ಖಡಕ್‌ ಪೊಲೀಸ್‌ ಅಧಿಕಾರಿ ಎತ್ತಂಗಡಿಗೆ ಹುನ್ನಾರ

KannadaprabhaNewsNetwork |  
Published : Dec 05, 2024, 12:30 AM IST
೪ ಟಿವಿಕೆ ೧ - ತುರುವೇಕೆರೆ ತಾಲೂಕು ದಂಡಿನಶಿವರದಲ್ಲಿ ಡಿಎಸ್ ಎಸ್ ನ ಸಂಚಾಲಕ ದಂಡಿನಶಿವರ ಕುಮಾರ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. | Kannada Prabha

ಸಾರಾಂಶ

ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು ಇಲ್ಲಿಂದ ಎತ್ತಂಗಡಿ ಮಾಡಿದಲ್ಲಿ ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಂಡಿನಶಿವರ ಕುಮಾರ್ ಎಚ್ಚರಿಕೆ ನೀಡಿದ್ದಾರೆ

ಕನ್ನಡಪ್ರಭ ವಾರ್ತೆ, ತುರುವೇಕೆರೆ

ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು ಇಲ್ಲಿಂದ ಎತ್ತಂಗಡಿ ಮಾಡಿದಲ್ಲಿ ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಂಡಿನಶಿವರ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ದಂಡಿನಶಿವರದ ಅಂಬೇಡ್ಕರ್ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಅಧಿಕಾರಿ ಚಿತ್ತರಂಜನ್ , ಈ ಠಾಣೆಗೆ ಆಗಮಿಸಿದ ನಂತರ ಇಡೀ ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳಕಾಕರ ಕಾಟವಿಲ್ಲದಂತಾಗಿದೆ. ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಮಾಡುತ್ತಿದ್ದವರಿಗೆ ಸಿಂಹಸ್ವಪ್ನವಾಗಿದ್ದಾರೆ. ಮಾದಕ ವಸ್ತುಗಳನ್ನು ಸೇವಿಸುತ್ತಿದ್ದ ಹಲವಾರು ಮಂದಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಸಮಾಜ ದ್ರೋಹಿಗಳಿಗೆ ಕಾನೂನು ಕ್ರಮಜರುಗಿಸುವ ಮೂಲಕ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. ಮದ್ಯದಂಗಡಿಗಳು ಬೆಳಗ್ಗೆ ೬ ಗಂಟೆಗೆ ತೆರೆಯುತ್ತಿದ್ದವು. ಇದರಿಂದಾಗಿ ಕುಡುಕರ ಹಾವಳಿ ಬೆಳಗ್ಗೆಯೇ ಪ್ರಾರಂಭವಾಗುತ್ತಿತ್ತು. ಮದ್ಯದಂಗಡಿಗಳ ಮಾಲೀಕರನ್ನು ಕರೆದು ಎಚ್ಚರಿಕೆ ನೀಡಿ ಸಮಯ ಪಾಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕಾನೂನು ಪರಿಪಾಲನೆ ಮಾಡುತ್ತಿರುವ ಇಂತಹ ಖಡಕ್ ಅಧಿಕಾರಿಯನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಠಾಣೆಯಿಂದ ವರ್ಗಾಯಿಸಲು ಮುಂದಾಗಿವೆ. ಇದಕ್ಕೆ ಜನಪ್ರತಿನಿಧಿಗಳೂ ಸಹ ಕೈ ಜೋಡಿಸಿದ್ದಾರೆ. ಚಿತ್ತರಂಜನ್ ರವರು ಜನ ಸಾಮಾನ್ಯರಿಗೆ ಪೊಲೀಸ್ ಠಾಣೆಯಲ್ಲಿ ಗೌರವ ನೀಡುತ್ತಿದ್ದಾರೆ. ಠಾಣೆಯನ್ನು ಜನಸ್ನೇಹಿಯಾಗಿ ಪರಿವರ್ತಿಸಿದ್ದಾರೆ. ಇಂತಹ ಜನಪರ ಅಧಿಕಾರಿಯನ್ನು ಎತ್ತಂಗಡಿ ಮಾಡಲು ಪ್ರಯತ್ನಿಸಿದಲ್ಲಿ ತಾಲೂಕು ಕೇಂದ್ರದಲ್ಲಿ ಪ್ರಗತಿಪರ ಸಂಘಟನೆಗಳ ಸಹಕಾರದೊಂದಿಗೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಕಾಣದ ಕೈಗಳು ವರ್ಗಾವಣೆಗೆ ಪ್ರಯತ್ನಿಸಿದಲ್ಲಿ ಅಂತಹವರ ಮನೆ ಮುಂದೆಯೂ ಧರಣಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ಡಿ.ಆರ್.ಲಕ್ಷ್ಮೀಶ್, ಪದಾಧಿಕಾರಿಗಳಾದ ಶೇಖರ್, ದಂಡಿನ ಶಿವರ ಹೋಬಳಿ ಸಂಚಾಲಕ ಶಂಕರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವಕಲ್ಯಾಣ: ಪುರಾತನ ಶಿವಲಿಂಗ, 5 ಹೆಡೆ ನಾಗಸರ್ಪ, ಶಿಲಾಶಾಸನ ಪತ್ತೆ
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಾಕಷ್ಟು ಕೊಡುಗೆ