- ಹಾಸ್ಟೆಲ್ ಆರಂಭಕ್ಕೆ ಚಾಲನೆ ನೀಡಿ ಶಾಸಕ ಹರೀಶ್ ಅಭಿಮತ - - - ಹರಿಹರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಸತಿ ನಿಲಯಗಳ ಅವಶ್ಯಕತೆ ಮುಖ್ಯ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗಬಾರದು. ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ಗುಣಮಟ್ಟದ ಅಭ್ಯಾಸಕ್ಕಾಗಿ ಇತರೆ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉತ್ತಮ ಅಂಕಗಳ ಪಡೆದು ತಾಲೂಕು, ಜಿಲ್ಲೆ ಹಾಗೂ ರಾಜ್ಯಕ್ಕೆ ಉತ್ತಮ ಹೆಸರು ತರಬೇಕು. ಉತ್ತಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕೆ.ಎಚ್. ಗಾಯತ್ರಿ, ತಾಲೂಕು ಅಧಿಕಾರಿ ಆಸ್ಮ ಬಾನು, ವಿಸ್ತರಣಾಧಿಕಾರಿ ಎಚ್.ಬಿ. ಪಾಟೀಲ್, ನಿಲಯ ಪಾಲಕ ಪಿ.ರಂಗನಾಥ್, ಎಂ.ಎಸ್. ಹೇಮಾವತಿ, ಎ.ಎಂ. ಯಶೋದಮ್ಮ, ಎಸ್.ಪಿ. ಸುಮಲತಾ, ಎಂ. ಮಲ್ಲಿಕಾರ್ಜುನಯ್ಯ, ಸಿ.ಅನ್ವರ್, ಎಚ್.ಎಂ. ಸಂಪತ್ ಕುಮಾರ್, ಜಿ.ಎಸ್. ಶಿವಕುಮಾರ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.- - - -13ಎಚ್ಆರ್ಆರ್02: