ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಅಭಿಮತ
ಕನ್ನಡಸೇನೆ ಹೊಟ್ಟೆಪಾಡಿಗಾಗಿ ಹುಟ್ಟಿಕೊಂಡ ಸಂಸ್ಥೆಯಲ್ಲ. ಕನ್ನಡ ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ಎಂದಿಗೂ ರಾಜೀ ಮಾಡಿಕೊಳ್ಳದೆ, ಜನರಿಗೆ ತೊಂದರೆ ನೀಡಿದೆ ತತ್ವ ಸಿದ್ಧಾಂತಕ್ಕೆ ಬದ್ಧವಾಗಿರುವ ಸಂಘ ಎಂದು ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಪ್ರತಿಪಾದಿಸಿದ್ದಾರೆ.
ನಗರದ ವಿಘ್ನೇಶ್ವರ ಕಂಪಫ್ಟ್ನಲ್ಲಿ ಕನ್ನಡ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಳೆದ 35 ವರ್ಷಗಳಿಂದಲೂ ಯಾರಿಂದಲೂ ನಯಾಪೈಸೆ ಪಡೆಯದೆ, ತಮ್ಮ ಕೈಯಿಂದ ಹಣ ಹಾಕಿ ಹೋರಾಟ ನಡೆಸುತ್ತಿರುವ ಏಕೈಕ ಸಂಸ್ಥೆ ಕನ್ನಡ ಸೇನೆ ಎಂದರು.ರಾಜ್ಯದಲ್ಲಿ ಕನ್ನಡದ ಹೆಸರಿನಲ್ಲಿ ದಿನವೊಂದಕ್ಕೆ ಹತ್ತಾರು ಸಂಘಟನೆಗಳು ಹುಟ್ಟಿಕೊಂಡ ನವೆಂಬರರ ರಾಜೋತ್ಸವಕ್ಕೆ ಮಾತ್ರ ಸಿಮೀತವಾಗಿವೆ. ಆದರೆ ಕನ್ನಡ ಸೇನೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ. ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡು ಬಂದಿದೆ ಎಂದರು.
ಸರ್ಕಾರ ಜನರಿಗಾಗಿ ವಿವಿಧ ಭಾಗ್ಯಗಳನ್ನು ನೀಡಿದೆ. ಆದರೆ ಉಚಿತ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಭಾಗ್ಯ ನೀಡಿದರೆ ಎಲ್ಲಾ ವರ್ಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ. ಹಾಗಾಗಿ ಸರಕಾರ ಗುಣಮಟ್ಟದ ಉಚಿತ ಶಿಕ್ಷಣ ನೀಡಬೇಕು. ಕನ್ನಡ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೊದಲ ಅದ್ಯತೆ ನೀಡಬೇಕು. ಎಲ್ಲರಿಗೂ ಗುಣಮಟ್ಟ ಆರೋಗ್ಯ ಸೇವೆ ಒದಗುವಂತೆ ಮಾಡಬೇಕೆಂಬುದು ಕನ್ನಡ ಸೇನೆಯ ಒತ್ತಾಯವಾಗಿದೆ. ಹಾಗಾಗಿ ಸರಕಾರ ಈ ನಿಟ್ಟಿನಲ್ಲಿ ಗಮನಹರಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಕನ್ನಡಸೇನೆಯ ಮುಖಂಡರಾದ ವೆಂಕಟಾಚಲ, ಶ್ರೀನಿವಾಸಮೂರ್ತಿ, ಸಂತೋಷ, ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಸುಕನ್ಯಾ.ಜಿ.ಕೆ, ಉಪಾಧ್ಯಕ್ಷೆ ಚೇತನಾ.ಎಸ್.ವಿ, ನಗರ ಅಧ್ಯಕ್ಷೆ ಪರಿಮಳಾ ಸತೀಶ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಅಭಿನಂದನೆ ಸಲ್ಲಿಕೆ
ಫೋಟೊ.......