ನೇಯ್ಗೆಯಲ್ಲೇ ದೇವರನ್ನು ಕಾಣುತ್ತಿದ್ದ ದಾಸಿಮಯ್ಯ

KannadaprabhaNewsNetwork |  
Published : Apr 03, 2025, 12:35 AM IST
ಪೋಟೋ: 02ಎಸ್‌ಎಂಜಿಕೆಪಿ03ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಬುಧವಾರ ನಡೆದ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿವಮೊಗ್ಗ: ನೇಯ್ಗೆಯ ಮೂಲಕ ಮನುಕುಲಕ್ಕೆ ಕಾಯಕದ ದಾರಿ ತೋರಿದ ಮಹಾನ್ ಪುರುಷ ಶ್ರೀ ದೇವರ ದಾಸಿಮಯ್ಯನವರು. ನೇಯ್ಗೆಯಲ್ಲಿಯೇ ದೇವರನ್ನು ಕಾಣುತ್ತಿದ್ದರು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.

ಶಿವಮೊಗ್ಗ: ನೇಯ್ಗೆಯ ಮೂಲಕ ಮನುಕುಲಕ್ಕೆ ಕಾಯಕದ ದಾರಿ ತೋರಿದ ಮಹಾನ್ ಪುರುಷ ಶ್ರೀ ದೇವರ ದಾಸಿಮಯ್ಯನವರು. ನೇಯ್ಗೆಯಲ್ಲಿಯೇ ದೇವರನ್ನು ಕಾಣುತ್ತಿದ್ದರು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.

ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನೇಕಾರ ಸಮುದಾಯಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ದೇವರ ದಾಸಿಮಯ್ಯ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ದಾಸಿಮಯ್ಯನವರು 10 - 11ನೇ ಶತಮಾನದ ಮೊಟ್ಟ ಮೊದಲ ವಚನಕಾರರು. ಇವರನ್ನು ವಚನಗಳ ಸಂಸ್ಥಾಪಕರು ಅಥವಾ ವಚನಗಳ ತಂದೆ ಎಂದೆನ್ನಬಹುದು. ಇವರು ದೇವರ ಅಂಗದಿಂದ ಜನಿಸಿದವರೆಂಬ ನಂಬಿಕೆಯಿಂದ ದೇವಾಂಗ ಎಂದು ಕರೆಯಲಾಗುತ್ತದೆ. ದೇವಲ ಮಹರ್ಷಿ ಎಂದೂ ಕರೆಯಲಾಗುತ್ತದೆ ಎಂದರು.

ಯಾರೇ ಆಗಲೀ ದುಡಿಯದೆ ಬದುಕಬಾರದು ಎನ್ನುತ್ತಿದ್ದ ಅವರು ನೇಯ್ಗೆಯಲ್ಲಿಯೇ ದೇವರನ್ನು ಕಾಣುತ್ತಿದ್ದರು. ಬದುಕಿನ ಬಂಡಿ ಸಾಗಿಸುವ ಪ್ರಕ್ರಿಯೆಯಲ್ಲಿ ಸುಳ್ಳು ಹೇಳಬಾರದು, ವಂಚನೆ ಮಾಡಬಾರದು. ಆಸೆ, ಆಮಿಷಗಳಿಗೆ ಗುರಿಯಾಗಬಾರದು. ಮಾನವನ 9 ರಂಧ್ರಗಳನ್ನು ಹತೋಟಿಯಲ್ಲಿಟ್ಟುಕೊಂಡು ಜೀವನ ನಡೆಸಬೇಕು ಎನ್ನುತ್ತಿದ್ದರು ಎಂದು ತಿಳಿಸಿದರು.

ಕಾಯಕವನ್ನೇ ನಂಬಿ ಬದುಕುತ್ತಿರುವ ಹಿಂದುಳಿದ ನೇಕಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕಿದೆ. ಆಗ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹೀಗೆ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಸಾಹಿತಿ ಹಾಗೂ ಸಂಶೋಧಕ ಬಾಗೂರು ಆರ್.ನಾಗರಾಜಪ್ಪ ವಿಶೇಷ ಉಪನ್ಯಾಸ ನೀಡಿ, ನೇಕಾರ ಸಮಾಜದ ಸಂಸ್ಕೃತಿಯ ಪ್ರತೀಕವಾಗಿ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಗುತ್ತಿದೆ. ಇವರು ಆದ್ಯ ವಚನಕಾರ ಮತ್ತು ಮೊದಲನೇ ಬಂಡಾಯ ವಚನಕಾರರು. ದಾಸಿಮಯ್ಯರ ಕುರಿತಾದ ಆಧಾರಗಳನ್ನು ಪ್ರಾಚೀನ ಶಿಲಾ ಶಾಸನ, ಪುರಾಣಗಳಿಂದ ಪಡೆಯಬಹುದು. 11ನೇ ಶತಮಾನದ ಅವಧಿಯ 7 ಪುಷ್ಕರಿಣಿಗಳು, ಮುದನೂರಿನ 25 ಶಾಸನಗಳಲ್ಲಿ ಕಾಣಬಹುದು ಎಂದು ತಿಳಿಸಿದರು.

ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಟಿ.ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ನೇಕಾರ ಸಮಾಜದವರು ಸಂಘಟಿತರಾಗಬೇಕು. ನಮ್ಮದು ತುಳಿತಕ್ಕೆ ಒಳಗಾದ ಸಮಾಜವಾಗಿದ್ದು ನಮ್ಮ ಸಮುದಾಯಕ್ಕೆ ಇದುವರೆಗೆ ಯಾವುದೇ ಮೀಸಲಾತಿ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಾಗಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಟ್ಟಸಾಲಿ ಸಂಘದ ಅಧ್ಯಕ್ಷ ಕಾಂತೇಶ ಕದರಮಂಡಲಗಿ, ಶಿವಮೊಗ್ಗ ತಹಸೀಲ್ದಾರ್ ರಾಜೀವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌.ಉಮೇಶ್, ಮಲೆನಾಡು ದೇವಾಂಗ ಸಂಘದ ಅಧ್ಯಕ್ಷ ಪಿ.ಆರ್.ಗಿರಿಯಪ್ಪ, ಜಿಲ್ಲಾ ಪದ್ಮಸಾಲಿ ಸಂಘದ ಅಧ್ಯಕ್ಷ ಜೆ.ರಾಮಕೃಷ್ಣಪ್ಪ, ಬನಶಂಕರಿ ಮಹಿಳಾ ಸಂಘದ ಅಧ್ಯಕ್ಷೆ ಜಯಮ್ಮ, ಕುರುಹಿನ ಶೆಟ್ಟಿ ಸಂಘದ ಅಧ್ಯಕ್ಷ ಶಿವಾನಂದ ಶೆಟ್ಟಿ, ಸಮಾಜದ ಮುಖಂಡರಾದ ಸತೀಶ್ ಕುಮಾರ್, ವಿನಾಯಕ್, ನೇಕಾರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು, ಇತರೆ ಮುಖಂಡರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ