ವಿಶ್ವಕರ್ಮ ಸಮುದಾಯಕ್ಕೆ ಧಕ್ಕದ ರಾಜಕೀಯ ಸ್ಥಾನಮಾನ

KannadaprabhaNewsNetwork |  
Published : Sep 30, 2024, 01:22 AM IST
2. ಹೊಸಕೋಟೆ ನಗರದಲ್ಲಿ ತಾಲೂಕು ವಿಶ್ವಕರ್ಮ ಸಂಘದಿAದ ನಡೆದ ಭಗವಾನ್ ವಿಶ್ವಕರ್ಮರ ಉತ್ಸವ ಮೂರ್ತಿ ಮೆರವಣಿಗೆಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು. | Kannada Prabha

ಸಾರಾಂಶ

ಹೊಸಕೋಟೆ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ವಿಶ್ವಕರ್ಮ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ಧಕ್ಕದಿರುವುದು ಬೇಸರದ ಸಂಗತಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ಹೇಳಿದರು.

ಹೊಸಕೋಟೆ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ವಿಶ್ವಕರ್ಮ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ಧಕ್ಕದಿರುವುದು ಬೇಸರದ ಸಂಗತಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ತಾಲೂಕು ವಿಶ್ವಕರ್ಮ ಸಂಘದಿಂದ ಆಯೋಜಿಸಿದ್ದ 9ನೇ ವರ್ಷದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಶ್ವಕರ್ಮ ಸಮಾಜದ ಅಭಿವೃದ್ಧಿಯಾಗಬೇಕಾದರೆ ಸಮುದಾಯದಲ್ಲಿ ಹೊಂದಾಣಿಕೆ ಇರಬೇಕು. ದೇಶಕ್ಕೆ 5 ಸಾವಿರ ವರ್ಷಗಳ ಇತಿಹಾಸ ಇದ್ದು ವಿಶ್ವಕರ್ಮ ಸಮುದಾಯಕ್ಕೆ ವಿಶೇಷ ಸ್ಥಾನಮಾನ ಇದೆ. ೭೫ ವರ್ಷಗಳಿಂದ ದೇಶದಲ್ಲಿ ಇಬ್ಬರು ಶಾಸಕರನ್ನು ಸೃಷ್ಟಿ ಮಾಡುವ ಕೆಲಸ ನಮ್ಮ ಸಮುದಾಯದಿಂದ ಆಗಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ರಾಜಕೀಯ ಸ್ಥಾನಮಾನಕ್ಕಾಗಿ ಹೋರಾಡಬೇಕಿದೆ ಎಂದರು.

ಕಂದಾಯ ಇಲಾಖೆ ನಿವೃತ್ತ ಜಂಟಿ ಕಾರ್ಯದರ್ಶಿ ಮಾಳಿಗಾಚಾರ್ ಮಾತನಾಡಿ, ಸಮುದಾಯ ಕುಲ ಕಸುಬಿನ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು. ರಾಜಕೀಯವಾಗಿ ಅಧಿಕಾರ ಇದ್ದರೆ, ಸಮಾಜಕ್ಕೆ ಏನಾದರು ಮಾಡಬಹುದು ಎಂದು ಹೇಳಿದರು.

ಟಿಎಪಿಸಿಎಂಎಸ್ ನಿರ್ದೇಶಕ ಭೋದನಹೊಸಹಳ್ಳಿ ಆನಂದಾಚಾರಿ ಮಾತನಾಡಿ, ವಿಶ್ವಕರ್ಮ ಜಯಂತಿಯನ್ನು ಸರ್ಕಾರದ ಮಟ್ಟದಲ್ಲಿ ಕೇವಲ ನಾಲ್ಕು ಗೋಡೆ ಮಧ್ಯೆ ಆಚರಣೆ ಮಾಡಿ ಬಿಡುವುದು ಬೇಡ ಎನ್ನುವ ದೃಷ್ಟಿಯಿಂದ ವಿಜೃಂಭಣೆಯಿಂದ ತಾಲೂಕಿನ ಸಮುದಾಯವನ್ನು ಒಟ್ಟಿಗೆ ಸೇರಿಸಿ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಶರತ್ ಬಚ್ಚೇಗೌಡ, ಶ್ರೀ ಗಣೇಶ್ ಮಹಾ ಸ್ವಾಮೀಜಿ, ಶ್ರೀ ಕಾಶಿ ವಿಶ್ವನಾಥ ಆಚಾರಿ, ಗೋವಿಂದಮ್ಮ, ವಿನಾಯಕ್ ಆಚಾರಿ, ಸುರೇಶ್ ಆಚಾರಿ, ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!