ಮೂಡುಬಿದಿರೆ ಹೆಸರು ಸೌದಿಯ ಬಸ್‌ನಲ್ಲೂ ಪ್ರಚಾರ!

KannadaprabhaNewsNetwork |  
Published : Mar 26, 2025, 01:31 AM IST
ಬೆದ್ರದ ಹೆಸರು ಸೌದಿಯ ಬಸ್‌ನಲ್ಲೂ ಪ್ರಚಾರ | Kannada Prabha

ಸಾರಾಂಶ

ಸೌದಿಯಲ್ಲಿ ಮೂಡುಬಿದಿರೆ ತಾಲೂಕು ಕಲ್ಲಬೆಟ್ಟಿನ ಮೊಹ್ಮದ್ ಆಲಿ ಎಂಬುವರು ತನ್ನ ಬಸ್‌ ಹಿಂಬದಿಯ ಗಾಜಿನಲ್ಲಿ ‘ಬೆದ್ರ’ (ಮೂಡುಬಿದಿರೆ ಎಂದು ತುಳುವಿನಲ್ಲಿ ಅರ್ಥ) ಎಂದು ಬರೆದು ಹುಟ್ಟೂರಿನ ಪ್ರೀತಿಯನ್ನು ತಾನು ಕೆಲಸ ಮಾಡುತ್ತಿರುವ ದೂರದ ಸೌದಿಯಲ್ಲಿ ಪಸರಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಓಡಾಡುವ ಬಸ್ಸಿನಲ್ಲಿ ಕನ್ನಡದ ಲಿಪಿಯಲ್ಲಿ ‘ಬೆದ್ರ’ ಎಂಬ ಪದ ರಾರಾಜಿಸುತ್ತಿದೆ.!

ಅಲ್ಲಿ ಬಸ್‌ ಓಡಿಸುತ್ತಿರುವ ಮೂಡುಬಿದಿರೆ ತಾಲೂಕು ಕಲ್ಲಬೆಟ್ಟಿನ ಮೊಹ್ಮದ್ ಆಲಿ ಎಂಬುವರು ತನ್ನ ಬಸ್‌ ಹಿಂಬದಿಯ ಗಾಜಿನಲ್ಲಿ ‘ಬೆದ್ರ’ (ಮೂಡುಬಿದಿರೆ ಎಂದು ತುಳುವಿನಲ್ಲಿ ಅರ್ಥ) ಎಂದು ಬರೆದು ಹುಟ್ಟೂರಿನ ಪ್ರೀತಿಯನ್ನು ತಾನು ಕೆಲಸ ಮಾಡುತ್ತಿರುವ ದೂರದ ಸೌದಿಯಲ್ಲಿ ಪಸರಿಸುತ್ತಿದ್ದಾರೆ.

ಸೌದಿಯಲ್ಲಿ ಅವರು ಸ್ವಂತ ಬಸ್ ಹೊಂದಿದ್ದು ಮಕ್ಕಾ, ಮದೀನಾದಂತಹ ಪವಿತ್ರ ಕ್ಷೇತ್ರಕ್ಕೆ ಯಾತ್ರಾರ್ಥಿಗಳನ್ನು ಬಾಡಿಗೆಗೆ ಕರೆದೊಯ್ಯುತ್ತಿದ್ದಾರೆ. ಉಳಿದ ಸಮಯಗಳಲ್ಲಿ ಕಂಪನಿಗಳ ಕೆಲಸಗಳಿಗೂ ಬಸ್ ಬಾಡಿಗೆಗೆ ಕೊಡುತ್ತಿದ್ದಾರೆ. ಹಲವು ವರ್ಷಗಳಿಂದ ಅವರು ಸೌದಿಯಲ್ಲಿ ನೆಲೆಸಿದ್ದಾರೆ.

ಕಲ್ಲಬೆಟ್ಟು ಗ್ರಾಮದ ಪಿಲಿಪಂಜರದವರಾಗಿರುವ ಮೊಹ್ಮದ್ ಹುಟ್ಟೂರಿನಲ್ಲಿ ಹಲವು ವರ್ಷ ‘ಕೊಹಿನೂರು’ ಹೆಸರಿನ ಆಟೋ ಬಾಡಿಗೆಗೆ ಓಡಿಸುತ್ತಿದ್ದರು. ಅದೇ ಹೆಸರನ್ನು ಅವರು ಸೌದಿಯಲ್ಲಿ ಬಸ್‌ಗೆ ಇಟ್ಟಿದ್ದಾರೆ.

‘ಬೆದ್ರ ನನ್ನ ಹುಟ್ಟೂರು. ಇಲ್ಲಿ ಓದಿ, ದೊಡ್ಡವನಾಗಿದ್ದೇನೆ. ನಾನು ಪ್ರಸ್ತುತ ಕೆಲಸ ಮಾಡುತ್ತಿರುವ ಸೌದಿಯ ಜುಬೈಲ್‌ನಲ್ಲಿ. ತುಂಬಾ ಮಂದಿ ಮೂಡುಬಿದಿರೆಯ ಸ್ನೇಹಿತರಿದ್ದಾರೆ. ಹುಟ್ಟೂರಿನ ಪ್ರೀತಿ, ಅಭಿಮಾನದಿಂದ ನನ್ನ ಬಸ್‌ನ ಹಿಂಬದಿ ಗಾಜಿನಲ್ಲಿ ''''''''ಬೆದ್ರ ಎಂಬ ಹೆಸರು ಬರೆದಿದ್ದೇನೆ’ ಎಂದು ಅವರು ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಅವರ ಬೆದ್ರ ಹೆಸರಿನ ಬಸ್‌ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ವಕೀಲರಿಗೆ ಮಾಹಿತಿ ನೀಡದಿದ್ರೆ ಕ್ರಮ : ಹೈ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌