ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ: ಕೋಡಿ ಶ್ರೀ

KannadaprabhaNewsNetwork |  
Published : Dec 03, 2025, 01:30 AM IST
2ಕೆಎಂಎನ್ ಡಿ28 | Kannada Prabha

ಸಾರಾಂಶ

ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು. ರಾಜ್ಯ ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆ ಹರಿಯಲಿದ್ದು ಸುಖಾಂತ್ಯ ವಾಗಲಿದೆ. ಮಕರ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮುಂದಿನ ವರ್ಷ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿವೆ. ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಕೋಡಿ ಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಜಯನಗರ ಬಡಾವಣೆಯ ಆರ್‌ಟಿಒ ಮಲ್ಲಿಕಾರ್ಜುನ್ ಕಚೇರಿಯಲ್ಲಿ ಮಲ್ಲಿಕಾರ್ಜುನ್ ದಂಪತಿ ವಾದ್ಯಗಳು ಮತ್ತು ಪೂರ್ಣಕುಂಬದ ಮೂಲಕ ಕೋಡಿ ಶ್ರೀಗಳನ್ನು ಸ್ವಾಗತಿಸಿ ಪಾದಪೂಜೆ ನೆರವೇರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿ ಶ್ರೀಗಳು, ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು. ರಾಜ್ಯ ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆ ಹರಿಯಲಿದ್ದು ಸುಖಾಂತ್ಯ ವಾಗಲಿದೆ. ಮಕರ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ ಎಂದುಮಾರ್ಮಿಕವಾಗಿ ನುಡಿದರು.

ನಾನು ಶಾಸ್ತ್ರ ಹೇಳುವವನಲ್ಲ ಶಾಸ್ತ್ರಕಾರನಲ್ಲ ಮುಂದೆ ನಡೆಯುವ ವಿಚಾರಗಳನ್ನು ತಿಳಿಸುವ ಶಕ್ತಿ ಹೊಂದಿದ್ದೇನೆ. ಅದೇ ರೀತಿ ರಾಷ್ಟ್ರ ರಾಜಕಾರಣದಲ್ಲಿಯೂ ಕೂಡ ಯುಗಾದಿ ನಂತರ ಸಮಸ್ಯೆಗಳು ಎದುರಾಗಲಿವೆ. ಇತ್ತೀಚಿಗೆ ನಡೆದ ಬಾಂಬ್ ಬ್ಲಾಸ್ಟ್ ನಂತಹ ಅಹಿತಕರ ಘಟನೆಗಳು ರಾಷ್ಟ್ರ ಮಟ್ಟದಲ್ಲಿ ನಡೆಯಲಿವೆ ಎಂದು ಎಚ್ಚರಿಸಿದರು.

ರಾಜಕಾರಣಿಗಳು ರಾಜಕಾರಣವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿರುವಾಗ ಮಠಾಧೀಶರು ಸಮಾಜದ ಒಳಿತಿಗಾಗಿ ರಾಜಕೀಯವಾಗಿ ಏಕೆ ಸಲಹೆ ಸೂಚನೆ ನೀಡಬಾರದು ಎಂದು ಮಾರ್ಮಿಕವಾಗಿ ನುಡಿದರು.

ಮಠಗಳು ಮೊದಲು ಜಾತಿಯತೆಯಿಂದ ದೂರವಿರಬೇಕು. ಜಾತಿ ಪದ್ಧತಿ ನಾಗರೀಕ ಸಮಾಜಕ್ಕೆ ಅಂಟಿರುವ ಶಾಪ. ಮಠಾಧೀಶರುಗಳು ಮೊದಲು ಜಾತಿ ಸಂಕೋಲೆಗಳಿಂದ ಬರಬಂದು ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ಗಟ್ಟಿಯಾಗಿ ನಿಂತಾಗ ಮಾತ್ರ ನಾಗರೀಕ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ ಎಂದರು.

ರಾಜಕಾರಣ ದಿಕ್ಕುತಪ್ಪಿದೆ. ತತ್ವ, ಆದರ್ಶ ಹಾಗೂ ಮೌಲ್ಯಗಳು ಮಾಯವಾಗಿವೆ. ಹಣವಿದ್ದವರು ರಿಯಲ್ ಎಸ್ಟೇಟ್ ಕುಳಗಳು ರಾಜಕಾರಣದಲ್ಲಿ ವಿಜೃಂಬಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ. ಮಕರ ಸಂಕ್ರಾಂತಿ ನಂತರ ಮತ್ತೆ ನಾನು ಪತ್ರಕರ್ತರ ಮುಂದೆ ಬಂದು ಹಲವು ಹೊಸ ವಿಚಾರಗಳ ಬಗ್ಗೆ ಮಾತನಾಡುತ್ತೇನೆ. ಸದ್ಯಕ್ಕೆ ಇಷ್ಟು ಸಾಕು ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಅಂತ್ಯ ಹಾಡಿದರು.

ಈ ವೇಳೆ ಕಸಾಪ ತಾಲೂಕು ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ, ಮಾಜಿ ಗೌರವಾಧ್ಯಕ್ಷ ಬಳ್ಳೇಕೆರೆ ಮಂಜುನಾಥ್, ಮುಖಂಡರಾದ ಆಲಂಬಾಡಿ ಕಾವಲು ದೇವರಾಜು, ಜಯರಾಮೇಗೌಡ, ಹೊಸ ಹೊಳಲು ರಘು, ಕಾಮನಹಳ್ಳಿ ಮಂಜುನಾಥ್, ಕ್ರೈಸ್ಟ್ ದ ಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವರಾಜ್, ಪ್ರಥಮ ದರ್ಜೆ ಗುತ್ತಿಗೆದಾರರಾದ ಮನು ಶರತ್, ಅರಳಕುಪ್ಪೆ ಸೋಮೇಗೌಡ, ಪುರಸಭೆ ಮಾಜಿ ಸದಸ್ಯ ಕೋಳಿ ನಾಗರಾಜು ಸೇರಿದಂತೆ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಪುರ ಪ್ರಮುಖರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದಿಂದ ಗೋಬ್ಯಾಕ್‌ ಗೌರ್ನರ್‌ ಅಭಿಯಾನ ಚಿಂತನೆ
ವಿಧಾನ ಕದನಾಧಿವೇಶನ