ಕನ್ನಡಪ್ರಭ ವಾರ್ತೆ ಸಿರಿಗೆರೆ
ಸಿರಿಗೆರೆಯಲ್ಲಿ ನಡೆಯುತ್ತಿರುವ ಶಿವಕುಮಾರ್ ಶ್ರೀಗಳ ಶ್ರದ್ಧಾಂಜಲಿ 2ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು, ರಾಜ್ಯದಲ್ಲಿ ಇತ್ತೀಚೆಗೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂದರು.
ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ನೀಡಿರುವ ಸ್ಪಷ್ಟ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಲಿಂಗಾಯತ ಸಮಾಜದ ಗೊಂದಲಗಳನ್ನೆಲ್ಲಾ ಅಧ್ಯಯನ ಮಾಡಿ ಅವರು ತಮ್ಮ ಆಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದರು.ಸಿರಿಗೆರೆಯ ಬೃಹನ್ಮಠವು ತ್ರಿವಿಧ ದಾಸೋಹದ ಚರಿತ್ರೆಯಲ್ಲಿ ಮೈಲಿಗಲ್ಲಾಗಿದೆ. ಶಿವಮೂರ್ತಿ ಶ್ರೀಗಳು ತ್ರಿವಿಧ ದಾಸೋಹದ ಜೊತೆಗೆ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಜಲಋಷಿ, ಆಧುನಿಕ ಭಗೀರಥ, ತಂತ್ರಜ್ಞಾನ ಅರಿತ ಮೇಧಾವಿಯಾಗಿ ಅವರು ನಮ್ಮ ಮುಂದೆ ಇದ್ದಾರೆ ಎಂದರು.
ನಾವು ಆಧುನಿಕ ಯುಗದಲ್ಲಿದ್ದೇವೆ. ಮನುಷ್ಯ ಮನುಷ್ಯನ ಸಂಬಂಧ ವೃದ್ಧಿಯಾಗಬೇಕು. ಆದರೆ ಮನುಷ್ಯರ ಮಧ್ಯೆ ಇರುವ ಸಂಬಂಧಗಳ ಕೊಂಡಿ ಕಳಚುತ್ತಿದೆ. ಮಕ್ಕಳ ಭವಿಷ್ಯದ ಹಿತ ಚಿಂತನೆಯನ್ನೇ ಮಾಡುವ ತಂದೆ ತಾಯಿಯರನ್ನು ಮಕ್ಕಳು ದೂರ ಮಾಡುತ್ತಿದ್ದಾರೆ. ಇಂತಹ ಕೆಲಸಗಳು ನಿಲ್ಲಬೇಕು ಎಂದರು.
ಗ್ರಾಮೀಣ ಭಾಗದಲ್ಲಿನ ಅಕ್ಷರವಂಚಿತ ಜನಾಂಗಕ್ಕೆ ಶಾಲೆಗಳನ್ನು ತೆರೆದು ಅವರಿಗೆ ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ನೀಡಿದವರಲ್ಲಿ ಅವರು ಅಗ್ರಗಣ್ಯರು. ಆ ಪರಂಪರೆಯನ್ನು ಶಿವಮೂರ್ತಿ ಸ್ವಾಮೀಜಿ ಮುಂದುವರೆಸಿದ್ದಾರೆ ಎಂದರು.
ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ದಾವಣಗೆರೆ ನಗರದ ವೃತ್ತವೊಂದಕ್ಕೆ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಹೆಸರನ್ನು ಇಡಲಾಗುವುದು. ಇದನ್ನು ಅವರ ಶ್ರದ್ಧಾಂಜಲಿ ನೆನಪಿನಲ್ಲಿ ಸೆ.24ರಂದು ಅನಾವರಣಗೊಳಿಸಲಾಗುವುದು ಎಂದರು.