲ್ಲಿ ಓದುವುದನ್ನು ಬಿಟ್ಟು ಉಳಿದೆಲ್ಲ ಮಾಡಿದರೆ ಮುಂದೆ ಜೀವನ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಹೆತ್ತವರಿಗೆ ಮಕ್ಕಳ ಬಗ್ಗೆ ಅಪಾರ ಕನಸುಗಳಿರುತ್ತವೆ, ಭರವಸೆ ಇರುತ್ತದೆ. ಅದನ್ನು ಅರಿತುಕೊಂಡು ಸಮಯದೊಂದಿಗೆ ಹೆಜ್ಜೆ ಹಾಕಬೇಕು ಎಂದು ಮಾರ್ಮಿಕವಾಗಿ ತಿಳಿಸಿದರು.
ಶಾರದಾ ಹಾಗೂ ಸಂಗಡಿಗರಿಂದ ಸ್ವಾಗತ ನೃತ್ಯ ಗಮನ ಸೆಳೆಯಿತು.