ಬಿಪಿಎಲ್ ಕಾರ್ಡ್‌ ರದ್ದುಪಡಿಸುವ ಕ್ರಮವು ಖಂಡನೀಯ

KannadaprabhaNewsNetwork |  
Published : Nov 21, 2024, 01:02 AM IST
೨೦ಕೆಎಲ್‌ಆರ್-೬ಕಲ್ಲಂಡೂರು ಡಾ.ಕೆ.ನಾಗರಾಜ್. | Kannada Prabha

ಸಾರಾಂಶ

ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ಲಂಡೂರು ಡಾ.ಕೆ.ನಾಗರಾಜ್ ಆರೋಪಿಸಿದ್ದಾರೆ.

ಕೋಲಾರ:ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಅನ್ನಭಾಗ್ಯದ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹೊರಟಿದ್ದು ಇದರ ಭಾಗವಾಗಿಯೇ ಬಡವರ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ರದ್ದುಪಡಿಸುವ ಕ್ರಮವು ಖಂಡನೀಯ, ಬಡವರ ಅನ್ನಕ್ಕೆ ಕೈಹಾಕಿದೆ ಕೂಡಲೇ ಈ ಆದೇಶ ವಾಪಸ್ಸು ಪಡೆಯುವಂತೆ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ಲಂಡೂರು ಡಾ.ಕೆ.ನಾಗರಾಜ್ ಒತ್ತಾಯಿಸಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರವು ಮುಂದಾಗಿದೆ. ಯಾವುದೇ ಪರಿಶೀಲನೆಯಾಗಲಿ ತಜ್ಞರ ಮಾರ್ಗದರ್ಶನವಾಗಲಿ ಪಡೆಯದೇ ಅವೈಜ್ಞಾನಿಕವಾದ ಆದೇಶ ಜಾರಿ ಮಾಡಲು ಹೊರಟಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಬಡವರು, ರೈತರು, ಸಾಮಾನ್ಯ ವರ್ಗದ ಜನರು ಆರ್ಥಿಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ