ಕನ್ನಡಪ್ರಭ ವಾರ್ತೆ ಭದ್ರಾವತಿ
ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದ ದಲಿತ ಮುಖಂಡರು, ಅರಹತೊಳಲು ಗ್ರಾಮದ ಸರ್ವೆ ನಂ.೦೭ರಲ್ಲಿ ಇರುವ ೪ ಎಕರೆ ೦೫ ಗುಂಟೆ ಜಮೀನಿನ ಮಾಲೀಕರಿಂದ ನಾಗಪ್ಪ ಬಿನ್ ಮರಿಯಣ್ಣನವರ ಮರಣ ಹೊಂದಿರುವ ವಿಚಾರ ತಿಳಿದು ಸಂಬಂಧಪಟ್ಟ ಜಮೀನಿನ ವಾರಸುದಾರರಾದ ಹನುಮಂತಪ್ಪ ಬಿನ್ ಲೇಟ್ ಮರಿಯಣ್ಣನವರಿಗೆ ನೋಟಿಸ್ ನೀಡಿರುತ್ತಾರೆ. ಅದರಂತೆ ಹನುಮಂತಪ್ಪನವರು ಪೌತಿ ಖಾತೆಗೆ ಸಂಬಂಧಪಟ್ಟ ದಾಖಲೆಗಳು ಹಾಗೂ ವಂಶವೃಕ್ಷದ ಮೂಲಕ ದಿನಾಂಕ: ೨೭-೧೦-೨೦೨೫ರಂದು ಜಂಟಿ ಖಾತೆ ಮಾಡಲು ಹೊಳೆಹೊನ್ನೂರು ನಾಡ ಕಚೇರಿಯ ಮೂಲಕ ತಹಸೀಲ್ದಾರ್ರವರಿಗೆ ಮನವಿ ಸಲ್ಲಿಸುತ್ತಾರೆ. ಆದರೆ 2025ರ ನ.6ರಂದು ಅರಹತೋಳಲು ಗ್ರಾಮದ ಸರ್ವೆ ನಂ: ೭ರಲ್ಲಿ ೪ ಎಕರೆ ೫ ಗುಂಟೆ ಜಮೀನಿನ ಪೈಕಿ ೨ ಎಕರೆ ೩೯ ಗುಂಟೆ ಜಮೀನು ಪಾಲಾಕ್ಷಪ್ಪ ಗೌಡ ಜಿ.ಎಸ್ ಬಿನ್ ಸಂಗಪ್ಪಗೌಡನಿಗೆ ಆದ ನನಗೆ ಪಿತ್ರಾರ್ಜಿತವಾಗಿ ಬಂದಿರುತ್ತದೆ ಎಂದು ತಕಾರಾರು ಅರ್ಜಿ ಸಲ್ಲಿಸಿದ್ದಾರೆ. ಪೌತಿಖಾತೆಗೆ ಅರ್ಜಿ ಸಲ್ಲಿಸಿರುವ ಹನುಮಂತಪ್ಪನಿಗೂ ಮತ್ತು ಪಾಲಾಕ್ಷಪ್ಪ ಗೌಡ ಜಿ.ಎಸ್ ರವರಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಮೂಲ ಖಾತೆದಾರರಾದ ನಾಗಪ್ಪನವರು ಪರಶಿಷ್ಟ ಪಂಗಡ ನಾಯಕ ಸಮುದಾಯಕ್ಕೆ ಸೇರಿದವರಾಗಿರುತ್ತಾರೆ. ಪಾಲಾಕ್ಷಪ್ಪ ಗೌಡ ಜಿ.ಎಸ್ರವರು ಲಿಂಗಾಯತ ಗೌಡ ಸಮುದಾಯಕ್ಕೆ ಸೇರಿದವರಾಗಿರುತ್ತಾರೆ. ಜಮೀನು ಕಬಳಿಸುವ ದುರುದ್ದೇಶದಿಂದ ತಕಾರಾರು ಅರ್ಜಿದಾರರಾದ ಪಾಲಾಕ್ಷಪ್ಪ ಗೌಡ ಜಿ.ಎಸ್ರವರು ತಮ್ಮ ಕುಟುಂಬದ ಆಸ್ತಿಯನ್ನು ವಿಭಾಗ ಪತ್ರ ಮಾಡಿಕೊಳ್ಳುವ ಸಂದರ್ಭದಲ್ಲಿ ಅರಹತೊಳಲು ಗ್ರಾಮದ ಸರ್ವೆ ನಂ. ೭ರಲ್ಲಿ ೨ ಎಕರೆ ೩೯ ಗುಂಟೆ ಜಮೀನು ನಮಗೆ ಪಿತ್ರಾರ್ಜಿತವಾಗಿ ಬಂದಿರುತ್ತದೆ ಎಂದು ಸುಳ್ಳು ದಾಖಲೆ ಸೃಷ್ಟಿ ಮಾಡಿಕೊಂಡು ತಹಸೀಲ್ದಾರ್ ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆಂದು ದೂರಿದರು.ಈ ನಡುವೆ ತಹಸೀಲ್ದಾರ್ ಸಂಬಂಧಪಟ್ಟ ಅಧಿಕಾರಿಗಳಿಂದ ನಿಖರವಾದ ಮಾಹಿತಿ ಪಡೆಯದೆ ದಲಿತ ಸಮುದಾಯದ ಕುಟುಂಬಸ್ಥರಿಗೆ ಆಧಾರವಾಗಿದ್ದ ಜಮೀನನ್ನು ಕಿತ್ತುಕೊಂಡು ಪಾಲಾಕ್ಷಪ್ಪ ಗೌಡ ಜಿ.ಎಸ್ ರವರಿಗೆ ೨ ಎಕರೆ ೩೯ ಗುಂಟೆ ಜಮೀನು ಖಾತೆ ಮಾಡಲು ನೀಡಿರುವ ಆದೇಶವನ್ನು ತಕ್ಷಣ ರದ್ದುಪಡಿಸಬೇಕೆಂದು ಆಗ್ರಹಿಸಿದರು. ತಪ್ಪಿದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಜಿಲ್ಲಾ ಸಂಚಾಲಕ ಚಿನ್ನಯ್ಯ, ಜಿಲ್ಲಾ ಅಂಗವಿಕಲರ ವಿಭಾಗದ ಕಾಣಿಕ್ರಾಜ್, ಜಿಲ್ಲಾ ಸಂಘಟನಾ ಸಂಚಾಲಕ ಕೆ. ರಂಗನಾಥ್, ತಾಲೂಕು ಸಂಚಾಲಕ ಸಂದೀಪ್ ಆರ್., ಎನ್.ಪ್ರಸನ್ನ ಕುಮಾರ್ ಪಾಲ್ಗೊಂಡಿದ್ದರು.