ಕಾಯಕ, ದಾಸೋಹ, ಹುಟ್ಟು ಹಾಕಿದ ವಚನಕಾರರು: ಚಂದ್ರಪ್ರಭಾ

KannadaprabhaNewsNetwork |  
Published : Mar 02, 2026, 02:45 AM IST
ಸಂಡೂರಿನ ಶ್ರೀಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕಸಾಪ ವತಿಯಿಂದ ಸಾಧಕರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಗುರುವಾರ ಕಸಾಪ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ

ಸಂಡೂರು: ಸಮಾಜದಲ್ಲಿ ಕಾಯಕ, ದಾಸೋಹ, ಧಾರ್ಮಿಕ ಸಮಾನತೆಯನ್ನು ಹುಟ್ಟು ಹಾಕಿದವರು ವಚನಕಾರರು ಎಂದು ಬಿಕೆಜಿ ಗ್ಲೋಬಲ್ ಶಾಲೆಯ ಕನ್ನಡ ಉಪನ್ಯಾಸಕ ಚಂದ್ರಪ್ರಭಾ ಕೆ.ವೈ. ತಿಳಿಸಿದರು.

ಪಟ್ಟಣದ ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಗುರುವಾರ ಕಸಾಪ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕೆ.ಎಸ್. ಅನ್ನಪೂರ್ಣಮ್ಮ ಸಂಗಪ್ಪ ದತ್ತಿಯ ದಾನಿಗಳಾದ ಕೆ.ಎಸ್. ವೀರಭದ್ರಪ್ಪ ಸಂಗಪ್ಪ ಅವರ ದತ್ತಿ ವಿಷಯ ವಿಶ್ವಗುರು ಬಸವಣ್ಣ ಮತ್ತು ಮರಿಬಸಮ್ಮ ಚಿತ್ರಿಕಿ ದತ್ತಿಯ ದಾನಿಗಳಾದ ತಿಪ್ಪಣ್ಣ ಚಿತ್ರಿಕಿ ಅವರ ವಿಷಯ ವಚನ ಸಾಹಿತ್ಯ ಕುರಿತು ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಘಟಕದ ಅಧ್ಯಕ್ಷ ಬಿ. ನಾಗನಗೌಡ ಹಾಗೂ ಸಾನ್ನಿಧ್ಯ ವಹಿಸಿದ್ದ ಸಂಡೂರಿನ ಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಮಾತನಾಡಿದರು.

ಸನ್ಮಾನ:

ಕಾರ್ಯಕ್ರಮದಲ್ಲಿ ಕಸಾಪದಿಂದ ೨೦೨೫-೨೬ನೇ ಸಾಲಿನ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ತಾಳೂರಿನ ಬಂಡ್ರಿ ಲಿಂಗಪ್ಪ, ಬಳ್ಳಾರಿ ಜಿಲ್ಲಾ ರಾಜ್ಯೋತ್ಸವ ಸಾಧಕರ ಪ್ರಶಸ್ತಿ ಪುರಸ್ಕೃತರಾದ ಸಿ.ಎಂ. ಶಿಗ್ಗಾವಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸಾಹಿತ್ಯ ಶ್ರೀ ಪ್ರಶಸ್ತಿ ಪುರಸ್ಕೃತರಾದ ತೋರಣಗಲ್ಲಿನ ಅಬ್ದುಲ್ ಹೈ, ೨೦೨೫ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಾಂತಿಬಾಯಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರಾದ ಸಿ.ಎಂ. ಶಿಗ್ಗಾವಿ ಹಾಗೂ ಅಬ್ದುಲ್ ಹೈ ಅವರು ಮಾತನಾಡಿದರು.

ಶಿಕ್ಷಕಿ ಶಶಿಕಲಾ ಚಂದ್ರಶೇಖರ್ ಅವರು ಪ್ರಾರ್ಥಿಸಿದರು. ಶಿಕ್ಷಕ ಜಾವೀದ್ ಅವರು ಸ್ವಾಗತಿಸಿದರು. ಹೆಚ್.ಎನ್. ಭೋಸ್ಲೆ ಅವರು ಸಾಧಕರ ಪರಿಚಯ ಮಾಡಿಕೊಟ್ಟರು. ಕಸಾಪ ಗೌರವ ಕಾರ್ಯದರ್ಶಿ ಜಿ. ವೀರೇಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಎಂ.ಟಿ. ರಾಥೋಡ್ ಅವರು ವಂದಿಸಿದರು.

ಛತ್ರಪತಿ ಶಿವಾಜಿ ವಿದ್ಯಾಮಂದಿರದ ಮುಖ್ಯಶಿಕ್ಷಕ ಎಸ್. ವಿಶ್ವನಾಥ್, ನಿವೃತ್ತ ಉಪನ್ಯಾಸಕ ಬಿ.ಆರ್. ಮಸೂತಿ, ಸುಮಂಗಳಮ್ಮ ಚಿತ್ರಿಕಿ, ವೆಸ್ಕೊ ಕಂಪನಿಯ ಅಧಿಕಾರಿ ಮಲ್ಲಿಕಾರ್ಜುನ, ಕಸಾಪ ಸದಸ್ಯರಾದ ಎ.ಎಂ. ಶಿವಮೂರ್ತಿಸ್ವಾಮಿ, ವಿದ್ಯಾಮಂದಿರದ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂಗಳು ಎಲ್ಲಿಯೂ ಯಾರ ಮೇಲೆ ದಾಳಿ ಮಾಡಿಲ್ಲ: ಸುಧೀರ ಸಿಂಹ ಘೋರ್ಪಡೆ
ಮಾನವ ಧರ್ಮದ ಉನ್ನತಿಗೆ ಶ್ರಮಿಸಿದ ರೇಣುಕಾಚಾರ್ಯರು