ಕುರುಬ ಸಮಾಜ ಯಾರ ತಟ್ಟೆಗೂ ಕೈಹಾಕಿಲ್ಲ, ಹಾಕುವುದೂ ಇಲ್ಲ: ಬಿ. ಸುಬ್ರಹ್ಮಣ್ಯ

KannadaprabhaNewsNetwork |  
Published : Oct 09, 2025, 02:00 AM IST
28 | Kannada Prabha

ಸಾರಾಂಶ

ಕೋರ್ಟ್ಹಾಲ್ನಲ್ಲಿ ಸಿಜೆಐ ಮೇಲೆ ಶೂ ಎಸೆದಿದ್ದಲ್ಲದೇ ನನಗೆ ಈ ಬಗ್ಗೆ ಪಶ್ಚಾತಾಪವಾಗಲಿ, ವಿಷಾದವಾಗಲಿ ಇಲ್ಲ ಎಂದು ದರ್ಪ ತೋರಿದ್ದಾರೆ. ಇಂತಹವರನ್ನ ಗಲ್ಲಿಗೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ಕುರುಬ ಸಮಾಜದ ಜನ ಇಷ್ಟು ವರ್ಷಗಳ ಕಾಲ ತಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಉದ್ದೇಶದಿಂದ ಎಸ್ಟಿಗೆ ಸೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಯಾರ ತಟ್ಟೆಗೂ ಸಮಾಜದ ಜನ ಕೈಹಾಕಲ್ಲ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ತಿಳಿಸಿದ್ದಾರೆ.

ದಯವಿಟ್ಟು ಕುರುಬರನ್ನು ಎಸ್.ಟಿಗೆ ಸೇರಿಸುವ ಪ್ರಯತ್ನದಲ್ಲಿ ನಮ್ಮ ತಟ್ಟೆಯಲ್ಲಿರುವ ಅನ್ನ ಕಿತ್ತುಕೊಳ್ಳಲು ಹೋಗಬೇಡಿ ಎಂಬ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಕುರುಬರ ಸಮಾಜಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣ ತೆತ್ತವರು. ಕನಕದಾಸರು 7 ಕೊಪ್ಪರಿಕೆ ಚಿನ್ನ ಸಿಕ್ಕಿದಾಗಲೂ ಮನೆಗೆ ತರದೇ ದಾನ ಮಾಡಿದವರು. ಅಂತಹ ಸಮಾಜ ಕುರುಬ ಸಮಾಜ ಎಂದು ಉದಾಹರಣೆ ನೀಡಿದರು.

ಕುರುಬ ಸಮಾಜ ಹಿಂದುಳಿದ ವರ್ಗವಾಗಿದ್ದು, ಸಾಕಷ್ಟು ವರ್ಷಗಳಿಂದ ಹಲವು ಸೌಲಭ್ಯಗಳಿಂದ ವಂಚಿತವಾಗಿದೆ. ರಾಜಕೀಯ ಮತ್ತು ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿದೆ. ಇದನ್ನ ಸರಿಪಡಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ. ಎಸ್ಟಿ ಸಮುದಾಯಕ್ಕೆ ಸವಲತ್ತು ಕೊಡುವುದು ಕೂಡ ಸರ್ಕಾರದಿಂದಲೇ ಯಾರಿಗೂ ವಂಚಿತವಾಗುವುದಿಲ್ಲ ಎಂದು ತಿಳಿಸಿದರು.

ಕುರುಬರನ್ನ ಎಸ್ಟಿಗೆ ಸೇರಿಸಿಲು ಕೇಂದ್ರ ಸರ್ಕಾರ ನಿರ್ಧರಿಸಿದರೆ ಎಸ್ಟಿಗೆ ನಿಗದಿ ಮಾಡಿರುವ ಮೀಸಲಾತಿಯನ್ನ ದುಪ್ಪಟ್ಟು ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ವಿಪಕ್ಷಗಳ ಕೆಲ ನಾಯಕರೂ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ. ಹಾಗಾಗಿ ಕುರುಬರು ಯಾರ ತಟ್ಟೆಗೂ ಕೈಹಾಕಲ್ಲ. ಈಗ ನಮ್ಮ ಸಮಾಜಕ್ಕೆ ನಿಗದಿಪಡಿಸಿರುವ ಮೀಸಲಾತಿಯೊಂದಿಗೆ ಎಸ್ಟಿ ಸಮುದಾಯದ ಮೀಸಲಾತಿಯನ್ನೂ ಕೊಡಬೇಕು ಎಂದು ಮನವಿ ಮಾಡಿದರು.

ರಾಕೇಶ್‌ ಕಿಶೋರ್‌ ಗಲ್ಲಿಗೇರಿಸಿ:

ಸುಪ್ರೀಂ ಕೋರ್ಟ್ಸಿಜೆಐ ಮೇಲೆ ಶೂಎಸೆದ ವಕೀಲ ರಾಕೇಶ್ ಕಿಶೋರ್ ರಂತಹವರನ್ನ ಗಲ್ಲಿಗೇರಿಸುವಂತೆಯೂ ಆಗ್ರಹಿಸಿದ್ದಾರೆ.

ಕೋರ್ಟ್ಹಾಲ್ನಲ್ಲಿ ಸಿಜೆಐ ಮೇಲೆ ಶೂ ಎಸೆದಿದ್ದಲ್ಲದೇ ನನಗೆ ಈ ಬಗ್ಗೆ ಪಶ್ಚಾತಾಪವಾಗಲಿ, ವಿಷಾದವಾಗಲಿ ಇಲ್ಲ ಎಂದು ದರ್ಪ ತೋರಿದ್ದಾರೆ. ಇಂತಹವರನ್ನ ಗಲ್ಲಿಗೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಾರ್ಥನೆ ಮಾತಿನ ಬೆನ್ನಲ್ಲೇ ಡಿಕೆಶಿ ಇಂದು ದಿಲ್ಲಿ ಭೇಟಿ ಕುತೂಹಲ
ಧಮ್ಕಿ ರಾಜೀವ್‌ಗೌಡ ವಿರುದ್ಧ 2 ಕೇಸ್‌, ಬೆನ್ನಲ್ಲೇ ನಾಪತ್ತೆ