ಸಂವಿಧಾನ ಕಾನೂನಿನ ತಾಯಿ: ನ್ಯಾ. ಚಂದ್ರಶೇಖರ

KannadaprabhaNewsNetwork |  
Published : Nov 28, 2025, 02:30 AM IST
ಗಿಡಕ್ಕೆ ನೀರೆರೆಯುವ ಮೂಲಕ  ಸಂವಿಧಾನ ದಿನವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು,ತಾಲೂಕು ಕಾನೂನು ಸೇವಾ ಸಮಿತಿ ಹೊನ್ನಾವರ, ಅಧ್ಯಕ್ಷರಾದ  ಬಿ.ಸಿ. ಚಂದ್ರಶೇಖರ  ಕಾರ್ಯಕ್ರಮ ಉದ್ಘಾಟಿಸಿದರು. | Kannada Prabha

ಸಾರಾಂಶ

ಕಾನೂನಿನ ತಾಯಿಯ ಸ್ಥಾನದಲ್ಲಿ ಸಂವಿಧಾನವಿದೆ. ಸಂವಿಧಾನದ ಉದ್ದೇಶವನ್ನು ಪೀಠಿಕೆಯಲ್ಲಿ ತಿಳಿಸಲಾಗಿದೆ.

ಕನ್ನಡಪ್ರಭ ವಾರ್ತೆ ಹೊನ್ನಾವರ

ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ ಹೊನ್ನಾವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಸಂವಿಧಾನ ದಿನ ಆಚರಿಸಲಾಯಿತು.

ತಮ್ಮ ಕಚೇರಿಯಿಂದ ಆರಂಭವಾದ ಜಾಥಾಕ್ಕೆ ತಹಸೀಲ್ದಾರ್ ಚಾಲನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಶರಾವತಿ ವೃತ್ತಕ್ಕೆ ತಲುಪಿ ಜಾಥಾ ಸಮಾಪ್ತಿಗೊಳಿಸಲಾಯಿತು. ನಂತರ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಬಿ.ಸಿ. ಚಂದ್ರಶೇಖರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಾನೂನಿನ ತಾಯಿಯ ಸ್ಥಾನದಲ್ಲಿ ಸಂವಿಧಾನವಿದೆ. ಸಂವಿಧಾನದ ಉದ್ದೇಶವನ್ನು ಪೀಠಿಕೆಯಲ್ಲಿ ತಿಳಿಸಲಾಗಿದೆ. ದೇಶದ ನಾಗರಿಕರಿಗೆ ಸಂವಿಧಾನ ಬದುಕುವ ರೀತಿಯನ್ನು ತೋರಿಸಿದೆ. ಸರ್ಕಾರ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ನೀಡುವುದು ಅಲ್ಲದೆ ಧರ್ಮಾಚರಣೆಯ ಹಕ್ಕನ್ನು ನೀಡಲು ಸಂವಿಧಾನ ಅಗತ್ಯ. ಸಂವಿಧಾನವನ್ನು ಕಾನೂನಾಗಿ ಮಾಡಿದ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. ಸಂವಿಧಾನದ ಬಗ್ಗೆ ಗೌರವವನ್ನು ಹೊಂದಿರಬೇಕು ಹಾಗೂ ಅದರ ಬಗ್ಗೆ ತಿಳಿದಿರಬೇಕು. ಅನ್ಯಾಯವನ್ನು ಎದುರಿಸಲು, ನಮ್ಮನ್ನು ರಕ್ಷಿಸಿಕೊಳ್ಳಲು ಸಂವಿಧಾನ ಅಗತ್ಯ. ಮನುಷ್ಯ ಸ್ವಾರ್ಥವನ್ನು ಬಿಟ್ಟರೆ ಕಾನೂನು ಬಳಕೆಯ ಅಗತ್ಯತೆ ಕಡಿಮೆ ಆಗುತ್ತದೆ ಎಂದು ನುಡಿದರು.

ಸಂವಿಧಾನದ ಕುರಿತು ಎಸ್.ಡಿ.ಎಂ. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ವಿಶಾಲ್ ಎಸ್, ಸರ್ಕಾರಿ ಸಹಾಯಕ ಅಭಿಯೋಜಕಿ ಸಂಪದಾ ಗುನಗಾ ಉಪನ್ಯಾಸ ನೀಡಿದರು. ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಪಪಂ ಮುಖ್ಯಾಧಿಕಾರಿ ಏಸು ಸುಬ್ಬಣ್ಣ ಬೆಂಗಳೂರು ಅಂಬೇಡ್ಕರ್ ಅವರ ಬಗೆಗಿನ ಹಾಡನ್ನು ಹಾಡಿದರು. ತಹಸೀಲ್ದಾರ್ ಪ್ರವೀಣ್ ಕರಾಂಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸಮಿತಿ ಸದಸ್ಯ ಕಾರ್ಯದರ್ಶಿ ಈರಣ್ಣ ಹುಣಸಿಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿನಾಯಕ್ ಅವಧಾನಿ, ಸಿಪಿಐ ಸಿದ್ದರಾಮೆಶ್ವರ, ಸಮಾಜ ಕಲ್ಯಾಣ ಇಲಾಖೆ ಮುಖ್ಯಸ್ಥ ಪುಟ್ಟೇಗೌಡ, ವಕೀಲರ ಸಂಘದ ಅಧ್ಯಕ್ಷ ವಿ.ಎಂ. ಭಂಡಾರಿ, ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ವಸತಿ ನಿಲಯದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್ -1 ಅಧಿಕಾರಿ ಜಿ.ಸತೀಶ್ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ