ಜಿ.ದೇವರಾಜ ನಾಯ್ಡು
ಮಲೆ ಮಾದೇಶ್ವರ ಬೆಟ್ಟ ವ್ಯಾಪ್ತಿಯ ನಾಗಮಲೆಗೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬಂದು ಹೋಗುವ ಸ್ಥಳದಲ್ಲಿ ದಿನನಿತ್ಯ ಮಲೆ ಮಾದೇಶ್ವರ ಬೆಟ್ಟಕ್ಕೆ ಬಂದಂತ ಭಕ್ತಾದಿಗಳು ನಾಗಮಲೆಗೂ ಸಹ ಭೇಟಿ ನೀಡುತ್ತಿದ್ದರು. ಇತ್ತೀಚೆಗೆ ಅರಣ್ಯ ಇಲಾಖೆ ಚಾರಣಕ್ಕೆ ನಿಷೇಧ ಕಾಯ್ದೆ ಜಾರಿಗೆ ತಂದು ಇಲ್ಲಿನ ಬರುವ ಭಕ್ತರಿಗೆ ನಿಷೇಧ ಹೇರಿರುವುದರಿಂದ ಇಲ್ಲಿನ ಜನತೆಗೆ ವ್ಯಾಪಾರ ವಹಿವಾಟು ಇಲ್ಲದೆ ಇತ್ತ ಕೂಲಿಯೂ ಇಲ್ಲದೆ ಕಂಗಲಾಗಿದ್ದಾರೆ.
ಉದ್ಯೋಗ ನೀಡಿ: ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸವಿಲ್ಲದ ನಿರುದ್ಯೋಗಿಗಳಿಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ನೀಡಲಾಗುತ್ತಿದೆ. ನಾಗಮಲೆ ಮತ್ತು ಪಡಸಲನತ್ತ ಎರಡು ಗ್ರಾಮಸ್ಥರಿಗೆ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಜನ ವಲಸೆ ಹೋಗುವ ಸ್ಥಿತಿಗೆ ಬಂದಿದ್ದಾರೆ. ಜೊತೆಗೆ ಬೇರೆ ಕಡೆ ಹೋಗಿ ಕೆಲಸ ಮಾಡಿ ಬರಲು ಸರಿಯಾದ ರಸ್ತೆ ಸಂಪರ್ಕನಿಲ್ಲ. ಇಂಡಿಗನತ್ತ ಗ್ರಾಮದಿಂದ ನಾಗಮಲೆ ತೇ ಕಣೆ ಪಡಸಲನತ್ತ ಗ್ರಾಮಗಳ ಕೊರಕಲ್ಲು ರಸ್ತೆಗಳು ಮಳೆ ಇದ್ದ ತೀವ್ರ ಹದಗೆಟ್ಟಿದೆ ಹೀಗಾಗಿ ಉದ್ಯೋಗ ಖಾತ್ರಿ ಯೋಜನೆ ಅಡಿ ರಸ್ತೆ ಪಿಚಿಂಗ್ ನಿರ್ಮಾಣ ಮಾಡಲು ಉದ್ಯೋಗ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ ಎರಡು ಗ್ರಾಮಗಳಲ್ಲಿ ಇರುವ ಕೆರೆಗಳಲ್ಲಿ ನೀರು ತುಂಬಿದೆ ಹೀಗಾಗಿ ರಸ್ತೆ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಉದ್ಯೋಗ ಖಾತ್ರಿ ನೀಡುವ ಮೂಲಕ ಕೆಲಸವಿಲ್ಲದೆ ಬರಿದಾಗಿರುವ ಬದುಕಿಗೆ ತುತ್ತಿನ ಚೀಲ ತುಂಬಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕಾಗಿದೆ.ಮೂಲ ನಿವಾಸಿಗಳ ಒತ್ತಾಯ:
ಬದುಕು ಕಟ್ಟಿಕೊಳ್ಳುವುದು ಹೇಗೆ?
ತೆಕಣೆ ಪಡಸಲ ಗ್ರಾಮದಲ್ಲಿ ನಿವಾಸಿಗಳು ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ನೀಡುವಂತೆ ಯಾರು ಅರ್ಜಿ ಸಲ್ಲಿಸಿಲ್ಲ. ಸಲ್ಲಿಸಿದರೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಲ್ಲಿನ ಜನತೆಗೆ ಉದ್ಯೋಗ ಖಾತ್ರಿ ಯೋಜನಯಡಿ ಕ್ರಿಯಾ ಯೋಜನೆ ತಯಾರಿಸಿ ಅನುಕೂಲ ಕಲ್ಪಿಸಲಾಗುವುದು. ಕೆರೆ ಕಟ್ಟೆಗಳು, ಕಾಲುವೆಗಳು ಶಾಲಾ ಕಾಂಪೌಂಡ್ ವಿವಿಧ ಅಭಿವೃದ್ಧಿ ಕೆಲಸ ನಿರ್ವಹಿಸಲು ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಿದರೆ ಉದ್ಯೋಗ ಕಲ್ಪಿಸಲಾಗುವುದು.