ಸಾರ್ವಜನಿಕರು ಕಸ ಎಸೆಯುತ್ತಿದ್ದ ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆ ಎಂಬಲ್ಲಿ ಸಹಯೋಗದಲ್ಲಿ ಜಾಗವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಅದನ್ನು ಸೆಲ್ಫಿ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ಸಾರ್ವಜನಿಕರು ಕಸ ಎಸೆಯುತ್ತಿದ್ದ ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆ ಎಂಬಲ್ಲಿ ಸಾಹಸ್ ಸಂಸ್ಥೆ ಮತ್ತು ಎಚ್ಸಿಎಲ್ ಫೌಂಡೇಶನ್ ಸಹಯೋಗದಲ್ಲಿ ಜಾಗವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಅದನ್ನು ಸೆಲ್ಫಿ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ. ಇಲ್ಲಿ ಪ್ರವಾಸಿಗರಿಗೆ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.ಈ ಸೆಲ್ಫಿ ಪಾಯಿಂಟನ್ನು ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ವಿ. ಆಚಾರ್ಯ ಉದ್ಘಾಟಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಶಿಧರ್ ವಾಗ್ಳೆ, ಸದಸ್ಯರಾದ ರಾಜೇಂದ್ರ ಶೆಟ್ಟಿ, ಗುರುರಾಜ್ ಭಟ್, ರಂಜನಿ ಹೆಗ್ಡೆ, ಸಾಹಸ್ ಸಂಸ್ಥೆಯ ಮೇಲ್ವಿಚಾರಕಿ ವಿಶಾಲ, ಸ್ವಯಂ ಸೇವಕರಾದ ಶೋಧನ್, ಅವಿನಾಶ್, ಸಾತ್ವಿಕ್, ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ ಲೆಕ್ಕಸಹಾಯಕ ಸದಾನಂದ ಪೂಜಾರಿ, ಎಸ್ಎಲ್ಆರ್ಎಂ ಮೇಲ್ವಿಚಾರಕಿ ಧನಲಕ್ಷ್ಮೀ ಮತ್ತು ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.ಸಾಹಸ್ ಸಂಸ್ಥೆಯ ವಿಶಾಲ ಮತ್ತು ಸ್ವಯಂ ಸೇವಕರನ್ನು ಗ್ರಾಮ ಪಂಚಾಯಿತಿ ಪರವಾಗಿ ಗೌರವಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.