ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗ, ಮಡಿಕೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಡೆದ ನವಜಾತ ಶಿಶು ಆರೈಕೆ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳಾದ ವಿಶೇಷ ನವಜಾತ ಶಿಶು ಆರೈಕೆ ಘಟಕ, ನವಜಾತ ಶಿಶು ಸ್ಥಿರೀಕರಣ ಘಟಕ, ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮತ್ತು ಸ್ತನ್ಯಪಾನ ಸಪ್ತಾಹ, ಈ ಕಾರ್ಯಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದರು.ನ.15 ರಿಂದ ನ.21ರ ವರೆಗೆ ವಿಶ್ವದಾದ್ಯಂತ ನವಜಾತ ಶಿಶು ಆರೈಕೆ ಸಪ್ತಾಹ ಆಚರಿಸಲಾಗುತ್ತಿದೆ. ಶಿಶುಗಳ ಉಳಿವು ಮತ್ತು ಅಭಿವೃದ್ಧಿಗೆ ನವಜಾತ ಶಿಶುವಿನ ಆರೈಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು, ಆರೈಕೆ ಮೂಲಕ ಶಿಶು ಮರಣ ತಡೆಗಟ್ಟುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದ ಸಹ ಪ್ರಾಧ್ಯಾಪಕ ಡಾ.ದಿವ್ಯರಾಣಿ ಮಾತನಾಡಿ, ನವಜಾತ ಶಿಶುಗಳ ಮರಣಕ್ಕೆ ಮುಖ್ಯ ಕಾರಣ ಅವಧಿಪೂರ್ವ ಜನನ, ಜನನದ ಸಮಯದಲ್ಲಿ ತೊಡಕುಗಳು, ತೀವ್ರ ಸೋಂಕು, ಜನ್ಮಜಾತ ಕಾಯಿಲೆಗಳು ಆಗಿವೆ. ಎಲ್ಲಾ ಮಗುವಿನ ಆರೋಗ್ಯದ ಮೇಲೆ ಹೆಚ್ಚು ಗಮನ ಹರಿಸುವುದು ಮತ್ತು ಯಾವುದೇ ತೊಡಕುಗಳಿಲ್ಲದಂತೆ ಆರೋಗ್ಯವನ್ನು ಕಾಪಾಡುವುದು ನಮ್ಮ ಗುರಿ ಎಂದು ಮಾಹಿತಿ ನೀಡಿದರು.
ಒಟ್ಟಾರೆಯಾಗಿ ಜನನವಾದ ತಕ್ಷಣ ಮತ್ತು ಮಗುವಿಗೆ 6 ತಿಂಗಳವರೆಗೆ ಎದೆ ಹಾಲನ್ನು ಮಾತ್ರ ಕುಡಿಸುವುದು. 6 ತಿಂಗಳಿನಿಂದ 2 ವರ್ಷಗಳ ವರೆಗೆ ಎದೆಹಾಲು ಮುಂದುವರಿಸುವುದು, ಸ್ವಚ್ಛತೆಗೆ ಆದ್ಯತೆ, ವಯಸ್ಸಿಗನುಗುಣವಾಗಿ ಲಸಿಕೆ ಹಾಕಿಸುವುದು ಮತ್ತು ಮಕ್ಕಳಿಗೆ ಕಂಡುಬರುವ ಸಣ್ಣಪುಟ್ಟ ಮತ್ತು ಇತರ ಯಾವುದೇ ಕಾಯಿಲೆಗಳಿಗೂ ಮನೆಮದ್ದು ಮಾಡದೆ ಸೊಪ್ಪಿನ ರಸಗಳನ್ನು ಕುಡಿಸಬಾರದು. ತಕ್ಷಣ ವೈದ್ಯರಲ್ಲಿ ಪರೀಕ್ಷಿಸಿ ಚಿಕಿತ್ಸೆ ಪಡೆದುಕೊಳ್ಳಲು ಮಾಹಿತಿ ನೀಡಿದರು.
‘ನವಜಾತ ಶಿಶುಗಳಲ್ಲಿ ಆಂಟಿ ಮೈಕ್ರೋಬಿಯಲ್ ಪ್ರತಿರೋಧಕವನ್ನು ತಡೆಗಟ್ಟಲು ಆಂಟಿ ಮೈಕ್ರೋಬಿಯಲ್ ಔಷಧಗಳನ್ನು ಸಮರ್ಪಕವಾಗಿ ಬಳಸುವುದು’ ಎಂಬ ಘೋಷವಾಕ್ಯದೊಂದಿಗೆ ಸಪ್ತಾಹ ನಡೆಯುತ್ತಿದೆ.