ಮುಂಡರಗಿ: ಲಿಂಗಾಯೇತರನ್ನು ಮುಂಡರಗಿ ತೋಂಟದಾರ್ಯ ಮಠಕ್ಕೆ ಪೀಠಾಧಿಪತಿಗಳನ್ನಾಗಿ ನೇಮಿಸಿದ ಕೀರ್ತಿ ಗದುಗಿನ ಲಿಂ. ಡಾ. ತೋಂಟದ ಸಿದ್ದಲಿಂಗ ಸ್ವಾಮಿಗಳಿಗೆ ಸಲ್ಲತ್ತದೆ. ಇದು ಶ್ರೀಗಳ ನಿಜವಾದ ಗಟ್ಟಿತನಕ್ಕೆ ಸಾಕ್ಷಿಯಾಗಿದೆ ಎಂದು ಮುಂಡರಗಿ ತೋಂಟದಾರ್ಯ ಮಠದ ಪೀಠಾಧಿಪತಿ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ತೋಂಟದಾರ್ಯ ಮಠದಲ್ಲಿ ಆಷಾಢ ಮಾಸದ ಅಂಗವಾಗಿ ಜರುಗುತ್ತಿರುವ ಎಡೆಯೂರು ತೋಂಟದ ಸಿದ್ದಲಿಂಗೇಶ್ವರರ ಚರಿತಾಮೃತ ಪ್ರವಚನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ. ವೆಂಕಟೇಶಕುಮಾರ ಅವರ ಸಂಗೀತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಗೀತಗಾರ ಎಂ. ವೆಂಕಟೇಶಕುಮಾರ ತೋಂಟದಾರ್ಯ ಮಠದ ಕಲೆ ಸಂಪ್ರದಾಯ ಇತರ ಸಾಮಾಜಿಕ ಕೆಲಸಗಳ ಕುರಿತು ಸ್ಮರಿಸಿಕೊಂಡರು. ಪ್ರವಚನಕಾರ ಶರಣಬಸವ ದೇವರು ಲಿಂ. ತೋಂಟದ ಸಿದ್ದಲಿಂಗ ಸ್ವಾಮಿಗಳ ಸತ್ಕಾರ್ಯ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಪ್ರವಚನ ಸಮಿತಿ ಅಧ್ಯಕ್ಷ ಸಿ.ಕೆ. ಗಣಪ್ಪನವರ, ಉಪಾಧ್ಯಕ್ಷ ಬಸಯ್ಯ ಗಿಂಡಿಮಠ, ಶರಣಪ್ಪ ಕುಬಸದ, ಸುರೇಶ ಬಣಕಾರ, ಶಿವು ಬೆಟಗೇರಿ, ವಿಶ್ವನಾಥ ಉಳ್ಳಾಗಡ್ಡಿ, ಸಮನ್ವಯ ಸಮಿತಿ ಅಧ್ಯಕ್ಷ ಎಸ್.ಎಸ್. ಗಡ್ಡದ, ಪವನ ಚೋಪ್ರಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕೊಟ್ರೇಶ ಅಂಗಡಿ ನಿರೂಪಿಸಿದರು.