ಕೆಸರು ಗದ್ದೆಯಾದ ಶಹಾಬಾದ-ಜೇವರ್ಗಿ ರಸ್ತೆ

KannadaprabhaNewsNetwork |  
Published : Jul 07, 2025, 11:48 PM IST
ಚಿತ್ರ ಶೀರ್ಷಿಕೆ : ಶಹಾಬಾದ್‌ ರೋಡ್‌ 1 ಶಹಾಬಾದ :ನಗರದ ಜೇವರ್ಗಿ ವೃತ್ತದಿಂದ  ತೊನಸನಹಳ್ಳಿ ಗ್ರಾಮದವರೆಗಿನ ರಸ್ತೆ ಮಧ್ಯೆ ದೊಡ್ಡ ಗಾತ್ರದ ಹೊಂಡದಲ್ಲಿ ವಾಹನಗಳು ಚಲಿಸುತ್ತಿರುವುದು. | Kannada Prabha

ಸಾರಾಂಶ

ನಗರದಲ್ಲಿ ನಿತ್ಯ ಸುರಿಯುತ್ತಿರುವ ಮಳೆಯಿಂದ ರಸ್ತೆಯಲ್ಲಿರುವ ಹೊಂಡಗಳಲ್ಲಿ ನೀರು ತುಂಬಿ ಕೆರೆಯಂತಾಗಿದೆ. ಇದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಶಹಾಬಾದ: ನಗರದಲ್ಲಿ ನಿತ್ಯ ಸುರಿಯುತ್ತಿರುವ ಮಳೆಯಿಂದ ರಸ್ತೆಯಲ್ಲಿರುವ ಹೊಂಡಗಳಲ್ಲಿ ನೀರು ತುಂಬಿ ಕೆರೆಯಂತಾಗಿದೆ. ಇದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಶಹಾಬಾದ ಜೇವರ್ಗಿ ರಸ್ತೆ ಪ್ರಯಾಣ ಎಂದರೆ ಎದೆ ಝಲ್‌ ಎನ್ನುವ ಮಟ್ಟಿಗೆ ರಸ್ತೆ  ತಗ್ಗು-ದಿನ್ನೆಗಳಿಂದ, ಧೂಳಿನಿಂದ ಹಾಗೂ ಮಳೆ ಬಂದರೆ ಕೆಸರು ಗದ್ದೆಯಾಗಿ ಆವರಿಸಿಕೊಳ್ಳುತ್ತದೆ.

ಇಲ್ಲಿ ಸಂಚರಿಸುವ ಜನರು ನಿತ್ಯ ಧೈರ್ಯ ಮಾಡಿ ಹೊರಡುತ್ತಾರೆ. ರಸ್ತೆಯ ಮಧ್ಯೆ ಆಳುದ್ದ ತೆಗ್ಗುಗಳು ನಿರ್ಮಾಣವಾದರೂ ಇಲ್ಲಿಯವರೆಗೆ ಯಾವ ಅಧಿಕಾರಿಗಳು ಗಮನಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಅದರಲ್ಲೂ ನಗರದ ಕನಕದಾಸ ವೃತ್ತದ ಬಳಿಯಿಂದ ತೊನಸನಹಳ್ಳಿ(ಎಸ್) ಗ್ರಾಮದ ಮಧ್ಯೆ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಹಾಗೂ ಸಾರ್ವಜನಿಕರಿಗೆ ಸಂಕಷ್ಟ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ರಸ್ತೆಯ ತುಂಬೆಲ್ಲಾ ನೀರು ತುಂಬಿಕೊಂಡಿದ್ದರಿಂದ ತೆಗ್ಗು ಕಾಣದೇ ಬಿದ್ದ ಘಟನೆಗಳು ನಡೆದಿವೆ. ಇತ್ತೀಚೆಗೆ ಸುರಿದ ಮಳೆಯಿಂದ ನಿತ್ಯ ಸಂಚಾರ ಮಾಡುವ ಲಘು ವಾಹನ ಹಾಗೂ ಭಾರಿ ವಾಹನಗಳಿಂದ ಚಿಕ್ಕ ಪುಟ್ಟ ಹೊಂಡಗಳು ಭಾರಿ ಗಾತ್ರದ ಹೊಂಡಗಳಾಗಿ ಪರಿವರ್ತನೆಯಾಗಿವೆ.

ಈ ರಸ್ತೆ ನಗರದಿಂದ ಹೊರಡುವ ಮುಖ್ಯ ಮಾರ್ಗವಾಗಿರುವುದರಿಂದ  ಸಾವಿರಾರು ಜನರು ಪ್ರಯಾಣಿಸುತ್ತಾರೆ. ಹೀಗಾಗಿ  ರಸ್ತೆಯ ಮೇಲೆ ಸಂಚರಿಸುವ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಸಾಗಬೇಕಿದೆ.

ಹದಗೆಟ್ಟ ರಸ್ತೆಯಿಂದ ಈ ಭಾಗದ ಜನರು ಬಹುದಿನಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕು. ಕನಿಷ್ಠ ಪಕ್ಷ  ಹೊಂಡಗಳನ್ನು ತಾತ್ಕಾಲಿಕವಾಗಿ ಮುಚ್ಚಿಸಬೇಕೆಂದು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ