ಕಂಪೌಂಡ್ ಗೋಡೆ ನಿರ್ಮಾಣದ ಅಡಿಗಲ್ಲು ಪೂಜೆ ನೆರವೇರಿಸಿ ಸಚಿವ

KannadaprabhaNewsNetwork |  
Published : Mar 01, 2024, 02:15 AM IST
೨೯ಬಿಎಸ್ವಿ೦೧- ಬಸವನಬಾಗೇವಾಡಿಯ ಹೆಸ್ಕಾಂ ವಿಭಾಗೀಯ ಕಚೇರಿಯ ಕಂಪೌಂಡ ಗೋಡೆ ನಿರ್ಮಾಣ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಗುರುವಾರ ಸಂಜೆ ಅಡಿಗಲ್ಲು ನೆರವೇರಿಸಿದರು. | Kannada Prabha

ಸಾರಾಂಶ

ಬಸವನಬಾಗೇವಾಡಿ: ಪಟ್ಟಣದ ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಭಾಗೀಯ ಕಚೇರಿಯ ಕಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಅಡಿಗಲ್ಲು ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಕಂಪೌಂಡ್ ಗೋಡೆ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು.ಮುಂದೆ ಯಾವುದೇ ತೊಂದರೆಯಾಗದಂತೆ ಗುತ್ತಿಗೆದಾರರು ಗಮನ ಹರಿಸುವಂತೆ ಸೂಚಿಸಿದರು.

ಬಸವನಬಾಗೇವಾಡಿ: ಪಟ್ಟಣದ ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಭಾಗೀಯ ಕಚೇರಿಯ ಕಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಅಡಿಗಲ್ಲು ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಕಂಪೌಂಡ್ ಗೋಡೆ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು.ಮುಂದೆ ಯಾವುದೇ ತೊಂದರೆಯಾಗದಂತೆ ಗುತ್ತಿಗೆದಾರರು ಗಮನ ಹರಿಸುವಂತೆ ಸೂಚಿಸಿದರು.ಎಇಇ ಜಿ.ಟಿ.ಬಡಿಗೇರ, ವಿಭಾಗೀಯ ಕಚೇರಿಗೆ 2.25 ಮೀಟರ ಉದ್ದದ ಕಂಪೌಂಡ್ ಗೋಡೆ ಕಾಮಗಾರಿ ₹ 38.5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದರು. ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬೆಂಜಗೆರೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ.ಬಿ.ಸಂಪನ್ನವರ, ಸಿದ್ರಾಮ ಬಿರಾದಾರ, ಸಹಾಯಕ ಅಭಿಯಂತರರಾದ ಎಸ್.ಎಂ.ತಳವಾರ, ಎಸ್.ಎಂ.ಕೆಂಗನಾಳ, ಗುತ್ತಿಗೆದಾರ ರಾಜಶೇಖರ ಚೋರಗಿ, ಸುಭಾಸ ನಾಶಿ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ಪ್ರವೀಣ ಪೂಜಾರಿ, ಮುಖಂಡರಾದ ಶೇಖರ ಗೊಳಸಂಗಿ, ಬಸಣ್ಣ ದೇಸಾಯಿ,ಬಸವರಾಜ ಕೋಟಿ, ಬಸವರಾಜ ರಾಯಗೊಂಡ, ಸಿ.ಎಸ್.ಪಾಟೀಲ, ರವಿ ರಾಠೋಡ, ರವಿ ಚಿಕ್ಕೊಂಡ,ನಿಸಾರ ಚೌಧರಿ, ಎಂ.ಜಿ.ಆದಿಗೊಂಡ, ಸಂಕನಗೌಡ ಪಾಟೀಲ, ಪರಶುರಾಮ ಜಮಖಂಡಿ, ರಮಜಾನ ಹೆಬ್ಬಾಳ,ಕಾಶೀನಾಥ ರಾಠೋಡ, ಪುರಸಭೆ ವ್ಯವಸ್ಥಾಪಕ ವಿರೇಶ ಹಟ್ಟಿ, ಪುರಸಭೆ ಅಭಿಯಂತರ ಸಂತೋಷ ಗಿಡ್ಡಸಣ್ಣನವರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಇತ್ಯರ್ಥಕ್ಕೆ ಕಾಂಗ್ರೆಸ್‌ ಶಾಸಕರಿಂದ ಒತ್ತಡ
ರಾಣಿ ಚನ್ನಮ್ಮ ನಾಟ್ಯ ಮಂದಿರ ಶೀಘ್ರ ಪ್ರಾರಂಭಿಸಿ