ಮಕ್ಕಳ ರಕ್ಷಣೆಯೂ ಶಾಲೆಯ ಜವಾಬ್ದಾರಿ

KannadaprabhaNewsNetwork |  
Published : Dec 26, 2025, 01:30 AM IST
25ಎಚ್ಎಸ್ಎನ್16 : ಚನ್ನರಾಯಪಟ್ಟಣ ತಾಲ್ಲೂಕಿನ ಖಾಸಗಿ ಶಾಲೆಯ ದಾಖಲಾತಿಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಪರಿಶೀಲಿಸಿದರು. | Kannada Prabha

ಸಾರಾಂಶ

ನಿರ್ಲಕ್ಷ್ಯ ತೋರಿದ ಶಾಲೆಯ ಮುಖ್ಯ ಶಿಕ್ಷಕ, ಸಂಸ್ಥೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಶಾಲಾ ದಾಖಲಾತಿಗಳನ್ನು ಪರಿಶೀಲಿಸುವಲ್ಲಿ ವಿಫಲರಾಗಿರುವ ಶಿಕ್ಷಣ ಇಲಾಖೆಯ ಇಸಿಒ ಮತ್ತು ಸಿಆರ್‌ಪಿ ಅವರೇ ಕಾರಣ ಕೇಳಿ ನೋಟಿಸ್ ನೀಡಬೇಕು. ಶಾಲೆಗೆ ಸಂಬಂಧಿಸಿದ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಡಿಡಿಪಿಐ ಬಲರಾಂ ಅವರಿಗೆ ಸೂಚಿಸಿದರು. ಆಯೋಗಕ್ಕೆ ವಾಹನ ಚಾಲಕನನ್ನು ಕೂಡಲೇ ಬಂಧಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ ಅವರು ಮಕ್ಕಳ ಚಲನವಲನದ ಕುರಿತು ಶಿಕ್ಷಕರು ಮತ್ತು ಪೋಷಕರು ಗಮನಹರಿಸಬೇಕು ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ರಕ್ಷಣೆ ನೀಡುವುದು ಶಾಲೆಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಲಾ ವಾಹನ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮಗುವಿಗೆ ಜನ್ಮ ನೀಡಿರುವ ವಿದ್ಯಾರ್ಥಿನಿ ಕಲಿಯುತ್ತಿರುವ ಖಾಸಗಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ೧ರಿಂದ ೭ನೇ ತರಗತಿಯವರೆಗೆ ಶಾಲಾ ದಾಖಲಾತಿ ಸರಿ ಇದೆ. ಪ್ರೌಢಶಾಲೆಯ ದಾಖಲೆ ಸಮರ್ಪಕವಾಗಿಲ್ಲ. ಶಾಲಾ ವಾಹನಗಳಲ್ಲಿ ಸಿಸಿಟಿವಿ ಕ್ಯಾಮರಾ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ವಾಹನಕ್ಕೆ ಜಿಪಿಎಸ್ ವ್ಯವಸ್ಥೆ ಇಲ್ಲ. ವಾಹನಕ್ಕೆ ಆಯಾ ನೇಮಿಸಿಲ್ಲ. ಒಟ್ಟಾರೆ ಕರ್ನಾಟಕ ಮೋಟಾರ್ ವಾಹನ ಕಾಯ್ದೆಯ ನಿಯಮ ಮತ್ತು ಸುಪ್ರೀಂ ಕೋರ್ಟ್ ರೂಪಿಸಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ. ಇದರ ಬಗ್ಗೆ ಸಾರಿಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ನಿರ್ಲಕ್ಷ್ಯ ತೋರಿದ ಶಾಲೆಯ ಮುಖ್ಯ ಶಿಕ್ಷಕ, ಸಂಸ್ಥೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಶಾಲಾ ದಾಖಲಾತಿಗಳನ್ನು ಪರಿಶೀಲಿಸುವಲ್ಲಿ ವಿಫಲರಾಗಿರುವ ಶಿಕ್ಷಣ ಇಲಾಖೆಯ ಇಸಿಒ ಮತ್ತು ಸಿಆರ್‌ಪಿ ಅವರೇ ಕಾರಣ ಕೇಳಿ ನೋಟಿಸ್ ನೀಡಬೇಕು. ಶಾಲೆಗೆ ಸಂಬಂಧಿಸಿದ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಡಿಡಿಪಿಐ ಬಲರಾಂ ಅವರಿಗೆ ಸೂಚಿಸಿದರು. ಆಯೋಗಕ್ಕೆ ವಾಹನ ಚಾಲಕನನ್ನು ಕೂಡಲೇ ಬಂಧಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ ಅವರು ಮಕ್ಕಳ ಚಲನವಲನದ ಕುರಿತು ಶಿಕ್ಷಕರು ಮತ್ತು ಪೋಷಕರು ಗಮನಹರಿಸಬೇಕು ಎಂದರು. ಡಿಡಿಪಿಐ ಬಲರಾಂ, ಡಿವೈಎಸ್ಪಿ ಕುಮಾರ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಸರ್ಕಸ್‌ ಮಧ್ಯೆ ಇಂದು ಸಿದ್ದು ದೆಹಲಿಗೆ - ನಾಳೆ ಸಿಡಬ್ಲುಸಿ ಸಭೆಯಲ್ಲಿ ಸಿಎಂ ಭಾಗಿ
ಭೂಪರಿವರ್ತನೆ ಇನ್ನು ಅತಿ ಸರಳ